ಬ್ರೇಕಿಂಗ್ ನ್ಯೂಸ್
30-10-23 04:44 pm Mangalore Correspondent ಕರಾವಳಿ
ಉಳ್ಳಾಲ, ಅ.30: ಆತ್ಮಹತ್ಯೆ ತಡೆಗೆಂದು ನೇತ್ರಾವತಿ ನದಿಯ ಸೇತುವೆಯ ಇಬ್ಬದಿಗೆ ಹಾಕಿದ್ದ ತಡೆ ಬೇಲಿಯನ್ನೇ ಹಾರಿ ಯುವಕನೋರ್ವ ನದಿಗೆ ಜಿಗಿದಿದ್ದು ನೀರಿನಲ್ಲಿ ಕೊಚ್ಚಿಹೋದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ತೊಕ್ಕೊಟ್ಟಿನಿಂದ ಮಂಗಳೂರಿನತ್ತ ಹುಂಡೈ ಐ10 ಕಾರಲ್ಲಿ ತೆರಳುತ್ತಿದ್ದ ಯುವಕನೋರ್ವ ಕಾರನ್ನ ಸೇತುವೆ ಬಳಿಯಲ್ಲೇ ನಿಲ್ಲಿಸಿದ್ದಾನೆ. ವಾಹನ ಸವಾರರು ನೋಡ ನೋಡುತ್ತಲೇ ಸೇತುವೆಯ ತುದಿಯ ಆವರಣ ಗೋಡೆ ಹಾರಿದ ಯುವಕ ಆವರಣ ಗೋಡೆಗೆ ಅಳವಡಿಸಲಾಗಿದ್ದ ಪೈಪ್ ಲೈನ್ ಗಳ ಮೇಲೆ ನಡೆಯುತ್ತಲೇ ಸೇತುವೆ ಮಧ್ಯ ಭಾಗ ತಲುಪಿ ನದಿಗೆ ಜಿಗಿದು ನೀರು ಪಾಲಾಗಿದ್ದಾನೆ. ಯುವಕ ನೀರು ಪಾಲಾಗುತ್ತಿರುವ ದೃಶ್ಯವನ್ನ ಕೆಲವರು ಮೊಬೈಲಿನಲ್ಲಿ ರೆಕಾರ್ಡ್ ಮಾಡಿದ್ದಾರೆ.


ಚಿಕ್ಕಮಂಗಳೂರು ಮೂಲದ ಪ್ರಸನ್ನ ಕುಮಾರ್ ಎಂಬವರ ಹೆಸರಲ್ಲಿ ಕಾರು ನೋಂದಣಿಗೊಂಡಿದೆ. ಅಲ್ಲದೆ, ಕಾರಲ್ಲಿ ಪ್ರಸನ್ನ ಅವರ ಡ್ರೈವಿಂಗ್ ಲೈಸೆನ್ಸ್ ದೊರಕಿದೆ. ಸ್ಥಳೀಯ ನಾಡದೋಣಿಗಳಿಂದ ಪೊಲೀಸರು ಯುವಕನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕಂಕನಾಡಿ ನಗರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸಿದ್ದಾರೆ. ಪ್ರಸನ್ನ ಅವರ ಫ್ಯಾಮಿಲಿಯನ್ನು ಪೊಲೀಸರು ಸಂಪರ್ಕಿಸಿದ್ದು ಪ್ರಸನ್ನ ಮತ್ತು ಸುಮನ್ ಎಂಬವರು ತರಕಾರಿ ಮಾರಾಟಕ್ಕೆಂದು ಮಂಗಳೂರಿಗೆ ಬಂದಿದ್ದರು ಎಂದು ತಿಳಿದುಬಂದಿದೆ. ಈಗ ನೀರಿಗೆ ಹಾರಿದ ವ್ಯಕ್ತಿ ಪ್ರಸನ್ನ ಹೌದಾ ಅಥವಾ ಬೇರೆ ವ್ಯಕ್ತಿಯೇ ಎಂದು ಗೊತ್ತಾಗಿಲ್ಲ.
ನೇತ್ರಾವತಿ ಸೇತುವೆಯಲ್ಲಿ ನಿರಂತರವಾಗಿ ನಡೆಯುತ್ತಿದ್ದ ಆತ್ಮಹತ್ಯೆಗಳಿಗೆ ಕಡಿವಾಣ ಹಾಕಲು ಮಂಂಗಳೂರು ನಗರಾಭಿವೃದ್ಧಿ ಪ್ರಾಧಿಕಾರವು ಎರಡು ವರ್ಷಗಳ ಹಿಂದೆ ಸುಮಾರು 50 ಲಕ್ಷ ವೆಚ್ಚದಲ್ಲಿ ಸೇತುವೆಗೆ ಕಬ್ಬಿಣದ ತಡೆ ಬೇಲಿ ಅಳವಡಿಸಿತ್ತು. ಬೇಲಿ ಅಳವಡಿಸಿದ ನಂತರ ಸೇತುವೆಯಲ್ಲಿ ಹಾರಿ ಸಾಯುವುದು ಕಡಿಮೆಯಾಗಿತ್ತು. ಇದೀಗ ಬೇಲಿಯನ್ನೇ ಲೆಕ್ಕಿಸದೆ ಯುವಕ ನದಿಗೆ ಜಿಗಿದಿದ್ದು ಸಾವಿನ ದಾರಿ ಹಿಡಿದವನಿಗೆ ಬೇಲಿ ಅಡ್ಡಿಯಾಗಲ್ಲ ಎನ್ನುವ ಸಂದೇಶ ನೀಡಿದ್ದಾನೆ.
Chikmagaluru man jumps into Netravati river at Ullal bridge in Mangalore by parking his car aside.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm