ಬ್ರೇಕಿಂಗ್ ನ್ಯೂಸ್
29-10-23 05:27 pm Mangalore Correspondent ಕರಾವಳಿ
ಉಳ್ಳಾಲ, ಅ.29: ಸಿನೆಮಾ ಶೂಟಿಂಗ್ ವೇಳೆ ಸಹ ನಟನ ಬಾಯಿ ತಪ್ಪಿಂದ ಕೊರಗಜ್ಜನ ಡೈಲಾಗ್ ಬಂದಿದ್ದು ಅದಕ್ಕಾಗಿ ಕೊರಗಜ್ಜನ ಸಾನಿಧ್ಯಕ್ಕೆ ಬಂದು ತನ್ನ ನಾಯಕ ನಟನೆಯ ನೂತನ ಸಿನೆಮಾ "ಕಾಲಾಯ ನಮಃ"ದ ಯಶಸ್ಸಿಗೆ ಪ್ರಾರ್ಥಿಸಿರುವುದಾಗಿ ಸ್ಯಾಂಡಲ್ ವುಡ್ ನಟ ಮಿಸ್ಟರ್ ಗರಗಸ ಖ್ಯಾತಿಯ ಕೋಮಲ್ ಹೇಳಿದ್ದಾರೆ.
ನಟ ಕೋಮಲ್ ಇಂದು ಪತ್ನಿ ಅನುಸೂಯ ಜೊತೆ ಮಂಗಳೂರು ಹೊರವಲಯದ ಕಲ್ಲಾಪು, ಬುರ್ದುಗೋಳಿ ಗುಳಿಗ, ಕೊರಗತನಿಯ ಉದ್ಭವ ಶಿಲೆಯ ಆದಿ ಸ್ಥಳಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು."ಕಾಲಾಯ ನಮಃ" ಸಿನೆಮಾ ಶೂಟಿಂಗ್ ಸನ್ನಿವೇಶವೊಂದರಲ್ಲಿ ಸಹನಟ ಶೈನ್ ಶೆಟ್ಟಿಯವರು ಹೇಯ್ ನಿನಗೆ ಒಳ್ಳೆದಾಯ್ತು ಮಾರಾಯ.. ಕೊರಗಜ್ಜನಿಗೆ ಚಕ್ಕುಳಿ, ವೀಳ್ಯ ಇಟ್ಟು ಪ್ರಸಾದ ತಗೊಳ್ಳಬೇಕೆಂದು ಬಾಯಿ ತಪ್ಪಿ ಡೈಲಾಗ್ ಹೇಳಿದ್ದರು. ಶೂಟಿಂಗ್ ಬ್ರೇಕ್ ವೇಳೆ ಶೈನ್ ಶೆಟ್ಟಿ ಅವರಲ್ಲಿ ವಿಚಾರಿಸಿದಾಗ ಕೊರಗಜ್ಜ ದೈವದ ಕಾರಣಿಕದ ಬಗ್ಗೆ ನನಗೆ ವಿವರಿಸಿದ್ದಾರೆ. ಹಾಗಾಗಿ ಸಿನೆಮಾ ಬಿಡುಗಡೆಗೂ ಮುನ್ನ ಕೊರಗಜ್ಜನಲ್ಲಿಗೆ ಬಂದು ಚಿತ್ರದ ಯಶಸ್ಸಿಗೆ ಪ್ರಾರ್ಥಿಸಿರೋದಾಗಿ ಕೋಮಲ್ ಹೇಳಿದರು.



ಈಗಾಗಲೇ ನಮೋ ಭೂತಾತ್ಮ 2 ಮತ್ತು ಉಂಡೇನಾಮ ಸಿನೆಮಾಗಳು ರಿಲೀಸ್ ಆಗಿ ಯಶಸ್ಸು ಗಳಿಸಿದೆ. ಮುಂದೆ ನನ್ನ ನಟನೆಯ ರೊಲ್ಯಾಕ್ಸ್ , ಹುಕುಂ, ವಜ್ರಮುನಿ, ಕೋಣ ಮೊದಲಾದ ಸಿನೆಮಾಗಳು ಚಿತ್ರೀಕರಣಗೊಳ್ಳುತ್ತಿದ್ದು ಶೀಘ್ರದಲ್ಲೇ ಬಿಡುಗಡೆಗೊಳ್ಳಲಿವೆ ಎಂದರು. ಕೋಮಲ್ ಆಪ್ತರಾದ ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕ ಬಾಲಕೃಷ್ಣ, ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ವಿಶ್ವನಾಥ ನಾಯ್ಕ್, ಗೌರವ ಸಲಹೆಗಾರರಾದ ಚಂದ್ರಹಾಸ್ ಪಂಡಿತ್ ಹೌಸ್, ಗೌರವ ಅಧ್ಯಕ್ಷರಾದ ಸಂಜೀವ ಭಂಡಾರಿ, ಪ್ರಮುಖರಾದ ದೇವದಾಸ್ ಕಾಯಂಗಲ, ಕಮಲಾಕ್ಷ ವಿ ಕುಲಾಲ್, ನವೀನ್ ಕಾಯಂಗಳ, ಪ್ರಶಾಂತ್ ಕಾಯಂಗಳ, ಪುರುಷೋತ್ತಮ ಕಲ್ಲಾಪು ಮೊದಲಾದವರು ಉಪಸ್ಥಿತರಿದ್ದರು.
Komal kannada actor visits Kallapu, Burdugoli temple in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm