ಬ್ರೇಕಿಂಗ್ ನ್ಯೂಸ್
03-11-23 09:59 pm Mangalore Correspondent ಕರಾವಳಿ
ಪುತ್ತೂರು, ನ.3: ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಲೋಕಸಭೆ ಚುನಾವಣೆ ಸ್ಪರ್ಧಾ ಕಣದಿಂದ ಹಿಂದೆ ಸರಿಯುವ ಮಾತನಾಡಿದ್ದಾರೆ. ಚುನಾವಣೆ ಸ್ಪರ್ಧೆ, ಪದವಿಯಲ್ಲಿ ನನಗೆ ಆಸಕ್ತಿಯಿಲ್ಲ ಎಂದು ಡೀವಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.
ಬಿಜೆಪಿ ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಸುಳ್ಯದಂತಹ ಕುಗ್ರಾಮದಲ್ಲಿದ್ದ ನನ್ನನ್ನು ಪಕ್ಷ ಶಾಸಕ, ಸಂಸದ, ಕೇಂದ್ರ ಸಚಿವ, ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಬಿ.ಎಸ್.ಯಡಿಯೂರಪ್ಪ ಅವರ ಬಳಿಕ ಪಕ್ಷದಲ್ಲಿ ಇಷ್ಟೊಂದು ಸ್ಥಾನಗಳನ್ನು ಪಡೆದ ವ್ಯಕ್ತಿ ನಾನೊಬ್ಬನೇ. ಇನ್ನು ಏನಿದ್ದರೂ ಪಕ್ಷವನ್ನು ಗೆಲ್ಲಿಸುವುದರಲ್ಲಿ ನನಗೆ ಆಸಕ್ತಿ. ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿಯಾಗಿ ಮಾಡುವುದರಲ್ಲಷ್ಟೆ ನನ್ನ ಆದ್ಯತೆ ಎಂದು ಹೇಳಿದ್ದಾರೆ.
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಯಾರು ನಿಂತರೂ ಬಿಜೆಪಿಗೆ ಸೋಲಾಗಲ್ಲ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಇಡೀ ರಾಜ್ಯಕ್ಕೆ ಇದು ಅನ್ವಯವಾಗಲಿದೆ. 25 ಅಲ್ಲ, ಈ ಬಾರಿ 28 ಕ್ಷೇತ್ರವನ್ನೂ ಗೆಲ್ಲಲಿದ್ದೇವೆ ಎಂದು ಹೇಳಿದ್ದಾರೆ. ಇತ್ತೀಚೆಗೆ ಪಕ್ಷದ ಕೇಂದ್ರ ನಾಯಕರ ಬಗ್ಗೆಯೇ ಅಸಮಾಧಾನ ವ್ಯಕ್ತಪಡಿಸಿದ್ದ ಡೀವಿ ಸದಾನಂದ ಗೌಡ, ದೆಹಲಿಗೆ ತೆರಳಿ ವಾಪಸ್ ಆಗಿದ್ದರು. ದೆಹಲಿಯಲ್ಲಿ ಕೇಂದ್ರ ನಾಯಕರನ್ನು ಭೇಟಿಯಾಗಿ ಬಂದ ಬಳಿಕ ದಿಢೀರ್ ಆಗಿ ರಾಜಕೀಯ ವೈರಾಗ್ಯದ ಮಾತುಗಳನ್ನಾಡಿದ್ದಾರೆ.
ಹೀಗಾಗಿ ದೆಹಲಿಗೆ ತೆರಳಿದ್ದಾಗ ಚುನಾವಣೆ ರಾಜಕಾರಣದಿಂದ ಹಿಂದೆ ಸರಿಯಲು ಕೇಂದ್ರ ನಾಯಕರೇ ಸೂಚಿಸಿದ್ದರೇ ಅನ್ನುವ ಅನುಮಾನ ಬಂದಿದೆ. ಚುನಾವಣೆ ಸ್ಪರ್ಧೆ ಮಾಡಲ್ಲ ಎಂದು ಪರೋಕ್ಷವಾಗಿ ಡಿವಿಎಸ್ ಹೇಳಿರುವುದು ಅಚ್ಚರಿ ಮೂಡಿಸಿದೆ.
Sadananda Gowda, not interested to contest in coming elections.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm