ಬ್ರೇಕಿಂಗ್ ನ್ಯೂಸ್
12-11-20 02:51 pm Udupi Correspondent ಕರಾವಳಿ
ಉಡುಪಿ, ನ.12: ಮಾಜಿ ಸಚಿವ ಬಸನಗೌಡ ಯತ್ನಾಳ್ ಸರಕಾರಕ್ಕೆ ಮುಜುಗರ ತರುವ ಹೇಳಿಕೆ ನೀಡುತ್ತಿರುವ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕ್ರಮ ತೆಗೆದುಕೊಳ್ಳುವ ಮಾತನಾಡಿದ್ದಾರೆ.
ಉಡುಪಿಯಲ್ಲಿ ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಅವರು, ಪಕ್ಷದಲ್ಲಿ ಯಾರು ಕೂಡ ಪಕ್ಷದ ಸೀಮಿತ, ನಿಯಮಗಳನ್ನು ಮೀರಿ ವರ್ತನೆ ಮಾಡಬಾರದು. ಈ ಬಗ್ಗೆ ಪಕ್ಷದ ವಿಚಾರ, ಸಿದ್ಧಾಂತ ಹಾಗೂ ನಿಯಮದ ಆಧಾರದಲ್ಲಿ ಮಾತುಕತೆ ಮಾಡಿದ್ದೇವೆ. ಅವರ ವಿರುದ್ಧ ಪಕ್ಷದ ಒಳಗೆ ಏನು ತೀರ್ಮಾನ ತೆಗೆದುಕೊಳ್ಳಬೇಕು ಅದನ್ನು ಕೈಗೊಂಡಿದ್ದೇವೆ ಎಂದಿದ್ದಾರೆ.

ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲಿನ ದಾಳಿಗೆ ಸಂಬಂಧಿಸಿ ಸಂಪತ್ರಾಜ್ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸ್ ತನಿಖೆಯಲ್ಲೂ ಸಂಪತ್ ರಾಜ್ ಕೈವಾಡ ಇರುವುದು ಸಂಪೂರ್ಣ ಬಹಿರಂಗ ಆಗಿದೆ. ಸಂಪತ್ರಾಜ್ ನಾಪತ್ತೆಯಾಗಿದ್ದು ಅದರ ಬಗ್ಗೆ ಕಾಂಗ್ರೆಸ್ ಪಕ್ಷ ಉತ್ತರ ಕೊಡಬೇಕಾಗಿದೆ ಎಂದು ಅವರು ಹೇಳಿದರು.
ಡಿಕೆಶಿಗೆ ನೈತಿಕತೆ ಇದ್ದರೆ ಸಂಪತ್ರಾಜ್ಗೆ ಶರಣಾಗುವಂತೆ ಹೇಳಬೇಕು. ಸಂಪತ್ ರಾಜ್ ತಪ್ಪಿಸಿಕೊಳ್ಳುವುದರ ಹಿಂದೆ ಸಿದ್ದರಾಮಯ್ಯ ಹಾಗೂ ಡಿಕೆಶಿ ಪ್ರಭಾವ ಇದೆ. ಸಂಪತ್ ರಾಜ್ನನ್ನು ಸರಕಾರ ಬಂಧನ ಮಾಡಲೇಬೇಕು ಎಂದು ನಳಿನ್ ಒತ್ತಾಯಿಸಿದರು.

ಉಪಚುನಾವಣೆ ಸೋಲಿಗೆ ಡಿಕೆಶಿ ಮತ್ತು ಸಿದ್ದರಾಮಯ್ಯ ಕಾರಣ ಎಂಬುದಾಗಿ ಕಾರ್ಯಕರ್ತರು ಹೈಕಮಾಂಡಿಗೆ ಪತ್ರ ಬರೆದಿರುವುದು ಬಹಿರಂಗ ಆಗಿದೆ. ಆರ್.ಆರ್. ನಗರ ಸೋಲಬೇಕು ಎಂಬುದಾಗಿ ಸಿದ್ದರಾಮಯ್ಯ, ಶಿರಾ ಸೋಲಬೇಕು ಎಂಬುದಾಗಿ ಡಿಕೆಶಿ ಒಳರಾಜಕಾರಣ ಮಾಡಿದ್ದಾರೆ. ಇದು ಬಿಜೆಪಿಗೆ ಲಾಭ ಆಗಿದೆ. ಈ ವಿಚಾರ ಕಾರ್ಯಕರ್ತರಿಗೆ ಗೊತ್ತಾಗಿ ಅಸಮಾಧಾನ ಭುಗಿಲೆದ್ದಿದೆ ಎಂದು ಅವರು ತಿಳಿಸಿದರು.
ಸಚಿವ ಸಂಪುಟ ವಿಸ್ತರಣೆಯೇ ಅಥವಾ ಸರ್ಜರಿಯೇ ಎಂಬುದು ಮುಖ್ಯಮಂತ್ರಿಗೆ ಬಿಟ್ಟ ವಿಚಾರ. ಕರಾವಳಿಗೆ ಹೆಚ್ಚಿನ ಸಚಿವ ಸ್ಥಾನ ಸಿಗಬಹುದೇ ಅಥವಾ ಕಳೆದುಕೊಳ್ಳಬಹುದೇ ಎಂಬ ಪ್ರಶ್ನೆಗೆ, ಮುಖ್ಯಮಂತ್ರಿ ಎಲ್ಲವನ್ನು ಗಮನಿಸುತ್ತಾರೆ. ಮುಂದಿನ ಎರಡೂವರೆ ವರ್ಷಗಳ ಕಾಲ ಉತ್ತಮ ಆಡಳಿತ ನಡೆಸಲು ಮತ್ತು ರಾಜ್ಯದ ಹಿತದೃಷ್ಠಿಯಿಂದ ಸರಿಯಾದ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಅವರು ನಮಗಿಂತ ಹಿರಿಯರಾಗಿದ್ದು ಅವರಿಗೆ ನಾವು ಸಲಹೆ ನೀಡಬೇಕಾಗಿಲ್ಲ ಎಂದು ಹೇಳಿದರು.
Will take serious action against Basangouda Patil Yatnal said BJP state president Naleen Kumar Kateel at Udupi.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm