ಬ್ರೇಕಿಂಗ್ ನ್ಯೂಸ್
05-11-23 09:54 pm Mangalore Correspondent ಕರಾವಳಿ
ಮಂಗಳೂರು, ನ.5: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಒಕ್ಕಲಿಗ ಗೌಡ ಸಮುದಾಯದ ಜನರಿದ್ದರೂ, ಶಾಸಕ, ಸಂಸದ ಸ್ಥಾನಕ್ಕೆ ನಮ್ಮ ಸಮುದಾಯದವರಿಗೆ ಆದ್ಯತೆ ನೀಡಿಲ್ಲ. ಹಿಂದೆ ಡೀವಿ ಸದಾನಂದ ಗೌಡರನ್ನು ಒಂದೇ ಬಾರಿಗೆ ಸಂಸದ ಸ್ಥಾನದಿಂದ ಬದಲಾಯಿಸಿದ್ದರೆ, ನಳಿನ್ ಕುಮಾರ್ ಗೆ ಮೂರು ಬಾರಿ ಅವಕಾಶ ಕೊಟ್ಟಿದ್ದಾರೆ. ಇದು ನಮ್ಮ ಸಮುದಾಯಕ್ಕೆ ಮಾಡಿದ ಅನ್ಯಾಯ ಮತ್ತು ತಾರತಮ್ಯ. ಈ ಬಾರಿ ಲೋಕಸಭೆ ಕ್ಷೇತ್ರಕ್ಕೆ ಸೂಕ್ತ ವಿದ್ಯಾವಂತ ಅಭ್ಯರ್ಥಿಯನ್ನು ಕಣಕ್ಕಿಳಿಸದಿದ್ದರೆ ನಾವು ನಮ್ಮ ಸಮುದಾಯದ ವ್ಯಕ್ತಿಯನ್ನು ಪ್ರತ್ಯೇಕವಾಗಿ ಕಣಕ್ಕಿಳಿಸುತ್ತೇವೆ ಎಂದು ಒಕ್ಕಲಿಗ ಸಂಘದ ಪ್ರಮುಖರು ಎಚ್ಚರಿಕೆ ನೀಡಿದ್ದಾರೆ.
ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಗೌಡ ಸಂಘದ ಪದಾಧಿಕಾರಿಗಳು, ಕರ್ನಾಟಕ ರಾಜ್ಯ ಮತ್ತು ದ.ಕ. ಜಿಲ್ಲೆಯಲ್ಲಿ ಎರಡನೇ ಅತೀ ದೊಡ್ಡ ಪ್ರಬಲ ಸಮುದಾಯವಾಗಿರುವ ಒಕ್ಕಲಿಗ ಸಮುದಾಯವನ್ನು ರಾಜಕೀಯವಾಗಿ ತುಳಿಯುವ ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕಾಗಿ ದುರುದ್ದೇಶಪೂರಿತ ಕಪೋಲಕಲ್ಪಿತ ರೀತಿಯಲ್ಲಿ ಜಿಲ್ಲೆಯಲ್ಲಿ ನಮ್ಮ ಸಂಖ್ಯೆ ಕೇವಲ 80 ಸಾವಿರ ಎಂದು ಮಾಧ್ಯಮದಲ್ಲಿ ಬಿಂಬಿಸಿ ತುಳಿಯುವ ಯತ್ನ ಮಾಡುತ್ತಿದ್ದು ಇದನ್ಜು ಯಾವುದೇ ಕಾರಣಕ್ಕು ಒಪ್ಪಲಾಗದು ಎಂದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೇರೆಲ್ಲ ಸಮುದಾಯಗಳಿಗೆ ಹೋಲಿಸಿದರೆ ಎರಡನೆ ಅತೀ ದೊಡ್ಡ ಸಮುದಾಯ ಒಕ್ಕಲಿಗರದ್ದು. 3.75 ಲಕ್ಷಕ್ಕಿಂತ ಹೆಚ್ಚು ಮತದಾರರನ್ನು ಹೊಂದಿದ್ದೇವೆ. ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ ಆಯೋಗ ನೀಡಿದ ವರದಿ ಮತ್ತು ಒಕ್ಕಲಿಗರ ಸಂಘವು ನೀಡಿದ ಆಂತರಿಕ ಅಂಕಿ ಅಂಶ ತಾಳೆಯಾಗಿದೆ. ಆದರೆ ಮಾಧ್ಯಮ ಒಂದರಲ್ಲಿ ದ.ಕ. ಜಿಲ್ಲೆಯಲ್ಲಿ ಕೇವಲ 80 ಸಾವಿರ ಅಂತ ಬಿಂಬಿಸಿ ನಿಕೃಷ್ಟ ಮತ್ತು ತಾತ್ಸಾರ ವರದಿ ನೀಡಿರುವುದು ಸಮುದಾಯದಲ್ಲಿ ಆಕ್ರೋಶ ಮತ್ತು ತಳಮಳಕ್ಕೆ ಕಾರಣವಾಗಿದೆ ಎಂದರು.

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳಲ್ಲಿಯೂ ಒಕ್ಕಲಿಗ ಗೌಡ ಸಮುದಾಯದ ಅಭ್ಯರ್ಥಿಗಳಿಗೆ ಪೂರಕ ವಾತಾವರಣವಿದೆ. ಅವಿಭಜಿತ ದ.ಕ. ಜಿಲ್ಲೆಯಲ್ಲಿ ಒಕ್ಕಲಿಗ ಗೌಡರು ಎರಡೂ ಪಕ್ಷಗಳಲ್ಲಿ ಸ್ಥಾನಮಾನಗಳಿಂದ ಪೂರ್ತಿ ವಂಚಿತವಾಗಿದ್ದಾರೆ. ಕಳೆದ ನಾಲ್ಕೈದು ಚುನಾವಣಾ ಅವಧಿಯ ಪೈಕಿ ಧನಂಜಯ್ ಕುಮಾರ್ ಬಿಜೆಪಿಯಿಂದ ಸತತ ಮೂರು ಬಾರಿ ಗೆಲುವು ಕಂಡಿದ್ದು, ಆ ಬಳಿಕ ಒಕ್ಕಲಿಗ ಸಮುದಾಯದ ಡಿ.ವಿ. ಸದಾನಂದ ಗೌಡರು ಒಂದು ಬಾರಿ ಗೆದ್ದಿದ್ದರು. ಎರಡನೇ ಬಾರಿಗೆ ಅವಕಾಶ ನೀಡದೇ ಅವರನ್ನು ಹೊರಕ್ಕೆ ಅಟ್ಟಿದ್ದರ ಬಗ್ಗೆ ಇಂದಿಗೂ ಸಮುದಾಯದಲ್ಲಿ ಅಕ್ರೋಶವಿದೆ. ಮುಂದೆ ಸತತ ಮೂರು ಬಾರಿ ನಳಿನ್ ಕುಮಾರ್ ಕಟೀಲ್ಗೆ ಅವಕಾಶ ಕಲ್ಪಿಸಲಾಗಿತ್ತು ಎಂಬುದು ಒಕ್ಕಲಿಗರ ಅಸಮಾಧಾನ ಇದ್ದು ಇಂದಿಗೂ ಹೊಗೆಯಾಡುತ್ತಲೇ ಇದೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರಬಲ ಸಮುದಾಯವಾಗಿದ್ದರೂ ಜಿಲ್ಲೆಯಲ್ಲಿ ಒಂದೇ ಒಂದು ಸಮುದಾಯದ ಶಾಸಕರಾಗಲಿ, ವಿಧಾನಪರಿಷತ್ ಸದಸ್ಯರಾಗಲಿ ಇಲ್ಲದೇ ರಾಜಕೀಯವಾಗಿ ತಬ್ಬಲಿಯ ಸ್ಥಿತಿ ಸೃಷ್ಟಿಯಾಗಿರುವುದು ಒಕ್ಕಲಿಗರನ್ನು ತುಳಿದಿರುವುದಕ್ಕೆ ಸಾಕ್ಷಿ.
ಕ್ಷೇತ್ರಕ್ಕೆ ಅಗತ್ಯದ ಯೋಜನೆಗಳನ್ನು ಅನುಷ್ಠಾನಕ್ಕೆ ತರಬಲ್ಲ ಸೂಕ್ಷ್ಮಮತಿ, ಸಮರ್ಥ ವಿದ್ಯಾವಂತ, ಭಾಷಾ ಪ್ರೌಢಿಮೆ ಮತ್ತು ಅತ್ಯುತ್ತಮ ಸಂವಹನ ಕೌಶಲ್ಯವುಳ್ಳ ಪ್ರತಿಭಾನ್ವಿತರ ಆಯ್ಕೆಯಾಗಬೇಕೆಂಬ ಕ್ಷೇತ್ರದ ಜನತೆಯ ಆಶಯವನ್ನ ಪಕ್ಷಗಳು ಸಾಕಾರಗೊಳಿಸಲು ಒಕ್ಕಲಿಗ ಸಮುದಾಯದ ಅಭ್ಯರ್ಥಿಗೆ ಅವಕಾಶ ಕಲ್ಪಿಸಬೇಕು. ಅಂತಹ ಸಮರ್ಥ, ಪ್ರಭಾವಿ ಸಾಕಷ್ಟು ಅಭ್ಯರ್ಥಿಗಳು ಸಮುದಾಯದಲ್ಲಿದ್ದಾರೆ. ಯಾವುದೇ ಪಕ್ಷ ಅವಕಾಶ ನೀಡಿದರೂ ಸಮುದಾಯ ಅಂತಹ ಅಭ್ಯರ್ಥಿಗಳನ್ನು ಪಕ್ಷಾತೀತವಾಗಿ ಬೆಂಬಲಿಸಲಿದೆ ಎಂದು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಅಧ್ಯಕ್ಷ ಗುರುದೇವ್ ಯು,ಬಿ, ಕಾರ್ಯದರ್ಶಿ ಡಿ.ಬಿ. ಬಾಲಕೃಷ್ಣ, ವಿಜಿಯಸ್ ಸಹಕಾರಿ ಸಂಘ ಮಂಗಳೂರು ಇದರ ಅಧ್ಯಕ್ಷ ಲೋಕಯ್ಯ ಗೌಡ, ನವೀನ್ ಚಿಲ್ಲಾರ್, ಪೂರ್ಣಿಮ ಕೆ.ಎಂ., ರಕ್ಷಿತ್ ಮುತ್ತಿಲ, ಕಿರಣ್ ಹೊಸೊಳಿಕೆ ಉಪಸ್ಥಿತರಿದ್ದರು.
DV Sadananda was juts one time MP even after being Vokkaliga, Vokkaliga leaders demand justice in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm