ಬ್ರೇಕಿಂಗ್ ನ್ಯೂಸ್
03-11-23 01:32 pm Mangalore Correspondent ಕರಾವಳಿ
ಉಡುಪಿ, ನ.3: ಸತತ ಪರಿಶ್ರಮ, ಛಲಗಾರಿಕೆ ಇದ್ದರೆ ಯಾವುದೇ ಸಾಧನೆಯನ್ನೂ ಮಾಡಬಹುದು ಎಂಬುದನ್ನು ಉಡುಪಿ ಮೂಲದ ನಿವೇದಿತಾ ಶೆಟ್ಟಿ ತೋರಿಸಿಕೊಟ್ಟಿದ್ದಾರೆ. ಸಾಫ್ಟ್ ವೇರ್ ಇಂಜಿನಿಯರ್ ಕೆಲಸವನ್ನೇ ತೊರೆದು ಐಎಎಸ್ ಪರೀಕ್ಷೆ ಬರೆದು ತೇರ್ಗಡೆಯಾಗಿದ್ದಾರೆ.
ಯುಪಿಎಸ್ಸಿ 2022ರ ಸಾಲಿನ ಪರೀಕ್ಷೆಯ ಫಲಿತಾಂಶ ಬಂದಿದ್ದು ಪರೀಕ್ಷೆ ಬರೆದ 11 ಲಕ್ಷ ಅಭ್ಯರ್ಥಿಗಳ ಪೈಕಿ 1022 ಮಂದಿ ಆಯ್ಕೆಗೊಂಡಿದ್ದಾರೆ. ಮೂಲತಃ ಉಡುಪಿ ನಗರದ ನಿವಾಸಿಯಾಗಿರುವ ನಿವೇದಿತಾ ಅವರು ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದು ಸದಾನಂದ ಶೆಟ್ಟಿ ಮತ್ತು ಸಮಿತಾ ಶೆಟ್ಟಿ ದಂಪತಿಯ ಪುತ್ರಿ. ಇವರ ಪತಿ ದಿವಾಕರ ಶೆಟ್ಟಿ ಒಮಾನ್ ಸರಕಾರಿ ಟೆಕ್ನಿಕಲ್ ಯೂನಿವರ್ಸಿಟಿಯಲ್ಲಿ ಪ್ರಾಧ್ಯಾಪಕರಾಗಿದ್ದು ಮೂರು ವರ್ಷದ ಮಗುವಿನ ಜೊತೆಯಲ್ಲೇ ನಿವೇದಿತಾ ಹಗಲಿರುಳು ಓದುತ್ತಲೇ ಯಾವುದೇ ಕೋಚಿಂಗ್ ಪಡೆಯದೇ ಸಾಧನೆ ಮಾಡಿದ್ದಾರೆ.
ನಿವೇದಿತಾ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದು ತಮ್ಮ ಪ್ರೈಮರಿ ವಿದ್ಯಾಭ್ಯಾಸವನ್ನು ಉಡುಪಿಯ ಮಿಲಾಗ್ರಿಸ್ ಶಾಲೆಯಲ್ಲಿ ಮಾಡಿದ್ದರು. ಬಳಿಕ ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಮುಗಿಸಿದ್ದರು. ಕೊನೆಯ ವರ್ಷದ ಕಲಿಕೆಯಲ್ಲಿರುವಾಗಲೇ ಕ್ಯಾಂಪಸ್ ಸೆಲೆಕ್ಷನ್ನಲ್ಲಿ ಒಳ್ಳೆಯ ನೌಕರಿ ಪಡೆದಿದ್ದರು. ನಾಗರಿಕ ಸೇವಾ ಪರೀಕ್ಷೆ ಬರೆಯಬೇಕೆಂಬ ಹಂಬಲದಲ್ಲಿ ಉದ್ಯೋಗ ಮಾಡುತ್ತಲೇ ಯುಪಿಎಸ್ಸಿ ಪರೀಕ್ಷೆಗೆ ತಯಾರಿ ನಡೆಸಿದ್ದರು. ಬಳಿಕ ತಮ್ಮ ಉದ್ಯೋಗವನ್ನೇ ಬಿಟ್ಟು ಪೂರ್ಣ ಪ್ರಮಾಣದಲ್ಲಿ ಯುಪಿಎಸ್ಸಿ ಪರೀಕ್ಷೆ ತಯಾರಿ ನಡೆಸಿದ್ದರು. ಸತತ ಪ್ರಯತ್ನದಿಂದ ಯಾವುದೇ ಕೋಚಿಂಗ್ ಪಡೆಯದೆ 2022ರ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಿದ್ದಾರೆ.
The Union Public Service Commission commonly abbreviated as UPSC released the consolidated list of civil services examinations of 2022. Though lacs of candidates write this examination, considered the toughest in the country, only handful clear the same.
25-06-25 02:56 pm
Bangalore Correspondent
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
25-06-25 11:10 am
HK News Desk
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
25-06-25 04:06 pm
HK News Desk
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am