ಬ್ರೇಕಿಂಗ್ ನ್ಯೂಸ್
31-10-23 05:07 pm Mangaluru Correspondent ಕರಾವಳಿ
ಮಂಗಳೂರು, ಅ.31: ಪುತ್ತೂರು ವಿಧಾನಸಭೆ ಕ್ಷೇತ್ರದ ಇತಿಹಾಸದಲ್ಲೇ ಮೊದಲ ಬಾರಿಗೆ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕಾಗಿ ಒಂದು ಸಾವಿರದ ಹತ್ತು ಕೋಟಿ ಅನುದಾನ ಬಂದಿದೆ. ಅದರ ಟೆಂಡರ್ ಆಗಿದ್ದು, ಶೀಘ್ರದಲ್ಲೇ ಕಾಮಗಾರಿ ಶುರು ಮಾಡುತ್ತೇವೆ. ಕೊಯ್ಲದಲ್ಲಿ ಪಶು ವೈದ್ಯಕೀಯ ಕಾಲೇಜಿಗೆ 24 ಕೋಟಿ ಅನುದಾನ ಬಂದಿದ್ದು, ಮುಂದಿನ ವರ್ಷದಿಂದಲೇ ಕಾಲೇಜು ಆರಂಭಿಸುತ್ತೇವೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಕಳೆದು ಐದು ವರ್ಷಗಳಲ್ಲಿ ಬಿಜೆಪಿ ಸರಕಾರ ಇತ್ತು. ಪಶು ವೈದ್ಯಕೀಯ ಕಾಲೇಜಿಗೆ ಕಳೆದ ಸಿದ್ದರಾಮಯ್ಯ ಸರಕಾರ ಇದ್ದಾಗಲೇ ಅನುದಾನ ಬಿಡುಗಡೆಗೊಂಡು ಕಟ್ಟಡ ರೆಡಿಯಾಗಿತ್ತು. ಐದು ವರ್ಷ ಕಾಲ ಅದನ್ನು ಆರಂಭಿಸಲು ಆಗಿರಲಿಲ್ಲ. ಧೂಳು ತಿನ್ನುತ್ತಿದ್ದ ಕಟ್ಟಡದಲ್ಲಿ ನವೀಕರಣ ಕೈಗೊಂಡು ಮುಂದಿನ ವರ್ಷದಲ್ಲೇ ಕಾಲೇಜು ಆರಂಭಿಸಲಾಗುವುದು ಎಂದು ಹೇಳಿದರು.
ಸುಳ್ಯ, ಪುತ್ತೂರಿನಿಂದ ಹಾಲನ್ನು ಮಂಗಳೂರಿಗೆ ತಂದು ಸಂಸ್ಕರಣೆ ಮಾಡುವುದರ ಬದಲು ಕೆಎಂಎಫ್ ಸಂಸ್ಥೆಯ ಇನ್ನೊಂದು ಪ್ಲಾಂಟನ್ನು ಪುತ್ತೂರಿನಲ್ಲೇ ಸ್ಥಾಪಿಸಲು ಯೋಜನೆ ಹಾಕಿದ್ದೇವೆ. ಅದಕ್ಕಾಗಿ ಹತ್ತು ಎಕರೆ ಜಾಗ ನೋಡಿದ್ದು ಹಾಲು ಸಂಸ್ಕರಣಾ ಕೇಂದ್ರ ಮಾಡುತ್ತೇವೆ ಎಂದು ಅಶೋಕ್ ರೈ ಹೇಳಿದರು. ಇದಲ್ಲದೆ, ಬೆಂಗಳೂರಿನಲ್ಲಿ ತುಳು ಭವನ ನಿರ್ಮಿಸಲಾಗುವುದು. ಕರಾವಳಿ ಭಾಗದ ಬಹಳಷ್ಟು ಮಂದಿ ಬೆಂಗಳೂರಿನಲ್ಲಿದ್ದಾರೆ. ಇಲ್ಲಿನವರು ತತ್ಕಾಲಕ್ಕೆ ಉಳಿದುಕೊಳ್ಳಲು ತುಳು ಭವನ ಸ್ಥಾಪನೆ ಮಾಡಲಾಗುವುದು. ತುಳು ಭಾಷೆಯನ್ನು ದ್ವಿತೀಯ ರಾಜ್ಯಭಾಷೆಯನ್ನಾಗಿ ಮಾನ್ಯತೆ ಕೊಡಲು ಯಾವುದೇ ಅನುದಾನ ಬೇಕಿಲ್ಲ. ನಮ್ಮವರ ಇಚ್ಛಾಶಕ್ತಿ ತೋರದೆ ಇರುವುದೇ ಸಮಸ್ಯೆ ಆಗಿದ್ದು. ತುಳು ಭಾಷೆಯ ಬಗ್ಗೆ ಮುತುವರ್ಜಿ ವಹಿಸಿದ್ದು, ಇನ್ನು ನಾಲ್ಕು ಇಲಾಖೆಗಳ ಎನ್ಓಸಿ ಬರಬೇಕಿದೆ. ನಾಲ್ಕೈದು ತಿಂಗಳಲ್ಲಿ ತುಳುವನ್ನು ದ್ವಿತೀಯ ಭಾಷೆಯನ್ನಾಗಿ ಮಾಡಿಸುತ್ತೇನೆ ಎಂದು ಹೇಳಿದರು.
ಬಿಜೆಪಿಯವರಿಗೆ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳನ್ನು ತಡೆದುಕೊಳ್ಳಲು ಆಗುತ್ತಿಲ್ಲ. ಇದಕ್ಕಾಗಿ ಏನೇನು ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ರಸ್ತೆಯಿಂದ 15 ಕಿಮೀ ಆಸುಪಾಸಿನ ನಗರಗಳಿಗೆ ಆ ರಸ್ತೆ ವಿಸ್ತರಣೆ ಮಾಡಲು ಅವಕಾಶ ಇದೆ. ಮಾಣಿಯಿಂದ 18 ಕಿಮೀ ದೂರ ಇರುವ ಪುತ್ತೂರಿಗೆ ಚತುಷ್ಪಥ ರಸ್ತೆ ಮಾಡಬೇಕಿದೆ. ಅದಕ್ಕಾಗಿ ಕೇಂದ್ರ ಹೆದ್ದಾರಿ ಇಲಾಖೆಯ ಜೊತೆಗೆ ಪ್ರಸ್ತಾಪ ಕೊಟ್ಟಿದ್ದು, ಅದನ್ನು ಮಾಡಿಸುತ್ತೇನೆ ಎಂದರು.
ಕಲ್ಲಡ್ಕ- ಉಪ್ಪಿನಂಗಡಿ ಹೆದ್ದಾರಿ ದುರವಸ್ಥೆ ಬಗ್ಗೆ ಕೇಳಿದ ಪ್ರಶ್ನೆಗೆ, ಅದನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆಯವರು ಮಾಡೋದು. ರಾಜ್ಯ ಸರಕಾರಕ್ಕೆ ಯಾವುದೇ ಹಸ್ತಕ್ಷೇಪ ಮಾಡಲಾಗದು. ಆದರೂ ಹೆದ್ದಾರಿ ಕೆಲಸ ಶೀಘ್ರಗೊಳಿಸಲು ಅಧಿಕಾರಿಗಳಿಗೆ ಒತ್ತಡ ಹೇರಲಾಗಿದೆ. ಇದನ್ನೆಲ್ಲ ಆಯಾ ಭಾಗದ ಸಂಸದರು ಮಾಡಬೇಕು. ಕೇರಳದಲ್ಲಿ ಒಳ್ಳೆಯ ರಸ್ತೆ ಆಗ್ತಾ ಇದೆ, ಅದಕ್ಕಾಗಿ ಅಭಿನಂದಿಸಬೇಕು. ಇಲ್ಲಿನ ಸಂಸದರು ಮುತುವರ್ಜಿ ವಹಿಸಿದರೆ ಹೆದ್ದಾರಿ ದುರವಸ್ಥೆ ಆಗುತ್ತಿರಲಿಲ್ಲ ಎಂದರು.
Puttur MLA Ashok Rai slams MP Nalin Kateel over Kalladka Mangalore Highway
25-06-25 02:56 pm
Bangalore Correspondent
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
25-06-25 11:10 am
HK News Desk
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
25-06-25 04:06 pm
HK News Desk
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am