ಬ್ರೇಕಿಂಗ್ ನ್ಯೂಸ್
30-10-23 04:44 pm Mangalore Correspondent ಕರಾವಳಿ
ಉಳ್ಳಾಲ, ಅ.30: ಆತ್ಮಹತ್ಯೆ ತಡೆಗೆಂದು ನೇತ್ರಾವತಿ ನದಿಯ ಸೇತುವೆಯ ಇಬ್ಬದಿಗೆ ಹಾಕಿದ್ದ ತಡೆ ಬೇಲಿಯನ್ನೇ ಹಾರಿ ಯುವಕನೋರ್ವ ನದಿಗೆ ಜಿಗಿದಿದ್ದು ನೀರಿನಲ್ಲಿ ಕೊಚ್ಚಿಹೋದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ತೊಕ್ಕೊಟ್ಟಿನಿಂದ ಮಂಗಳೂರಿನತ್ತ ಹುಂಡೈ ಐ10 ಕಾರಲ್ಲಿ ತೆರಳುತ್ತಿದ್ದ ಯುವಕನೋರ್ವ ಕಾರನ್ನ ಸೇತುವೆ ಬಳಿಯಲ್ಲೇ ನಿಲ್ಲಿಸಿದ್ದಾನೆ. ವಾಹನ ಸವಾರರು ನೋಡ ನೋಡುತ್ತಲೇ ಸೇತುವೆಯ ತುದಿಯ ಆವರಣ ಗೋಡೆ ಹಾರಿದ ಯುವಕ ಆವರಣ ಗೋಡೆಗೆ ಅಳವಡಿಸಲಾಗಿದ್ದ ಪೈಪ್ ಲೈನ್ ಗಳ ಮೇಲೆ ನಡೆಯುತ್ತಲೇ ಸೇತುವೆ ಮಧ್ಯ ಭಾಗ ತಲುಪಿ ನದಿಗೆ ಜಿಗಿದು ನೀರು ಪಾಲಾಗಿದ್ದಾನೆ. ಯುವಕ ನೀರು ಪಾಲಾಗುತ್ತಿರುವ ದೃಶ್ಯವನ್ನ ಕೆಲವರು ಮೊಬೈಲಿನಲ್ಲಿ ರೆಕಾರ್ಡ್ ಮಾಡಿದ್ದಾರೆ.


ಚಿಕ್ಕಮಂಗಳೂರು ಮೂಲದ ಪ್ರಸನ್ನ ಕುಮಾರ್ ಎಂಬವರ ಹೆಸರಲ್ಲಿ ಕಾರು ನೋಂದಣಿಗೊಂಡಿದೆ. ಅಲ್ಲದೆ, ಕಾರಲ್ಲಿ ಪ್ರಸನ್ನ ಅವರ ಡ್ರೈವಿಂಗ್ ಲೈಸೆನ್ಸ್ ದೊರಕಿದೆ. ಸ್ಥಳೀಯ ನಾಡದೋಣಿಗಳಿಂದ ಪೊಲೀಸರು ಯುವಕನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕಂಕನಾಡಿ ನಗರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸಿದ್ದಾರೆ. ಪ್ರಸನ್ನ ಅವರ ಫ್ಯಾಮಿಲಿಯನ್ನು ಪೊಲೀಸರು ಸಂಪರ್ಕಿಸಿದ್ದು ಪ್ರಸನ್ನ ಮತ್ತು ಸುಮನ್ ಎಂಬವರು ತರಕಾರಿ ಮಾರಾಟಕ್ಕೆಂದು ಮಂಗಳೂರಿಗೆ ಬಂದಿದ್ದರು ಎಂದು ತಿಳಿದುಬಂದಿದೆ. ಈಗ ನೀರಿಗೆ ಹಾರಿದ ವ್ಯಕ್ತಿ ಪ್ರಸನ್ನ ಹೌದಾ ಅಥವಾ ಬೇರೆ ವ್ಯಕ್ತಿಯೇ ಎಂದು ಗೊತ್ತಾಗಿಲ್ಲ.
ನೇತ್ರಾವತಿ ಸೇತುವೆಯಲ್ಲಿ ನಿರಂತರವಾಗಿ ನಡೆಯುತ್ತಿದ್ದ ಆತ್ಮಹತ್ಯೆಗಳಿಗೆ ಕಡಿವಾಣ ಹಾಕಲು ಮಂಂಗಳೂರು ನಗರಾಭಿವೃದ್ಧಿ ಪ್ರಾಧಿಕಾರವು ಎರಡು ವರ್ಷಗಳ ಹಿಂದೆ ಸುಮಾರು 50 ಲಕ್ಷ ವೆಚ್ಚದಲ್ಲಿ ಸೇತುವೆಗೆ ಕಬ್ಬಿಣದ ತಡೆ ಬೇಲಿ ಅಳವಡಿಸಿತ್ತು. ಬೇಲಿ ಅಳವಡಿಸಿದ ನಂತರ ಸೇತುವೆಯಲ್ಲಿ ಹಾರಿ ಸಾಯುವುದು ಕಡಿಮೆಯಾಗಿತ್ತು. ಇದೀಗ ಬೇಲಿಯನ್ನೇ ಲೆಕ್ಕಿಸದೆ ಯುವಕ ನದಿಗೆ ಜಿಗಿದಿದ್ದು ಸಾವಿನ ದಾರಿ ಹಿಡಿದವನಿಗೆ ಬೇಲಿ ಅಡ್ಡಿಯಾಗಲ್ಲ ಎನ್ನುವ ಸಂದೇಶ ನೀಡಿದ್ದಾನೆ.
Chikmagaluru man jumps into Netravati river at Ullal bridge in Mangalore by parking his car aside.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm