ಬ್ರೇಕಿಂಗ್ ನ್ಯೂಸ್
04-11-23 11:50 am Mangalore Correspondent ಕರಾವಳಿ
ಮಂಗಳೂರು, ನ.4: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಮಂಗಳೂರು ಪೋಕ್ಸೊ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ದ.ಕ. ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ (ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶರಾದ ಮಂಜುಳಾ ಮಹತ್ವದ ತೀರ್ಪು ನೀಡಿದ್ದು ಬಾಲಕಿಗೆ 10.50 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಮೂಲತಃ ಬಾಗಲಕೋಟೆ ಜಿಲ್ಲೆಯ ಹರಡೊಳ್ಳಿಯ ನಿವಾಸಿ ಶ್ರೀಕಾಂತ್ ಶಿಕ್ಷೆಗೊಳಗಾದ ಆರೋಪಿ.
ಬಜ್ಪೆ ಠಾಣೆ ವ್ಯಾಪ್ತಿಯ ಕರಂಬಾರ್ ಗ್ರಾಮದ ಕಂಪನಿಯೊಂದಕ್ಕೆ ಸೇರಿದ ಶೆಡ್ ಒಂದರಲ್ಲಿ ಪರಿಶಿಷ್ಟ ವರ್ಗದ ಬಾಲಕಿ ಪೋಷಕರೊಂದಿಗೆ ವಾಸವಿದ್ದಳು. ಆರೋಪಿ ಶ್ರೀಕಾಂತ್ ಪಕ್ಕದ ಶೆಡ್ನಲ್ಲಿ ವಾಸವಾಗಿದ್ದ. ಪೋಷಕರು ಮನೆಯಲ್ಲಿ ಇಲ್ಲದ ವೇಳೆ ಪ್ರೀತಿಸುವ ನೆಪದಲ್ಲಿ ಬಾಲಕಿಯ ಮನವೊಲಿಸಿ ಏಪ್ರಿಲ್ 12, 2019ರಿಂದ ಹಲವು ಬಾರಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಇದರ ಫೋಟೋಗಳನ್ನು ತೆಗೆದುಕೊಂಡಿದ್ದ ಆರೋಪಿ, ಯಾರಿಗಾದರೂ ವಿಷಯ ಬಹಿರಂಗಪಡಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಶಾಲೆಯಲ್ಲಿ ಅಸ್ವಸ್ಥಳಾಗಿದ್ದ ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಆಕೆ ಗರ್ಭಿಣಿಯಾಗಿರುವುದು ತಿಳಿದುಬಂದಿತ್ತು. ಬಳಿಕ ಮಗುವಿಗೆ ಜನ್ಮ ನೀಡಿದ್ದ ಬಾಲಕಿ ಪೋಲಿಸ್ ದೂರು ನೀಡಿದ್ದಳು.
ಬಜ್ಪೆ ಠಾಣೆಯಲ್ಲಿ ದಾಖಲಾಗಿದ್ದ ದೂರು ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಎಸಿಪಿ ಕೆ.ಯು. ಬೆಳ್ಳಿಯಪ್ಪ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿಗೆ ಗರಿಷ್ಠ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಐಪಿಸಿ ಕಲಂ 376(2) ಎನ್ ಅಡಿಯಲ್ಲಿ 10 ವರ್ಷ ಕಠಿಣ ಸಜೆ ಮತ್ತು 10 ಸಾವಿರ ದಂಡ, ಕಲಂ 376(3) ಅಡಿಯಲ್ಲಿ 20 ವರ್ಷ ಕಠಿಣ ಸಜೆ, 506 ಅಡಿಯಲ್ಲಿ ಒಂದು ವರ್ಷ ಸಾದಾ ಸಜೆ ವಿಧಿಸಿದೆ. ಅಲ್ಲದೆ, ನೊಂದ ಬಾಲಕಿಗೆ 10.50 ಲಕ್ಷ ರೂ. ಪರಿಹಾರ ನೀಡುವಂತೆ ಸರ್ಕಾರಕ್ಕೆ ಆದೇಶ ಮಾಡಿದ್ದಾರೆ. ಸಂತ್ರಸ್ತೆ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ವಾದ ಮಂಡಿಸಿದ್ದರು.
Bagalkote man sentensed to 20 years of imprisonment for rape of Dalit girl in Mangalore.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm