ಬ್ರೇಕಿಂಗ್ ನ್ಯೂಸ್
27-10-23 12:24 pm Mangalore Correspondent ಕರಾವಳಿ
ಉಳ್ಳಾಲ, ಅ.27: ಕಾಂಗ್ರೆಸ್ ಆಡಳಿತದಲ್ಲಿ ಪರಶುರಾಮನ ಪ್ರತಿಮೆ ನಕಲಿ ಎಂದಾಗಿರುತ್ತಿದ್ದರೆ ಕರಾವಳಿಯೇ ಹೊತ್ತಿ ಉರಿಯುತ್ತಿತ್ತು. ಈಗ ಯಾಕೆ ಇವರೆಲ್ಲ ಸುಮ್ಮನಿದ್ದಾರೆ. ಪರಶುರಾಮನ ಶಾಪದಿಂದಲೇ ಕರಾವಳಿ ಬಿಜೆಪಿ ಮುಕ್ತವಾಗಲಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಎಮ್.ಜಿ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾರ್ಕಳದಲ್ಲಿ ಪರಶುರಾಮನ ಫೈಬರ್ ಪ್ರತಿಮೆ ನಿರ್ಮಿಸಿ ಕಂಚಿನದ್ದೆಂದು ಹೇಳಿ ಹಿಂದೂಗಳನ್ನು ಮೋಸಗೊಳಿಸಲಾಗಿದೆ ಎಂದು ಆರೋಪಿಸಿ ತೊಕ್ಕೊಟ್ಟಿನಲ್ಲಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಹಿಂದೂ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್, ಸುಳ್ಳನ್ನೇ ದೇವರೆಂದು ಆರಾಧಿಸುವ ಸೂಲಿಬೆಲೆ, ಶೋಭಕ್ಕ, ಸಿ.ಟಿ.ರವಿಯವರೇ ನೀವೀಗ ಎಲ್ಲಿದ್ದೀರಿ. ನೀವೇಕೆ ಕಾರ್ಕಳಕ್ಕೆ ಹೋಗುತ್ತಿಲ್ಲ? ಇಂಥಹ ಮೋಸ ಕಾಂಗ್ರೆಸ್ ಆಡಳಿತದಲ್ಲಾದರೆ ನೀವು ಸುಮ್ನೆ ಇರುತ್ತಿದ್ರಾ? ದೈವ- ದೇವರ ಹೆಸರಲ್ಲಿ ಜನರನ್ನು ಮೋಸಗೊಳಿಸುವುದು ನಿಮ್ಮ ಹಿಂದುತ್ವ. ಇಂಥಹ ನಾಟಕವಾಡದ ನಮ್ಮದು ಅಸಲೀ ಹಿಂದುತ್ವ. ಚುನಾವಣಾ ಸಂದರ್ಭ ತಾನು ಹಿಂದೂ ಹುಲಿ ಎಂದು ತೋರಿಸಲು ಸುನಿಲ್ ಕುಮಾರ್ ಪರಶುರಾಮನ ನಕಲಿ ಮೂರ್ತಿ ತಂದು ಇಟ್ಟಿದ್ದಾರೆ. ಮೂರ್ತಿ ಇಡುವಾಗ ಸುನಿಲ್ ಕುಮಾರ್ ಭಜನೆ ಮಾಡಿದ್ದು, ಶಂಖ ಊದಿದ್ದು ಸತ್ಯ ಎಂದಾದರೆ ಪರಶುರಾಮನ ಮೂರ್ತಿ ಸತ್ಯ ಯಾಕಾಗಿಲ್ಲ. ಹಿಂದೂಗಳ ಅಸ್ಮಿತೆಯನ್ನೇ ನಕಲಿ ಮಾಡಿದ ಬಿಜೆಪಿ, ಸಂಘ ಪರಿವಾರದ ನಕಲಿ ಹಿಂದುತ್ವದ ಮುಖ ಇದಾಗಿದೆ ಎಂದು ಟೀಕಿಸಿದರು.

ಪರಶುರಾಮನ ನಕಲಿ ಪ್ರತಿಮೆ ನಿರ್ಮಿಸಿದ ಜಮೀನೂ ಅಕ್ರಮ. ಗೋಮಾಳ ಜಾಗದಲ್ಲಿ ಪ್ರತಿಮೆ ನಿರ್ಮಿಸಿದ್ದು ಸುನಿಲ್ ಕುಮಾರ್ ಅವರ ದೊಡ್ಡ ಹುನ್ನಾರ. ಜಿಲ್ಲಾಡಳಿತ, ಕಂದಾಯ ಇಲಾಖೆ ತಿರಸ್ಕರಿಸಿದ ಜಾಗದಲ್ಲಿ ನಿರ್ಮಿತಿ ಕೇಂದ್ರ ಮೂರ್ತಿ ನಿರ್ಮಿಸಿದ್ದು ಬಿಜೆಪಿಯ ಯಾವ ಸೀಮೆಯ ಆಡಳಿತ ಎಂದು ಪ್ರಶ್ನಿಸಿದರು.
ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್, ಉಡುಪಿ ಯುವ ಕಾಂಗ್ರೆಸ್ ಅಧ್ಯಕ್ಷರಾದ ದೀಪಕ್ ಕೋಟ್ಯಾನ್, ಕಾಂಗ್ರೆಸ್ ಜಿಲ್ಲಾ ಸದಸ್ಯರಾದ ಸುರೇಶ್ ಭಟ್ನಗರ, ಮಂಗಳೂರು ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಮಹಮ್ಮದ್ ಮುಸ್ತಫಾ ಮಲಾರ್, ಸುರೇಖಾ ಚಂದ್ರಹಾಸ್, ಪ್ರಮುಖರಾದ ಮನ್ಸೂರ್ ಮಂಚಿಲ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
If Parashurama Theme Park in Karkala was fake by Congress Karavali would have been burnt in fire, mg hedge in Ullal.
29-08-26 10:38 pm
HK News Desk
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm