ಬ್ರೇಕಿಂಗ್ ನ್ಯೂಸ್
03-11-23 09:59 pm Mangalore Correspondent ಕರಾವಳಿ
ಪುತ್ತೂರು, ನ.3: ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಲೋಕಸಭೆ ಚುನಾವಣೆ ಸ್ಪರ್ಧಾ ಕಣದಿಂದ ಹಿಂದೆ ಸರಿಯುವ ಮಾತನಾಡಿದ್ದಾರೆ. ಚುನಾವಣೆ ಸ್ಪರ್ಧೆ, ಪದವಿಯಲ್ಲಿ ನನಗೆ ಆಸಕ್ತಿಯಿಲ್ಲ ಎಂದು ಡೀವಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.
ಬಿಜೆಪಿ ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಸುಳ್ಯದಂತಹ ಕುಗ್ರಾಮದಲ್ಲಿದ್ದ ನನ್ನನ್ನು ಪಕ್ಷ ಶಾಸಕ, ಸಂಸದ, ಕೇಂದ್ರ ಸಚಿವ, ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಬಿ.ಎಸ್.ಯಡಿಯೂರಪ್ಪ ಅವರ ಬಳಿಕ ಪಕ್ಷದಲ್ಲಿ ಇಷ್ಟೊಂದು ಸ್ಥಾನಗಳನ್ನು ಪಡೆದ ವ್ಯಕ್ತಿ ನಾನೊಬ್ಬನೇ. ಇನ್ನು ಏನಿದ್ದರೂ ಪಕ್ಷವನ್ನು ಗೆಲ್ಲಿಸುವುದರಲ್ಲಿ ನನಗೆ ಆಸಕ್ತಿ. ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿಯಾಗಿ ಮಾಡುವುದರಲ್ಲಷ್ಟೆ ನನ್ನ ಆದ್ಯತೆ ಎಂದು ಹೇಳಿದ್ದಾರೆ.
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಯಾರು ನಿಂತರೂ ಬಿಜೆಪಿಗೆ ಸೋಲಾಗಲ್ಲ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಇಡೀ ರಾಜ್ಯಕ್ಕೆ ಇದು ಅನ್ವಯವಾಗಲಿದೆ. 25 ಅಲ್ಲ, ಈ ಬಾರಿ 28 ಕ್ಷೇತ್ರವನ್ನೂ ಗೆಲ್ಲಲಿದ್ದೇವೆ ಎಂದು ಹೇಳಿದ್ದಾರೆ. ಇತ್ತೀಚೆಗೆ ಪಕ್ಷದ ಕೇಂದ್ರ ನಾಯಕರ ಬಗ್ಗೆಯೇ ಅಸಮಾಧಾನ ವ್ಯಕ್ತಪಡಿಸಿದ್ದ ಡೀವಿ ಸದಾನಂದ ಗೌಡ, ದೆಹಲಿಗೆ ತೆರಳಿ ವಾಪಸ್ ಆಗಿದ್ದರು. ದೆಹಲಿಯಲ್ಲಿ ಕೇಂದ್ರ ನಾಯಕರನ್ನು ಭೇಟಿಯಾಗಿ ಬಂದ ಬಳಿಕ ದಿಢೀರ್ ಆಗಿ ರಾಜಕೀಯ ವೈರಾಗ್ಯದ ಮಾತುಗಳನ್ನಾಡಿದ್ದಾರೆ.
ಹೀಗಾಗಿ ದೆಹಲಿಗೆ ತೆರಳಿದ್ದಾಗ ಚುನಾವಣೆ ರಾಜಕಾರಣದಿಂದ ಹಿಂದೆ ಸರಿಯಲು ಕೇಂದ್ರ ನಾಯಕರೇ ಸೂಚಿಸಿದ್ದರೇ ಅನ್ನುವ ಅನುಮಾನ ಬಂದಿದೆ. ಚುನಾವಣೆ ಸ್ಪರ್ಧೆ ಮಾಡಲ್ಲ ಎಂದು ಪರೋಕ್ಷವಾಗಿ ಡಿವಿಎಸ್ ಹೇಳಿರುವುದು ಅಚ್ಚರಿ ಮೂಡಿಸಿದೆ.
Sadananda Gowda, not interested to contest in coming elections.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am