ಬ್ರೇಕಿಂಗ್ ನ್ಯೂಸ್
26-10-23 06:59 pm Mangalore Correspondent ಕರಾವಳಿ
ಪುತ್ತೂರು, ಅ.25: ಸೆಲೆಬ್ರಿಟಿಗಳನ್ನು ಕಾಡುತ್ತಿರುವ ಹುಲಿ ಉಗುರು ಪ್ರಕರಣ ಈಗ ಹಳ್ಳಿಗಳಲ್ಲೂ ಸದ್ದು ಮಾಡತೊಡಗಿದೆ. ಸುಳ್ಯದ ನಗರ ಪಂಚಾಯತ್ ಉದ್ಯೋಗಿ ಮಹಿಳೆಯ ಕೊರಳಲ್ಲಿ ಹುಲಿ ಉಗುರು ಮಾದರಿ ಇದ್ದ ಫೋಟೊಗಳು ವೈರಲ್ ಆಗಿದ್ದು ಅರಣ್ಯಾಧಿಕಾರಿಗಳು ತನಿಖೆ ನಡೆಸಿದ್ದಾರೆ.
ಸುಳ್ಯ ನಗರ ಪಂಚಾಯತ್ ಸಿಬ್ಬಂದಿ ತೆಗೆಸಿಕೊಂಡಿದ್ದ ಪೋಟೋ ಒಂದರಲ್ಲಿ ಅಲ್ಲಿನ ಉದ್ಯೋಗಿ ಶಶಿಕಲಾ ಅವರ ಕೊರಳಿನಲ್ಲಿ ಹುಲಿ ಉಗುರನ್ನು ಹೋಲುವ ಲಾಕೆಟ್ ಇತ್ತು. ಇದರ ಪೋಟೊ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಸುಳ್ಯ ಅರಣ್ಯ ಇಲಾಖೆಯವರು ಶಶಿಕಲಾ ಅವರನ್ನು ಸಂಪರ್ಕಿಸಿ ಕಚೇರಿಗೆ ಬರುವಂತೆ ಸೂಚಿಸಿದ್ದರು. ಶಶಿಕಲಾ ಅವರು ಆ ಲಾಕೆಟ್ ನೊಂದಿಗೆ ವಲಯಾರಣ್ಯಾಧಿಕಾರಿಗಳ ಕಚೇರಿಗೆ ತೆರಳಿ ಅದನ್ನು ಅಲ್ಲಿ ಒಪ್ಪಿಸಿದ್ದಾರೆ.
ಇದು ಅಸಲಿ ಹುಲಿ ಉಗುರಿನ ಲಾಕೆಟ್ ಅಲ್ಲ. ಮಾರಾಟ ಮಾಡಲು ಬಂದವರಿಂದ ನನ್ನ ತಾಯಿ ಖರೀದಿಸಿ, ಧರಿಸುತ್ತಿದ್ದರು. ನಾನು ಕೂಡಾ ಅನೇಕ ವರ್ಷಗಳಿಂದ ಉಪಯೋಗಿಸುತ್ತಿದ್ದೇನೆ. ಫೋಟೋ ವೈರಲ್ ಆಗಿದ್ದರಿಂದ ಅರಣ್ಯ ಇಲಾಖೆಯವರು ಫೋನ್ ಮಾಡಿದಾಗ ಲಾಕೆಟ್ ಕೊಟ್ಟು ಬಂದಿದ್ದೇನೆ ಎಂದು ಶಶಿಕಲಾ ಮಾಹಿತಿ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಶಶಿಕಲಾ ಅವರ ಹುಲಿ ಉಗುರು ಧರಿಸಿರುವ ಪೋಟೋ ವೈರಲ್ ಆಗಿರುವುದರಿಂದ ತನಿಖೆ ನಡೆಸಿದ್ದೇವೆ. ಲಾಕೆಟನ್ನು ಪಡೆದಿದ್ದು, ಲ್ಯಾಬ್ ನಲ್ಲಿ ಪರೀಕ್ಷೆ ನಡೆಸುತ್ತೇವೆ. ಒರಿಜಿನಲ್ ಆಗಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅರಣ್ಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
Mangalore Sullia woman photo with tiger claw goes viral on social media.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm