ಬ್ರೇಕಿಂಗ್ ನ್ಯೂಸ್
31-10-23 11:00 am Mangaluru Correspondent ಕರಾವಳಿ
ಮಂಗಳೂರು, ಅ.31: ಕರಾವಳಿಯ ಪ್ರಖ್ಯಾತ "ಆಭರಣ" ಸಂಸ್ಥೆಯ ಮೇಲೆ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಉಡುಪಿ, ಮಂಗಳೂರು, ಬೆಳ್ತಂಗಡಿ, ಪಡುಬಿದ್ರಿ, ಬ್ರಹ್ಮಾವರ ಸೇರಿದಂತೆ ಸಂಸ್ಥೆಯ ಮಳಿಗೆಗಳಲ್ಲಿ ದಾಳಿ ನಡೆಸಿದ್ದಾರೆ.
ಇಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ಸಂಸ್ಥೆಯ ಎಲ್ಲ ಆಭರಣ ಮಳಿಗೆಗಳ ಒಳಹೊಕ್ಕಿದ್ದು ಪರಿಶೀಲನೆಯಲ್ಲಿ ತೊಡಗಿದ್ದಾರೆ. ಸಾಮಾನ್ಯವಾಗಿ ಜುವೆಲ್ಲರಿ ಸಂಸ್ಥೆಯ ಮಳಿಗೆ 9.30ರ ವೇಳೆಗೆ ತೆರೆದುಕೊಳ್ಳುತ್ತದೆ. ಎಂದಿನಂತೆ ನೌಕರರು ಮಳಿಗೆಯ ಕಡೆಗೆ ಬರುತ್ತಿದ್ದಂತೆ ಶಾಕ್ ಆಗಿದ್ದು ಅದಾಗಲೇ ಮಳಿಗೆ ಓಪನ್ ಆಗಿತ್ತು. ಐಟಿ ಅಧಿಕಾರಿಗಳು ಒಳಗಡೆ ತಪಾಸಣೆಯಲ್ಲಿ ತೊಡಗಿದ್ದರು.


ಉಡುಪಿ ಮತ್ತು ಬೆಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಆಭರಣ ಜುವೆಲ್ಲರಿ ಸಂಸ್ಥೆ ಹದಿನೈದು ವರ್ಷಗಳ ಮೊದಲಿಗೆ ಉಡುಪಿಯಲ್ಲಿ ಆರಂಭಗೊಂಡಿತ್ತು. ಗುಜ್ಜಾಡಿ ನರಸಿಂಹ ನಾಯಕ್ ಸೋದರರು ಮಳಿಗೆಯನ್ನು ಸ್ಥಾಪಿಸಿದ್ದು ಆನಂತರದ ವರ್ಷಗಳಲ್ಲಿ ರಾಜ್ಯಾದ್ಯಂತ ಮಳಿಗೆಯನ್ನು ಆರಂಭಿಸಿದ್ದರು. ಉಡುಪಿ ಜಿಲ್ಲೆಯ ಉಡುಪಿ, ಪಡುಬಿದ್ರಿ, ಬ್ರಹ್ಮಾವರ, ಕಾರ್ಕಳ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಮೂರು ಕಡೆ ಜುವೆಲ್ಲರಿ ಇದೆ. ಬಂಟ್ವಾಳ, ಬೆಳ್ತಂಗಡಿಯಲ್ಲೂ ಶಾಖೆ ಇದೆ. ಆಬಳಿಕ ಬೆಂಗಳೂರು, ಶಿವಮೊಗ್ಗದಲ್ಲಿಯೂ ಮಳಿಗೆ ಸ್ಥಾಪನೆಯಾಗಿತ್ತು.
ದಿಢೀರ್ ಐಟಿ ಇಲಾಖೆಯ ದಾಳಿಯಿಂದಾಗಿ ಮಳಿಗೆಯ ನೌಕರರು, ಸಂಸ್ಥೆಯ ಮಾಲಕರು ಬೆಚ್ಚಿ ಬಿದ್ದಿದ್ದಾರೆ. ಅಧಿಕಾರಿಗಳು ಜುವೆಲ್ಲರಿ ಸಂಸ್ಥೆಯ ವಹಿವಾಟು, ಆಸ್ತಿ, ತೆರಿಗೆ ಸಂಗ್ರಹ ವಿಚಾರದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರಿನ ಕದ್ರಿಯ ಶಿವಭಾಗ್ ನಲ್ಲಿ ಆಭರಣ ಜ್ಯುವೆಲ್ಲರಿಗೂ ಐಟಿ ದಾಳಿಯಾಗಿದ್ದು ಐಟಿ ಅಧಿಕಾರಿಗಳು ಟ್ಯಾಕ್ಸಿ ಇನೋವಾ ವಾಹನಗಳಲ್ಲಿ ದಾಳಿಗೆ ಬಂದಿದ್ದರು. ಐದಾರು ಮಂದಿ ಅಧಿಕಾರಿಗಳು ತಪಾಸಣೆಯಲ್ಲಿ ತೊಡಗಿದ್ದು ಬಿಲ್ಲಿಂಗ್ ವಿವರ, ಚಿನ್ನದ ಬೇರೆ ಬೇರೆ ದಾಖಲೆಗಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿ 14 ಹಾಗೂ ಗೋವಾದಲ್ಲಿ ಒಂದು ಆಭರಣ ಜ್ಯುವೆಲ್ಲರಿ ಮಳಿಗೆಗಳಿವೆ ಎನ್ನುವ ಮಾಹಿತಿಯಿದ್ದು ಎಲ್ಲ ಕಡೆಯೂ ದಾಳಿ ಆಗಿದೆ ಎನ್ನಲಾಗುತ್ತಿದೆ.
Income Tax (IT) officials conducted routine checks at the showrooms of Abharan Jewellers, a renowned jeweller of brand of coastal Karnataka, on Tuesday October 31. The routine checks by the IT officials began in the morning at multiple showrooms of the jewellery brand at Udupi, Mangaluru, Hebri, Karkala and Brahmavar.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am