ಬ್ರೇಕಿಂಗ್ ನ್ಯೂಸ್
29-10-23 06:00 pm Mangalore Correspondent ಕರಾವಳಿ
ಮಂಗಳೂರು, ಅ.29: ಕೇರಳದಲ್ಲಿ ಬಾಂಬ್ ಸ್ಫೋಟ ಕೃತ್ಯ ನಡೆದಿರುವ ಹಿನ್ನೆಲೆಯಲ್ಲಿ ಕರ್ನಾಟಕ ಗಡಿಭಾಗದಲ್ಲಿ ಎಲರ್ಟ್ ಇರಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ ನೀಡಿದ್ದಾರೆ.
ಮಂಗಳೂರು ಪ್ರವಾಸದಲ್ಲಿರುವ ಪರಮೇಶ್ವರ್ ಬಳಿ ಈ ಬಗ್ಗೆ ಕೇಳಿದಾಗ, ಗಡಿಭಾಗದಲ್ಲಿ ಅಲರ್ಟ್ ಇರುವಂತೆ ಡಿಜಿ, ಐಜಿಯವರು ಪೊಲೀಸರಿಗೆ ಸೂಚಿಸಿದ್ದಾರೆ. ಯಾರು ಆ ಕೃತ್ಯ ನಡೆಸಿದ್ದಾರೆ ಗೊತ್ತಿಲ್ಲ. ಘಟನೆ ಹಿನ್ನೆಲೆಯಲ್ಲಿ ಕೇರಳದ ಗಡಿಯನ್ನು ಹೊಂದಿಕೊಂಡ ಭಾಗದಲ್ಲಿ ನಿಗಾ ಹೆಚ್ಚಿಸಲಾಗುವುದು ಎಂದಿದ್ದಾರೆ.
ದಸರಾ ಸಂದರ್ಭದಲ್ಲಿ ಮೈಸೂರು, ಮಡಿಕೇರಿ, ಮಂಗಳೂರಿನಲ್ಲಿ ಭದ್ರತೆ ಹೆಚ್ಚಿಸಲಾಗಿತ್ತು. ದಸರಾ ಸಂದರ್ಭದಲ್ಲಿ ಹೆಚ್ಚು ಜನರು ಸೇರುವುದರಿಂದ ಗಮನ ಹರಿಸಲು ಪೊಲೀಸರಿಗೆ ಸೂಚನೆ ನೀಡಲಾಗಿತ್ತು ಎಂದು ಪ್ರಶ್ನೆ ಒಂದಕ್ಕೆ ಉತ್ತರಿಸಿದರು. ಸೈಬರ್ ಕ್ರೈಮ್ ಹೆಚ್ಚುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಸೈಬರ್ ಅಪರಾಧ ಪತ್ತೆಗಾಗಿ ಸಾಫ್ಟ್ ವೇರ್ ಅಭಿವೃದ್ಧಿ ಪಡಿಸುತ್ತಿದ್ದೇವೆ. ಅದನ್ನು ನ್ಯಾಶನಲ್, ಇಂಟರ್ನ್ಯಾಷನಲ್ ಲೆವೆಲಲ್ಲಿ ಒಯ್ಯಬೇಕಿದೆ. ಅದಕ್ಕಾಗಿ ಕ್ರಮ ವಹಿಸುತ್ತಿದ್ದೇವೆ ಎಂದರು.
ಪಿಎಸ್ಐ ಹಗರಣ ಬಳಿಕ ಪೊಲೀಸ್ ನೇಮಕಾತಿ ಆಗುತ್ತಿಲ್ಲ ಎಂಬ ಪ್ರಶ್ನೆಗೆ, ಸರ್ಕಾರದ ಅಭಿಪ್ರಾಯ ಕೋರ್ಟಿಗೆ ತಿಳಿಸಿದ್ದೇವೆ. ಪರೀಕ್ಷೆ ಇನ್ನಿತರ ಪ್ರಕ್ರಿಯೆಗಳನ್ನು ನಡೆಸಲು ಅವಕಾಶ ನೀಡಬೇಕೆಂಬ ಬಗ್ಗೆ ಹೇಳಿದ್ದೇವೆ ಎಂದರು.
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಟಿಕೆಟ್ ಹೆಸರಲ್ಲಿ ವಂಚನೆ ಪ್ರಕರಣದ ಬಗ್ಗೆ ಕೇಳಿದ ಪ್ರಶ್ನೆಗೆ, ನಮ್ಮ ಎಸ್ಪಿ ಲೆವೆಲಲ್ಲೇ ತನಿಖೆ ಮಾಡುತ್ತೇವೆ. ನಮ್ಮ ಪೊಲೀಸರು ಸಮರ್ಥರಿದ್ದಾರೆ, ತನಿಖೆ ಮಾಡುತ್ತಾರೆ. ಹೆಚ್ಚುವರಿ ತನಿಖೆ ಬೇಕಿದ್ದರೆ ನೋಡುತ್ತೇವೆ ಎಂದರು.
Bomb blast in Kerala, Home Minister Parameshwara orders police to be on high alert in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm