ಬ್ರೇಕಿಂಗ್ ನ್ಯೂಸ್
04-11-23 11:50 am Mangalore Correspondent ಕರಾವಳಿ
ಮಂಗಳೂರು, ನ.4: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಮಂಗಳೂರು ಪೋಕ್ಸೊ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ದ.ಕ. ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ (ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶರಾದ ಮಂಜುಳಾ ಮಹತ್ವದ ತೀರ್ಪು ನೀಡಿದ್ದು ಬಾಲಕಿಗೆ 10.50 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಮೂಲತಃ ಬಾಗಲಕೋಟೆ ಜಿಲ್ಲೆಯ ಹರಡೊಳ್ಳಿಯ ನಿವಾಸಿ ಶ್ರೀಕಾಂತ್ ಶಿಕ್ಷೆಗೊಳಗಾದ ಆರೋಪಿ.
ಬಜ್ಪೆ ಠಾಣೆ ವ್ಯಾಪ್ತಿಯ ಕರಂಬಾರ್ ಗ್ರಾಮದ ಕಂಪನಿಯೊಂದಕ್ಕೆ ಸೇರಿದ ಶೆಡ್ ಒಂದರಲ್ಲಿ ಪರಿಶಿಷ್ಟ ವರ್ಗದ ಬಾಲಕಿ ಪೋಷಕರೊಂದಿಗೆ ವಾಸವಿದ್ದಳು. ಆರೋಪಿ ಶ್ರೀಕಾಂತ್ ಪಕ್ಕದ ಶೆಡ್ನಲ್ಲಿ ವಾಸವಾಗಿದ್ದ. ಪೋಷಕರು ಮನೆಯಲ್ಲಿ ಇಲ್ಲದ ವೇಳೆ ಪ್ರೀತಿಸುವ ನೆಪದಲ್ಲಿ ಬಾಲಕಿಯ ಮನವೊಲಿಸಿ ಏಪ್ರಿಲ್ 12, 2019ರಿಂದ ಹಲವು ಬಾರಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಇದರ ಫೋಟೋಗಳನ್ನು ತೆಗೆದುಕೊಂಡಿದ್ದ ಆರೋಪಿ, ಯಾರಿಗಾದರೂ ವಿಷಯ ಬಹಿರಂಗಪಡಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಶಾಲೆಯಲ್ಲಿ ಅಸ್ವಸ್ಥಳಾಗಿದ್ದ ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಆಕೆ ಗರ್ಭಿಣಿಯಾಗಿರುವುದು ತಿಳಿದುಬಂದಿತ್ತು. ಬಳಿಕ ಮಗುವಿಗೆ ಜನ್ಮ ನೀಡಿದ್ದ ಬಾಲಕಿ ಪೋಲಿಸ್ ದೂರು ನೀಡಿದ್ದಳು.
ಬಜ್ಪೆ ಠಾಣೆಯಲ್ಲಿ ದಾಖಲಾಗಿದ್ದ ದೂರು ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಎಸಿಪಿ ಕೆ.ಯು. ಬೆಳ್ಳಿಯಪ್ಪ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿಗೆ ಗರಿಷ್ಠ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಐಪಿಸಿ ಕಲಂ 376(2) ಎನ್ ಅಡಿಯಲ್ಲಿ 10 ವರ್ಷ ಕಠಿಣ ಸಜೆ ಮತ್ತು 10 ಸಾವಿರ ದಂಡ, ಕಲಂ 376(3) ಅಡಿಯಲ್ಲಿ 20 ವರ್ಷ ಕಠಿಣ ಸಜೆ, 506 ಅಡಿಯಲ್ಲಿ ಒಂದು ವರ್ಷ ಸಾದಾ ಸಜೆ ವಿಧಿಸಿದೆ. ಅಲ್ಲದೆ, ನೊಂದ ಬಾಲಕಿಗೆ 10.50 ಲಕ್ಷ ರೂ. ಪರಿಹಾರ ನೀಡುವಂತೆ ಸರ್ಕಾರಕ್ಕೆ ಆದೇಶ ಮಾಡಿದ್ದಾರೆ. ಸಂತ್ರಸ್ತೆ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ವಾದ ಮಂಡಿಸಿದ್ದರು.
Bagalkote man sentensed to 20 years of imprisonment for rape of Dalit girl in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm