ಬ್ರೇಕಿಂಗ್ ನ್ಯೂಸ್
28-10-23 05:00 pm Mangalore Correspondent ಕರಾವಳಿ
ಮಂಗಳೂರು, ಅ.28: ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯವರು 50 ಕೋಟಿ ಆಫರ್ ಮಾಡಿದ್ದಾರೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, 50 ಕೋಟಿ ಆಫರ್ ಬಗ್ಗೆ ನನಗೇನು ಗೊತ್ತಿಲ್ಲ, ಅದನ್ನು ಹೇಳಿರುವ ರವಿ ಹತ್ತಿರನೇ ಕೇಳಿ. ಯಾರು ಹೇಳಿದ್ರೋ ಅವರತ್ರ ಕೇಳಿ, ನನಗೆ ಯಾವುದೇ ಮಾಹಿತಿ ಬಂದಿಲ್ಲ ಎಂದು ಹೇಳಿದ್ದಾರೆ.
ಉಡುಪಿಗೆ ತೆರಳಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಅವರು, ಬಿಜೆಪಿಯವರು ನಮ್ಮ ಸರ್ಕಾರವನ್ನು ಅಸ್ಥಿರ ಮಾಡಲು ಪ್ರಯತ್ನಿಸ್ತಿದಾರೆ ಅನ್ನೋ ಮಾಹಿತಿ ಇದೆ. 50 ಕೋಟಿ ಕೊಟ್ಟು ಅಧಿಕಾರ ಆಫರ್ ಮಾಡ್ತಾ ಇದಾರೆ ಅನ್ನೋ ಮಾಹಿತಿ ಇಲ್ಲ ಎಂದರು. ನಿನ್ನೆ ರಾತ್ರಿ ನೀವು ಪ್ರತ್ಯೇಕ ಮೀಟಿಂಗ್ ಮಾಡಿದ್ದೀರಾ ಎಂಬ ಪ್ರಶ್ನೆಗೆ, ಪರಮೇಶ್ವರ್ ಊಟಕ್ಕೆ ಕರೆದಿದ್ರು, ಹೋಗಿದೀವಿ, ಅದಕ್ಕೆ ಮಸಾಲೆ ಯಾಕೆ ಹಾಕ್ತೀರಾ.. ಅವರು ನನಗೆ, ಮಹಾದೇವಪ್ಪ, ಸತೀಶ್ ಜಾರಕಿಹೊಳಿಗೆ ಊಟಕ್ಕೆ ಕರೆದಿದ್ದರು. ಅಲ್ಲಿ ಯಾವುದೇ ರಾಜಕೀಯ ಇಲ್ಲ, ಅದೆಲ್ಲಾ ಸುಳ್ಳು, ಬಣ್ಣ ಕಟ್ಟಲಾಗ್ತಿದೆ ಎಂದು ಹೇಳಿದರು.
ಶಾಸಕ ಹರೀಶ್ ಪೂಂಜಾ, ಸಿಎಂ ಸಿದ್ದರಾಮಯ್ಯ ಅವರನ್ನು ಕಲೆಕ್ಷನ್ ಮಾಸ್ಟರ್ ಎಂದು ಹೇಳಿರುವ ಕುರಿತು ಕೇಳಿದ್ದಕ್ಕೆ, ಆತ ಶಾಸಕನಾಗಿರೋದು ಮೊನ್ನೆಯಷ್ಟೇ. ನಾನು 83ರಿಂದ ಶಾಸಕನಾಗಿದ್ದೇನೆ, 85ರಲ್ಲೇ ಮಿನಿಸ್ಟರ್ ಆಗಿದ್ದವನು. ಆವತ್ತು ಯಾರು ನನ್ನನ್ನು ಈ ರೀತಿ ಕರೆದಿರಲಿಲ್ಲ. ಇವರು ಪಾಪ ಇನ್ನೂ ರಾಜಕೀಯದಲ್ಲಿ ಬಚ್ಚಾ. ಹಿಂದಿನ ಬಿಜೆಪಿ ಮುಖ್ಯಮಂತ್ರಿಗಳಿಗೆ ಹಾಗೆ ಹೇಳಲಿ ಎಂದು ಹೇಳಿದರು.

ನಿಗಮ ಮಂಡಳಿಗೆ ಯಾವಾಗ ನೇಮಕ ಆಗುತ್ತೆ ಎಂಬ ಪ್ರಶ್ನೆಗೆ, ಮೊದಲ ಹಂತದಲ್ಲಿ ಕೆಲವು ಶಾಸಕರಿಗೆ ನಿಗಮ ಮಂಡಳಿ ಕೊಡ್ತೇವೆ. ಎರಡನೇ ಹಂತದಲ್ಲಿ ಕಾರ್ಯಕರ್ತರು, ನಾಯಕರಿಗೆ ಅವಕಾಶ ಕೊಡುತ್ತೇವೆ. ಶೀಘ್ರವಾಗಿ ಹಂಚಿಕೆ ಆಗಲಿದೆ ಎಂದರು. ಬರ ಪರಿಹಾರದ ಕುರಿತ ಪ್ರಶ್ನೆಗೆ, ನಾವು ಬರ ಪರಿಹಾರ 7900 ಕೋಟಿ ರೂ. ಕೇಳಿದ್ದೇವೆ. ಆದರೆ ಕೇಂದ್ರ ಸರ್ಕಾರ ಒಂದು ರೂಪಾಯಿ ಪರಿಹಾರ ಕೊಟ್ಟಿಲ್ಲ. ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಹೊಂದಿದೆ ಎಂದರು.
ಕಾರ್ಕಳದ ಪರಶುರಾಮ ಮೂರ್ತಿ ನಕಲಿಯೆಂದು ಕಾಂಗ್ರೆಸಿಗರೇ ಪ್ರತಿಭಟನೆ ನಡೆಸುತ್ತಿದ್ದಾರೆ, ನೀವು ಯಾಕೆ ತನಿಖೆ ಮಾಡಿಸುತ್ತಿಲ್ಲ ಎಂಬ ಪ್ರಶ್ನೆಗೆ, ಮೂರ್ತಿ ಅಸಲಿಯಾ, ನಕಲಿಯಾ ಎಂದು ತನಿಖೆ ಮಾಡಿಸಲಾಗುವುದು ಎಂದು ಒಂದು ಗೆರೆಯ ಉತ್ತರ ಹೇಳಿದರು. ಸೌಜನ್ಯಾ ಕೊಲೆ ಪ್ರಕರಣವನ್ನು ಮರು ತನಿಖೆ ಮಾಡಿಸುತ್ತೀರಾ ಎಂಬ ಪ್ರಶ್ನೆಗೆ, ನಾವು ಮರು ತನಿಖೆ ಮಾಡಿಸುವ ಪ್ರಶ್ನೆ ಬರುವುದಿಲ್ಲ. ಪ್ರಕರಣ ಈಗ ಸಿಬಿಐನಲ್ಲಿದ್ದು ಕೇಂದ್ರ ಸರ್ಕಾರದ ಕೈಯಲ್ಲಿದೆ. ಅವರೇ ಮರು ತನಿಖೆ ಮಾಡಿಸಬೇಕು. ಸಿಬಿಐ ಕೋರ್ಟ್ ಏನು ಹೇಳಿದೆಯೋ ಹಾಗೆ ಮಾಡಬೇಕು ಎಂದು ಹೇಳಿ ಜವಾಬ್ದಾರಿಯಿಂದ ಜಾರಿಕೊಂಡರು.
50 crore to Congress MLAs, Siddaramaiah slams BJP in Mangalore. Responding to queries about the BJP allegedly offering ₹50 crore to Congress MLAs to bring down his government, Mr Siddaramaiah said he had heard about attempts by the BJP to destabilise his government; but not about the cash offer.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm