ಬ್ರೇಕಿಂಗ್ ನ್ಯೂಸ್
27-10-23 11:03 pm Mangalore Correspondent ಕರಾವಳಿ
ಮಂಗಳೂರು, ಅ.27: ಕೊಂಕಣಿ ಲೇಖಕ, ಕಥೆಗಾರ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಎಡ್ವಿನ್ ಜೋಸೆಫ್ ಫ್ರಾನ್ಸಿಸ್ ಡಿಸೋಜ (75) ನಿಧನರಾಗಿದ್ದಾರೆ.
1948ರಲ್ಲಿ ಮಂಗಳೂರಿನ ವೆಲೆನ್ಸಿಯಾದಲ್ಲಿ ಜನಿಸಿದ್ದ ಅವರು ಸಂತ ಅಲೋಶಿಯಸ್ ಕಾಲೇಜಿನಲ್ಲಿ ಬಿಕಾಂ ಪದವಿ ಪೂರೈಸಿದ್ದರು. ಆನಂತರ, ಕೊಂಕಣಿ ಭಾಷೆಯಲ್ಲಿ ಪೋಸ್ಟ್ ಗ್ರಾಜುವೇಟ್ ಡಿಪ್ಲೊಮಾ ಮಾಡಿದ್ದರು. ಅಲ್ಲದೆ, ಅಮೆರಿಕದ ಬೈಬಲ್ ಸ್ಕೂಲ್ ನಲ್ಲಿ ಕ್ರಿಸ್ತಿಯನ್ ಥಿಯೋಲಜಿ ಬಗ್ಗೆ ಡಿಪ್ಲೊಮಾ ಶಿಕ್ಷಣ ಮಾಡಿದ್ದರು.
1964ರಲ್ಲಿ ಮೊದಲ ಬಾರಿಗೆ ಕೊಂಕಣಿಯಲ್ಲಿ ಸಣ್ಣ ಕತೆಗಳನ್ನು ಬರೆಯತೊಡಗಿದ್ದರು. 33 ಕಾದಂಬರಿ, ನೂರಕ್ಕೂ ಹೆಚ್ಚು ಸಣ್ಣ ಕತೆಗಳನ್ನು ಬರೆದಿದ್ದಾರೆ. ಇವರ ಬಹುತೇಕ ಕತೆಗಳು ಇಂಗ್ಲಿಷ್, ಕನ್ನಡ, ಹಿಂದಿ, ಕಾಶ್ಮೀರಿ, ಮಲಯಾಳಂ ಮತ್ತು ತಮಿಳು ಭಾಷೆಗಳಿಗೆ ಅನುವಾದಗೊಂಡಿವೆ. ಅವರು ಬರೆದಿದ್ದ ಎ ಕಪ್ ಆಫ್ ಹಾಟ್ ಕಾಫಿ ಎನ್ನುವ ಸಣ್ಣ ಕತೆಯನ್ನು ಭಾರತದ ಸಣ್ಣ ಕತೆಗಳಲ್ಲಿ ಫೇವರಿಟ್ ಗಳಲ್ಲಿ ಒಂದೆಂದು ಜೈಕೋ ಬುಕ್ಸ್ ಸಂಸ್ಥೆಯವರು ಪ್ರಕಟಿಸಿದ್ದರು. ಚಾಕಲೇಟ್ ಎನ್ನುವ ಸಣ್ಣ ಕತೆ ರೀಡರ್ಸ್ ಡೈಜೆಸ್ಟ್ ಮಾಸಿಕದಲ್ಲಿ ಎರಡು ಬಾರಿ ಪ್ರಕಟ ಆಗಿತ್ತು.
ದೆಹಲಿಯ ಕೇಂದ್ರ ಸಾಹಿತ್ಯ ಅಕಾಡೆಮಿಯವರು ಜೆ.ಎಫ್ ಡಿಸೋಜರ ಹಲವು ಕತೆಗಳನ್ನು ಪ್ರಕಟಣೆ ಮಾಡಿದ್ದಾರೆ. ಡಿಸೋಜ ಅವರು ತನ್ನದೇ 13 ಕತೆಗಳನ್ನು ಇಂಗ್ಲಿಷಿಗೆ ಭಾಷಾಂತರ ಮಾಡಿದ್ದರು. ಹಲವು ಸಿನಿಮಾಗಳಿಗೂ ಅವರು ಸಂಭಾಷಣೆಗಳನ್ನು ಬರೆದಿದ್ದಾರೆ. ಕೊಂಕಣಿಯಲ್ಲಿ ಬರೆದಿದ್ದ 1008 ಪುಟಗಳ ಬೃಹತ್ ಗ್ರಂಥವನ್ನು 2015ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಕಟಿಸಿದ್ದು ಕೊಂಕಣಿ ಸಾಹಿತ್ಯದಲ್ಲಿ ದಾಖಲಾದ ದೊಡ್ಡ ಕೊಡುಗೆ ಎಂದು ಪರಿಗಣಿಸಲ್ಪಟ್ಟಿದೆ. 1992ರಲ್ಲಿ ಕಾರವಾರದಲ್ಲಿ ನಡೆದ 11ನೇ ಅಖಿಲ ಭಾರತೀಯ ಕೊಂಕಣಿ ಸಾಹಿತ್ಯ ಸಮ್ಮೇಳನದಲ್ಲಿ ಜೆ.ಎಫ್ ಡಿಸೋಜ ಅಧ್ಯಕ್ಷರಾಗಿದ್ದರು. ಡಿಸೋಜ ಅವರು ಪತ್ನಿ ಮರ್ಸಿಲಿನ್ ಜೇನ್ ಡಿಸೋಜ, ಪುತ್ರಿ ರುತ್ ಈಸ್ಟರ್ ಡಿಸೋಜ, ಅಳಿಯ ಸುಧಾಕರ ಪ್ರಭು, ಮೊಮ್ಮಗು ಅನುಷ್ಕಾ ಪ್ರಭು ಅವರನ್ನು ಅಗಲಿದ್ದಾರೆ.
Edwin Joseph Francis D'Souza, a prominent Konkani writer and recipient of the Kendra Sahitya Academy Award, fondly known as Edwin J F D'Souza, passed away at 75 years of age in the city on Thursday, October 26.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm