ಬ್ರೇಕಿಂಗ್ ನ್ಯೂಸ್
29-10-23 05:27 pm Mangalore Correspondent ಕರಾವಳಿ
ಉಳ್ಳಾಲ, ಅ.29: ಸಿನೆಮಾ ಶೂಟಿಂಗ್ ವೇಳೆ ಸಹ ನಟನ ಬಾಯಿ ತಪ್ಪಿಂದ ಕೊರಗಜ್ಜನ ಡೈಲಾಗ್ ಬಂದಿದ್ದು ಅದಕ್ಕಾಗಿ ಕೊರಗಜ್ಜನ ಸಾನಿಧ್ಯಕ್ಕೆ ಬಂದು ತನ್ನ ನಾಯಕ ನಟನೆಯ ನೂತನ ಸಿನೆಮಾ "ಕಾಲಾಯ ನಮಃ"ದ ಯಶಸ್ಸಿಗೆ ಪ್ರಾರ್ಥಿಸಿರುವುದಾಗಿ ಸ್ಯಾಂಡಲ್ ವುಡ್ ನಟ ಮಿಸ್ಟರ್ ಗರಗಸ ಖ್ಯಾತಿಯ ಕೋಮಲ್ ಹೇಳಿದ್ದಾರೆ.
ನಟ ಕೋಮಲ್ ಇಂದು ಪತ್ನಿ ಅನುಸೂಯ ಜೊತೆ ಮಂಗಳೂರು ಹೊರವಲಯದ ಕಲ್ಲಾಪು, ಬುರ್ದುಗೋಳಿ ಗುಳಿಗ, ಕೊರಗತನಿಯ ಉದ್ಭವ ಶಿಲೆಯ ಆದಿ ಸ್ಥಳಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು."ಕಾಲಾಯ ನಮಃ" ಸಿನೆಮಾ ಶೂಟಿಂಗ್ ಸನ್ನಿವೇಶವೊಂದರಲ್ಲಿ ಸಹನಟ ಶೈನ್ ಶೆಟ್ಟಿಯವರು ಹೇಯ್ ನಿನಗೆ ಒಳ್ಳೆದಾಯ್ತು ಮಾರಾಯ.. ಕೊರಗಜ್ಜನಿಗೆ ಚಕ್ಕುಳಿ, ವೀಳ್ಯ ಇಟ್ಟು ಪ್ರಸಾದ ತಗೊಳ್ಳಬೇಕೆಂದು ಬಾಯಿ ತಪ್ಪಿ ಡೈಲಾಗ್ ಹೇಳಿದ್ದರು. ಶೂಟಿಂಗ್ ಬ್ರೇಕ್ ವೇಳೆ ಶೈನ್ ಶೆಟ್ಟಿ ಅವರಲ್ಲಿ ವಿಚಾರಿಸಿದಾಗ ಕೊರಗಜ್ಜ ದೈವದ ಕಾರಣಿಕದ ಬಗ್ಗೆ ನನಗೆ ವಿವರಿಸಿದ್ದಾರೆ. ಹಾಗಾಗಿ ಸಿನೆಮಾ ಬಿಡುಗಡೆಗೂ ಮುನ್ನ ಕೊರಗಜ್ಜನಲ್ಲಿಗೆ ಬಂದು ಚಿತ್ರದ ಯಶಸ್ಸಿಗೆ ಪ್ರಾರ್ಥಿಸಿರೋದಾಗಿ ಕೋಮಲ್ ಹೇಳಿದರು.



ಈಗಾಗಲೇ ನಮೋ ಭೂತಾತ್ಮ 2 ಮತ್ತು ಉಂಡೇನಾಮ ಸಿನೆಮಾಗಳು ರಿಲೀಸ್ ಆಗಿ ಯಶಸ್ಸು ಗಳಿಸಿದೆ. ಮುಂದೆ ನನ್ನ ನಟನೆಯ ರೊಲ್ಯಾಕ್ಸ್ , ಹುಕುಂ, ವಜ್ರಮುನಿ, ಕೋಣ ಮೊದಲಾದ ಸಿನೆಮಾಗಳು ಚಿತ್ರೀಕರಣಗೊಳ್ಳುತ್ತಿದ್ದು ಶೀಘ್ರದಲ್ಲೇ ಬಿಡುಗಡೆಗೊಳ್ಳಲಿವೆ ಎಂದರು. ಕೋಮಲ್ ಆಪ್ತರಾದ ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕ ಬಾಲಕೃಷ್ಣ, ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ವಿಶ್ವನಾಥ ನಾಯ್ಕ್, ಗೌರವ ಸಲಹೆಗಾರರಾದ ಚಂದ್ರಹಾಸ್ ಪಂಡಿತ್ ಹೌಸ್, ಗೌರವ ಅಧ್ಯಕ್ಷರಾದ ಸಂಜೀವ ಭಂಡಾರಿ, ಪ್ರಮುಖರಾದ ದೇವದಾಸ್ ಕಾಯಂಗಲ, ಕಮಲಾಕ್ಷ ವಿ ಕುಲಾಲ್, ನವೀನ್ ಕಾಯಂಗಳ, ಪ್ರಶಾಂತ್ ಕಾಯಂಗಳ, ಪುರುಷೋತ್ತಮ ಕಲ್ಲಾಪು ಮೊದಲಾದವರು ಉಪಸ್ಥಿತರಿದ್ದರು.
Komal kannada actor visits Kallapu, Burdugoli temple in Mangalore.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm