ಬ್ರೇಕಿಂಗ್ ನ್ಯೂಸ್
27-10-23 12:24 pm Mangalore Correspondent ಕರಾವಳಿ
ಉಳ್ಳಾಲ, ಅ.27: ಕಾಂಗ್ರೆಸ್ ಆಡಳಿತದಲ್ಲಿ ಪರಶುರಾಮನ ಪ್ರತಿಮೆ ನಕಲಿ ಎಂದಾಗಿರುತ್ತಿದ್ದರೆ ಕರಾವಳಿಯೇ ಹೊತ್ತಿ ಉರಿಯುತ್ತಿತ್ತು. ಈಗ ಯಾಕೆ ಇವರೆಲ್ಲ ಸುಮ್ಮನಿದ್ದಾರೆ. ಪರಶುರಾಮನ ಶಾಪದಿಂದಲೇ ಕರಾವಳಿ ಬಿಜೆಪಿ ಮುಕ್ತವಾಗಲಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಎಮ್.ಜಿ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾರ್ಕಳದಲ್ಲಿ ಪರಶುರಾಮನ ಫೈಬರ್ ಪ್ರತಿಮೆ ನಿರ್ಮಿಸಿ ಕಂಚಿನದ್ದೆಂದು ಹೇಳಿ ಹಿಂದೂಗಳನ್ನು ಮೋಸಗೊಳಿಸಲಾಗಿದೆ ಎಂದು ಆರೋಪಿಸಿ ತೊಕ್ಕೊಟ್ಟಿನಲ್ಲಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಹಿಂದೂ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್, ಸುಳ್ಳನ್ನೇ ದೇವರೆಂದು ಆರಾಧಿಸುವ ಸೂಲಿಬೆಲೆ, ಶೋಭಕ್ಕ, ಸಿ.ಟಿ.ರವಿಯವರೇ ನೀವೀಗ ಎಲ್ಲಿದ್ದೀರಿ. ನೀವೇಕೆ ಕಾರ್ಕಳಕ್ಕೆ ಹೋಗುತ್ತಿಲ್ಲ? ಇಂಥಹ ಮೋಸ ಕಾಂಗ್ರೆಸ್ ಆಡಳಿತದಲ್ಲಾದರೆ ನೀವು ಸುಮ್ನೆ ಇರುತ್ತಿದ್ರಾ? ದೈವ- ದೇವರ ಹೆಸರಲ್ಲಿ ಜನರನ್ನು ಮೋಸಗೊಳಿಸುವುದು ನಿಮ್ಮ ಹಿಂದುತ್ವ. ಇಂಥಹ ನಾಟಕವಾಡದ ನಮ್ಮದು ಅಸಲೀ ಹಿಂದುತ್ವ. ಚುನಾವಣಾ ಸಂದರ್ಭ ತಾನು ಹಿಂದೂ ಹುಲಿ ಎಂದು ತೋರಿಸಲು ಸುನಿಲ್ ಕುಮಾರ್ ಪರಶುರಾಮನ ನಕಲಿ ಮೂರ್ತಿ ತಂದು ಇಟ್ಟಿದ್ದಾರೆ. ಮೂರ್ತಿ ಇಡುವಾಗ ಸುನಿಲ್ ಕುಮಾರ್ ಭಜನೆ ಮಾಡಿದ್ದು, ಶಂಖ ಊದಿದ್ದು ಸತ್ಯ ಎಂದಾದರೆ ಪರಶುರಾಮನ ಮೂರ್ತಿ ಸತ್ಯ ಯಾಕಾಗಿಲ್ಲ. ಹಿಂದೂಗಳ ಅಸ್ಮಿತೆಯನ್ನೇ ನಕಲಿ ಮಾಡಿದ ಬಿಜೆಪಿ, ಸಂಘ ಪರಿವಾರದ ನಕಲಿ ಹಿಂದುತ್ವದ ಮುಖ ಇದಾಗಿದೆ ಎಂದು ಟೀಕಿಸಿದರು.

ಪರಶುರಾಮನ ನಕಲಿ ಪ್ರತಿಮೆ ನಿರ್ಮಿಸಿದ ಜಮೀನೂ ಅಕ್ರಮ. ಗೋಮಾಳ ಜಾಗದಲ್ಲಿ ಪ್ರತಿಮೆ ನಿರ್ಮಿಸಿದ್ದು ಸುನಿಲ್ ಕುಮಾರ್ ಅವರ ದೊಡ್ಡ ಹುನ್ನಾರ. ಜಿಲ್ಲಾಡಳಿತ, ಕಂದಾಯ ಇಲಾಖೆ ತಿರಸ್ಕರಿಸಿದ ಜಾಗದಲ್ಲಿ ನಿರ್ಮಿತಿ ಕೇಂದ್ರ ಮೂರ್ತಿ ನಿರ್ಮಿಸಿದ್ದು ಬಿಜೆಪಿಯ ಯಾವ ಸೀಮೆಯ ಆಡಳಿತ ಎಂದು ಪ್ರಶ್ನಿಸಿದರು.
ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್, ಉಡುಪಿ ಯುವ ಕಾಂಗ್ರೆಸ್ ಅಧ್ಯಕ್ಷರಾದ ದೀಪಕ್ ಕೋಟ್ಯಾನ್, ಕಾಂಗ್ರೆಸ್ ಜಿಲ್ಲಾ ಸದಸ್ಯರಾದ ಸುರೇಶ್ ಭಟ್ನಗರ, ಮಂಗಳೂರು ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಮಹಮ್ಮದ್ ಮುಸ್ತಫಾ ಮಲಾರ್, ಸುರೇಖಾ ಚಂದ್ರಹಾಸ್, ಪ್ರಮುಖರಾದ ಮನ್ಸೂರ್ ಮಂಚಿಲ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
If Parashurama Theme Park in Karkala was fake by Congress Karavali would have been burnt in fire, mg hedge in Ullal.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm