ಬ್ರೇಕಿಂಗ್ ನ್ಯೂಸ್
05-11-23 08:58 pm Mangalore Correspondent ಕರಾವಳಿ
ಮಂಗಳೂರು, ನ.5: ಮರಳಿನ ಸಮಸ್ಯೆಗೆ ಕಾಂಗ್ರೆಸ್ ಆಡಳಿತ ಕಾರಣ ಎಂದು ದೂರಿರುವ ಶಾಸಕ ವೇದವ್ಯಾಸ ಕಾಮತ್ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದು ನಿಮ್ಮ ಡಬಲ್ ಇಂಜಿನ್ ಸರ್ಕಾರ ಇದ್ದಾಗ ಯಾಕೆ ಪರಿಹರಿಸಲು ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದ್ದಾರೆ.
ಈ ಬಗ್ಗೆ ಸಚಿವರು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದು ಶಾಸಕರಾದ ವೇದವ್ಯಾಸ ಕಾಮತ್ ಅವರೇ, ದಕ್ಷಿಣ ಕನ್ನಡ ಜಿಲ್ಲೆಯ ಮರಳಿನ ಸಮಸ್ಯೆ ಕಾಂಗ್ರೆಸ್ ಸರ್ಕಾರ ಸೃಷ್ಟಿ ಮಾಡಿರುವುದಲ್ಲ. ಕಳೆದ 4 ವರ್ಷಗಳಿಂದ ನಿಮ್ಮದೇ ʻಡಬಲ್ ಇಂಜಿನ್ʼ ಸರ್ಕಾರವಿತ್ತು. ಶಾಸಕರು, ಸಚಿವರು, ಸಂಸದರು ಬಿಜೆಪಿಯವರೇ ಆಗಿದ್ದರು. ನಿಮ್ಮ ಅವಧಿಯಲ್ಲೇ ನಿಮಗೆ ಮರಳು ಗಣಿಗಾರಿಕೆ ಸಮಸ್ಯೆ ಬಗೆಹರಿಸಲು ಸಾಧ್ಯವಾಗಿಲ್ಲ.
![]()
ಜನರ ಮುಂದೆ ನೂರು ಬಾರಿ ಸುಳ್ಳು ಹೇಳಿ, ಅದೇ ಸತ್ಯ ಎಂಬಂತೆ ಬಿಂಬಿಸುವ ಚಾಳಿ ನಿಮ್ಮದು. ಅಧಿಕಾರ ಸಿಕ್ಕಾಗ ದೋಚಿದ್ದು ಬಿಟ್ಟರೆ ದೂರದೃಷ್ಟಿಯ ಒಂದೂ ಕೆಲಸ ಮಾಡಿಲ್ಲ. ಈಗ ದಿಢೀರನೇ ಗಾಢ ನಿದ್ದೆಯಿಂದ ಎಚ್ಚೆತ್ತು, ಕಾಂಗ್ರೆಸ್ ದೂರುತ್ತಿರುವುದು ನಾಚಿಕೆಗೇಡಿನ ಸಂಗತಿ.
ನಿಮ್ಮದೇ ಸರ್ಕಾರದ ಅವಧಿಯಲ್ಲಿ ರಾಜ್ಯದ ತಾಲೂಕು ಆಸ್ಪತ್ರೆಗಳು ನಿರ್ಲಕ್ಷ್ಯಕ್ಕೆ ಒಳಗಾಗಿತ್ತು. ಡಯಾಲಿಸಿಸ್ ಕೇಂದ್ರಗಳ ನಿರ್ವಹಣೆಯಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿತ್ತು. ಆದರೆ ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೇರಿದ ಬಳಿಕ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಗೆ ಹೊಸ ಡಯಾಲಿಸಿಸ್ ಯಂತ್ರಗಳ ಪೂರೈಕೆ ಮತ್ತು ನಿರ್ವಹಣೆಗಾಗಿ ಹೊಸ ಟೆಂಡರ್ ಕರೆಯಲಾಗಿದೆ.
ನಿಮ್ಮ ರಾಜಕೀಯ ಸೇಡಿನ ಆರೋಪದ ಹೊರತಾಗಿಯೂ ದಕ್ಷಿಣ ಕನ್ನಡ ಜಿಲ್ಲೆಯ ಮರಳಿನ ಸಮಸ್ಯೆಯನ್ನು ಪರಿಹರಿಸಲು ನಮ್ಮ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
Dinesh Gundurao slams Vedavyas Kamath over sand dispute in Mangalore. What has double engine government done while governance in state he added.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm