ಬ್ರೇಕಿಂಗ್ ನ್ಯೂಸ್
31-10-23 09:41 pm Mangaluru Correspondent ಕರಾವಳಿ
ಉಳ್ಳಾಲ, ಅ.31: ರಾಜ್ಯದ 68 ವೈಯಕ್ತಿಕ ಸಾಧಕರು, 10 ಸಂಘ ಸಂಸ್ಥೆಗಳಿಗೆ ಈ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು ಕ್ರಿಕೆಟ್ ಆಟದಲ್ಲಿ ಉತ್ತುಂಗಕ್ಕೇರಿ ಬಂದ ಪ್ರಶಸ್ತಿ ಮೊತ್ತದಲ್ಲೇ ಜನಸೇವೆಯಲ್ಲಿ ತೊಡಗಿಸಿದ್ದ ಉಳ್ಳಾಲದ ಮಾರುತಿ ಜನಸೇವಾ ಸಂಘಕ್ಕೆ ಈ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ಕಳೆದ ಮೂವತ್ತು ವರುಷಗಳ ಹಿಂದೆ ಉಳ್ಳಾಲದ ಮೊಗವೀರ ಪಟ್ಣದಲ್ಲಿ ಹುಟ್ಟಿಕೊಂಡ ಮಾರುತಿ ಕ್ರಿಕೆಟರ್ಸ್ ತಂಡವು ಕ್ರಿಕೆಟ್ ಆಟದಲ್ಲಿ ಉತ್ತಮ ಪ್ರದರ್ಶನಗಳನ್ನ ನೀಡಿ ಸಿಕ್ಕಿದ ಪ್ರಶಸ್ತಿಯ ಮೊತ್ತವನ್ನ ಸಮಾಜ ಸೇವೆಗೆ ವಿನಿಯೋಗಿಸುತ್ತ ಮಾರುತಿ ಜನಸೇವಾ ಸಂಘವೆಂದು ಹೆಸರುವಾಸಿಯಾಗಿದೆ.
ವಿ.ವಿ ಮಟ್ಟದ ಖ್ಯಾತ ಕ್ರಿಕೆಟ್ ಆಟಗಾರರಾದ ಸುಧೀರ್ ವಿ. ಅಮೀನ್, ಅಶ್ವಥ್ ಪುತ್ರನ್, ಉದಯ ಸಾಲ್ಯಾನ್, ದಿನೇಶ್ ಕರ್ಕೇರ, ಅನಿಲ್ ಚರಣ್ ರಂತವರಿಗೆ ಇದೇ ತಂಡ ವೇದಿಕೆ ಆಗಿತ್ತು.
ಸಂಘದ ಬೆಳ್ಳಿಹಬ್ಬದ ನೆನಪಿಗಾಗಿ ಉಳ್ಳಾಲ ಮೊಗವೀರ ಸಂಘದ ಹಿರಿಯರು ಕಟ್ಟಿಸಿದ್ದ ಮೊಗವೀರ ಹಿರಿಯ ಪ್ರಾಥಮಿಕ ಶಾಲೆಗೆ ಅಂದಾಜು 1.5 ಕೋಟಿ ರೂ. ವೆಚ್ಚದಲ್ಲಿ ಒಂದು ಮಹಡಿಯ ಸುಸಜ್ಜಿತ ಕಟ್ಟಡವನ್ನ ಮರು ನಿರ್ಮಿಸಿ ಕೊಟ್ಟು ಅದರ ಉದ್ಘಾಟನಾ ಸಮಾರಂಭದ ಪ್ರಯುಕ್ತ ಉಳ್ಳಾಲದಲ್ಲಿ ಪ್ರಪ್ರಥಮವಾಗಿ ಎರಡು ದಿವಸಗಳ ಬೀಚ್ ಉತ್ಸವವನ್ನು ನಡೆಸಿ ಸರ್ವ ಧರ್ಮೀಯರಿಂದ ಶಹಬಾಷ್ ಗಳಿಸಿದ ಕೀರ್ತಿ ಮಾರುತಿ ಜನಸೇವಾ ಸಂಘಕ್ಕೆ ಸಲ್ಲುತ್ತದೆ.


ಕಡಲ್ಕೊರೆತಕ್ಕೆ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಸಂಘದ ವತಿಯಿಂದ ಐದು ಮನೆ ನಿರ್ಮಿಸಿ ಕೊಡಲಾಗಿದೆ. ಕನಿಷ್ಟ ಎಂದರೂ ವರ್ಷಕ್ಕೆ ಐದು ಲಕ್ಷ ರೂ. ವ್ಯಯಿಸಿ ಪ್ರತಿಭಾ ಪುರಸ್ಕಾರ,ಸಾಧಕರಿಗೆ ಸನ್ಮಾನ, ಸ್ಥಳೀಯ ದೇವಸ್ಥಾನದ ಪ್ರಧಾನ ಅರ್ಚಕರು, ಗುರಿಕಾರ ವೃಂದ ಹಾಗೂ ದೈವ ನರ್ತಕರಿಗೆ ಸಹಾಯಧನ ವಿತರಣೆ,ಕೊರೊನ ಲಾಕ್ ಡೌನ್ ಸಂದರ್ಭ 6ಲಕ್ಷ ರೂ. ವೆಚ್ಚ ಭರಿಸಿ ಆಹಾರ ಕಿಟ್ ಗಳನ್ನ ಸಂಘದ ವತಿಯಿಂದ ವಿತರಿಸಲಾಗಿದೆ.
ಆರ್ಥಿಕವಾಗಿ ಹಿಂದುಳಿದ ಮೂವತ್ತು ಕುಟುಂಬಕ್ಕೆ ಸಾಮೂಹಿಕ ವಿವಾಹ ಮಾಡುವ ಭವಿಷ್ಯದ ಯೋಜನೆಯನ್ನ ಸಂಘ ಇಟ್ಟುಕೊಂಡಿದೆ. ಮಾರುತಿ ಜನ ಸೇವಾ ಸಂಘವು ಕೆಲ ವರುಷಗಳ ಹಿಂದೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನ ಗಳಿಸಿದ್ದು ಈ ಬಾರಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನವಾಗಿದೆ.
Ullal Maruthi Jana Seva Sangha to get karnataka rajyotsava award 2023 in Mangalore by Cricket charity.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm