ಬ್ರೇಕಿಂಗ್ ನ್ಯೂಸ್
26-10-23 09:20 pm Mangalore Correspondent ಕರಾವಳಿ
ಮಂಗಳೂರು, ಅ.26: ಜಿಲ್ಲಾಡಳಿತದಿಂದ ಮರಳು ನೀತಿ ಜಾರಿಗೊಳಿಸದ ಹಿನ್ನೆಲೆಯಲ್ಲಿ ಅಧಿಕೃತವಾಗಿ ಮರಳು ಸಿಗುತ್ತಿಲ್ಲ. ಕಾಳಸಂತೆಯಲ್ಲಿ ಬೇಕಾದಷ್ಟು ಮರಳು ಸಿಗುತ್ತೆ. ಕಾಳಸಂತೆಯ ಮರಳಿಗೆ ಒಂದು ಲೋಡ್ ಮರಳಿಗೆ 21 ಸಾವಿರ ರೂ. ಕೇಳುತ್ತಿದ್ದಾರೆ. ಅಷ್ಟು ದರ ಕೊಟ್ಟರೆ ಎಲ್ಲಿಗೆ ಬೇಕಾದರೂ ಮರಳು ಹಾಕುತ್ತಾರೆ. ಜಿಲ್ಲಾಡಳಿತವೇ ಇಂತಹ ಅಕ್ರಮಕ್ಕೆ ಅವಕಾಶ ನೀಡುತ್ತಿದ್ದು, ಇದರಿಂದ ಕಟ್ಟಡ ಮಾಲಕರು, ನಿರ್ಮಾಣಕಾರರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸಿವಿಲ್ ಕಂಟ್ರಾಕ್ಟರ್ ಅಸೋಸಿಯೇಶನ್ ಸಂಘದವರು ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಸಂಘದ ಪ್ರಮುಖರಾದ ಬಸ್ತಿ ಪುರುಷೋತ್ತಮ ಶೆಣೈ ಮತ್ತು ಮಹಾಬಲ ಕೊಟ್ಟಾರಿ, ಕಟ್ಟಡ ನಿರ್ಮಾಣಕ್ಕೆ ನೈಸರ್ಗಿಕವಾಗಿ ಸಿಗುತ್ತಿದ್ದ ಮರಳು ಇತ್ತೀಚಿನ ವರ್ಷಗಳಲ್ಲಿ ಸೂಕ್ತ ದರದಲ್ಲಿ ಸಿಗದಂತಾಗಿದೆ. ಇದರಿಂದ ಗುತ್ತಿಗೆದಾರರು, ಕಟ್ಟಡ ನಿರ್ಮಾಣಕಾರರು ಕಾಳಸಂತೆಯಲ್ಲಿ ದುಬಾರಿ ದರ ಕೊಟ್ಟು ಖರೀದಿಸುವ ಸ್ಥಿತಿಯಾಗಿದೆ. ಈ ಬಗ್ಗೆ ಜಿಲ್ಲಾಡಳಿತಕ್ಕೆ ಹಲವು ಬಾರಿ ಮನವಿ ಮಾಡಿದ್ದರೂ, ಕ್ರಮ ಕೈಗೊಂಡಿಲ್ಲ. ಕಾನೂನು ರೀತಿಯಲ್ಲಿ ಮರಳು ಲಭ್ಯವಾಗದ್ದರಿಂದ ಸರಕಾರದ ರಾಯಧನಕ್ಕೂ ವಂಚನೆಯಾಗುತ್ತದೆ. ಈ ಬಗ್ಗೆ ಜೂನ್ ತಿಂಗಳಲ್ಲಿ ಜಿಲ್ಲಾಧಿಕಾರಿಯನ್ನು ಸಂಪರ್ಕಿಸಿದ್ದು ಆಗಸ್ಟ್ ತಿಂಗಳಲ್ಲಿ ಮರಳು ಪೂರೈಕೆ ಅನುಮತಿ ನೀಡುವುದಾಗಿ ತಿಳಿಸಿದ್ದರು.
ನಾನ್ ಸಿಆರ್ ಝೆಡ್ ವಲಯದಲ್ಲಿ ಮರಳುಗಾರಿಕೆಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಬಿಡ್ಡುದಾರರು ವೇಯಿಂಗ್ ಬ್ರಿಜ್ ಮಾಡದೇ ಇರುವುದರಿಂದ ಮರಳು ಸಾಗಣೆಗೆ ಗಣಿ ಇಲಾಖೆ ಅವಕಾಶ ನೀಡುತ್ತಿಲ್ಲ. ಜಿಲ್ಲೆಯಲ್ಲಿ ಪೂರೈಕೆಯಾಗುವ ಎಂ ಸ್ಯಾಂಡ್ ಗುಣಮಟ್ಟವೂ ಚೆನ್ನಾಗಿಲ್ಲದ ಕಾರಣ ಕಟ್ಟಡ ಮಾಲೀಕರು ಅದನ್ನು ಬಳಸಲು ಹಿಂಜರಿಯುತ್ತಿದ್ದಾರೆ. ಇದೇ ರೀತಿಯಾದಲ್ಲಿ ಸಂಪೂರ್ಣ ಕಾಮಗಾರಿಯನ್ನು ನಿಲ್ಲಿಸಬೇಕಾದ ಸ್ಥಿತಿ ಬರುತ್ತದೆ. ಎರಡು ವಾರದ ಗಡುವು ನೀಡುತ್ತಿದ್ದು ಮರಳು ಪೂರೈಕೆಗೆ ಕ್ರಮ ಕೈಗೊಳ್ಳದೇ ಇದ್ದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ನಿಲ್ಲಿಸುತ್ತೇವೆ. ಇದರಿಂದ ಕಟ್ಟಡ ಕೆಲಸ ಮಾಡುವ ಮೇಸ್ತ್ರಿಗಳು, ಮರದ ಕೆಲಸಗಾರರು, ಕಬ್ಬಿಣದ ಕೆಲಸಗಾರರು, ಕೂಲಿ ಕಾರ್ಮಿಕರು ಕೆಲಸ ಇಲ್ಲದೆ ಉಪವಾಸ ಬೀಳುವ ಸ್ಥಿತಿಯಾಗಲಿದೆ. ಅದಕ್ಕೆ ಜಿಲ್ಲಾಡಳಿತವೇ ಹೊಣೆಯಾಗಬೇಕು ಎಂದು ಹೇಳಿದರು. ಇದಲ್ಲದೆ, ಎರಡು ವಾರಗಳಲ್ಲಿ ಸಮಸ್ಯೆ ಬಗೆಹರಿಸದೇ ಇದ್ದಲ್ಲಿ ಕಾರ್ಮಿಕರ ಜೊತೆಗೂಡಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
Sand sold in illegal manner slams civil contractor's in Mangalore.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am