ಬ್ರೇಕಿಂಗ್ ನ್ಯೂಸ್
26-10-23 04:03 pm Mangalore Correspondent ಕರಾವಳಿ
ಮಂಗಳೂರು, ಅ.26: ಕುದ್ರೋಳಿ ಕ್ಷೇತ್ರದ ದಸರಾ ಶೋಭಾ ಯಾತ್ರೆಯಲ್ಲಿ ಸೌಜನ್ಯಾ ಫೋಟೊ ಇದೆಯೆಂಬ ಕಾರಣಕ್ಕೆ ನಿರಾಕರಿಸಲ್ಪಟ್ಟ ಟ್ಯಾಬ್ಲೋ ವಾಮಂಜೂರು ಶಾರದೋತ್ಸವದಲ್ಲಿ ಪಾಲ್ಗೊಂಡು ಜನ ಮನ್ನಣೆ ಪಡೆದಿದೆ.
ಮಂಗಳೂರು ದಸರಾ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲು ರೆಡಿಯಾಗಿ ಬಂದಿದ್ದ ದೇವಿ ಮಹಾತ್ಮೆ ಕಥಾನಕ ಹೊಂದಿದ್ದ ಸ್ತಬ್ಧಚಿತ್ರಕ್ಕೆ ಕೊನೆಕ್ಷಣದಲ್ಲಿ ನಿರಾಕರಿಸಲಾಗಿತ್ತು. ಕುದ್ರೋಳಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ವಿರೋಧ ವ್ಯಕ್ತಪಡಿಸಿ, ಪೊಲೀಸರ ಮೂಲಕ ತಡೆಯುವ ಯತ್ನ ಮಾಡಿದ್ದರು. ಪೊಲೀಸರು ಅವಕಾಶ ನಿರಾಕರಿಸಿದ್ದರಿಂದ ಟ್ಯಾಬ್ಲೋ ಉರ್ವಾದಲ್ಲಿಯೇ ಉಳಿದುಕೊಂಡಿತ್ತು. ಇದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.






ಮಾಹಿತಿ ತಿಳಿದ ವಾಮಾಂಜೂರು ಸಾರ್ವಜನಿಕ ಶಾರದಾ ಮಹೋತ್ಸವ ಪೂಜಾ ಸಮಿತಿ ಸೌಜನ್ಯಪರ ಹೋರಾಟಗಾರನ್ನು ಸಂಪರ್ಕಿಸಿ ವಾಮಂಜೂರು ಸಾರ್ವಜನಿಕ ಶಾರದೋತ್ಸವದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಿತ್ತು. ಇದರಂತೆ, ಬುಧವಾರ ಸಂಜೆ ವಾಮಂಜೂರಿನಲ್ಲಿ ಆಯೋಜಿಸಿದ್ದ ಶಾರದಾ ಮಾತೆಯ ಭವ್ಯ ಶೋಭಾಯಾತ್ರೆಯಲ್ಲಿ ಸೌಜನ್ಯಾ ಭಾವಚಿತ್ರವಿರುವ ಟ್ಯಾಬ್ಲೋ ಪಾಲ್ಗೊಂಡಿತ್ತು. ಅದರಲ್ಲಿ ಶ್ರೀ ದೇವಿಯ ರೂಪಕ ಸಾವಿರಾರು ಜನರಿಂದ ವೀಕ್ಷಿಸಲ್ಪಟ್ಟು ಅಪಾರ ಜನ ಮನ್ನಣೆ ಪಡೆಯಿತು.
Soujanya dasara tablo allowed Permission at Vamamjoor dasara program in Mangalore.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm