ಬ್ರೇಕಿಂಗ್ ನ್ಯೂಸ್
03-11-23 11:39 am Mangalore Correspondent ಕರಾವಳಿ
ಮಂಗಳೂರು, ನ.3: ಪ್ರೀತಿಸುತ್ತಿದ್ದ ಹುಡುಗಿ ಜೊತೆಗೆ ಸುತ್ತಾಟಡಲು ಬಂದಿಲ್ಲವೆಂದು ಯುವಕನೊಬ್ಬ ಪಿಜಿ ಹಾಸ್ಟೆಲ್ ಕಟ್ಟಡಕ್ಕೆ ಕಲ್ಲೆಸೆದು ಹಾನಿಗೊಳಿಸಿದ ಘಟನೆ ನಗರದ ಆಗ್ನೆಸ್ ಕಾಲೇಜು ಬಳಿ ಗುರುವಾರ ರಾತ್ರಿ ನಡೆದಿದೆ.
ಸುಳ್ಯ ಮೂಲದ ವಿವೇಕ್ (18) ಎಂಬ ಯುವಕ ಕೃತ್ಯ ಎಸಗಿದ್ದು ಸ್ಥಳೀಯರು ಹಿಡಿದು ಆತನಿಗೆ ಥಳಿಸಿದ್ದಾರೆ. ಈತ ಮಂಗಳೂರಿನಲ್ಲಿ ಲೈಟಿಂಗ್ ಕೆಲಸ ಮಾಡುತ್ತಿದ್ದು ಆಗ್ನೆಸ್ ಬಳಿಯ ವಿದ್ಯಾರ್ಥಿನಿಯರ ಪಿಜಿ ಹಾಸ್ಟೆಲ್ ನಲ್ಲಿ ಕೆಲಸಕ್ಕಿದ್ದ ಯುವತಿಯ ಜೊತೆಗೆ ಪ್ರೀತಿ ಹೊಂದಿದ್ದ. ಗುರುವಾರ ಸಂಜೆ ಆಕೆಗೆ ಫೋನ್ ಮಾಡಿ, ಹೊರಗೆ ಸುತ್ತಾಡಲು ಬರುವಂತೆ ಕೇಳಿಕೊಂಡಿದ್ದ.
ಆದರೆ ಯುವತಿ ನಿನ್ನ ಜೊತೆಗೆ ಬರುವುದಿಲ್ಲ ಎಂದು ಹೇಳಿ ನಿರಾಕರಣೆ ಮಾಡಿದ್ದಳು. ಪದೇ ಪದೇ ಕರೆ ಮಾಡಿದರೂ ಕೆಲಸ ಇದೆಯೆಂದು ಹೇಳಿ ನಿರಾಕರಿಸಿದ್ದಕ್ಕೆ ಸಿಟ್ಟಿಗೆದ್ದ ಯುವಕ ಪಿಜಿ ಹಾಸ್ಟೆಲ್ ಮೇಲೆ ಕಲ್ಲು ತೂರಿದ್ದಾನೆ. ಹಾಸ್ಟೆಲ್ ಕಿಟಕಿ, ಗಾಜು ಒಡೆದು ಹೋಗಿದ್ದು ದಾಂಧಲೆಗೆ ಯತ್ನಿಸಿದ ಯುವಕನನ್ನು ಕೂಡಲೇ ಸ್ಥಳೀಯರು ಹಿಡಿದು ಥಳಿಸಿದ್ದಾರೆ. ರಾತ್ರಿ ಹತ್ತು ಗಂಟೆ ವೇಳೆಗೆ ಯುವಕನನ್ನು ಹಿಡಿದು ಥಳಿಸಿ ಕೂಡಿಹಾಕಿದ್ದರು. ಬಳಿಕ ಕದ್ರಿ ಪೊಲೀಸರನ್ನು ಕರೆಸಿ ಅವರ ವಶಕ್ಕೆ ಒಪ್ಪಿಸಿದ್ದಾರೆ. ಯುವಕನ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ. ಕುಡಿದ ಮತ್ತಿನಲ್ಲಿ ಕಲ್ಲು ತೂರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
In a shocking incident, a youth pelted stones at a PG hostel building near Agnes College in mangaluru on Thursday night after he refused to come out with a girl he was in love with.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm