ಬ್ರೇಕಿಂಗ್ ನ್ಯೂಸ್
06-11-23 12:09 pm Mangalore Correspondent ಕರಾವಳಿ
ಉಳ್ಳಾಲ, ನ.6: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಐದು ವರ್ಷದ ಹೆಣ್ಮಗಳ ಚಿಕಿತ್ಸೆಗಾಗಿ ಉಳ್ಳಾಲದ ಟೀಮ್ ಹನುಮಾನ್ ಸಂಘಟನೆಯ ಉತ್ಸಾಹಿ ಯುವಕರ ತಂಡವು ನವರಾತ್ರಿಯಂದು ವೇಷ ಧರಿಸಿ ಕುಣಿದು ಸಂಗ್ರಹಿಸಿದ ಲಕ್ಷಾಂತರ ರೂಪಾಯಿ ದುಡ್ಡನ್ನು ದೇಣಿಗೆ ನೀಡಿ ಸಮಾಜಕ್ಕೆ ಮಾದರಿಯಾಗಿದ್ದಾರೆ.
ಉಳ್ಳಾಲ ಧರ್ಮನಗರ ನಿವಾಸಿ ರಂಜಿನಿ ಎಂಬವರ ಐದು ವರ್ಷದ ಮಗಳು ಶ್ರೇಯಾ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ಖರ್ಚು ತಗುಲಲಿದೆ. ರಂಜಿನಿ ಅವರ ಕುಟುಂಬ ಆರ್ಥಿಕವಾಗಿ ಸೊರಗಿದ್ದು ಮಗಳ ಕಾಯಿಲೆಯ ಚಿಕಿತ್ಸೆಗೆ ಹಣ ಭರಿಸಲು ಅಶಕ್ತವಾಗಿದೆ. ಶ್ರೇಯಾಳ ಚಿಕಿತ್ಸೆಗೆ ಸಹಕರಿಸಲು ಮುಂದಾದ ಸ್ಥಳೀಯ ಟೀಮ್ ಹನುಮಾನ್ ತಂಡದ ಎಳೆಯ ಪ್ರಾಯದ ಯುವಕರು ಕಳೆದ ನವರಾತ್ರಿಯಂದು ಯಕ್ಷಗಾನ ಶೈಲಿಯ ವೇಷ ಧರಿಸಿ ಮನೆ ಮನೆಗೆ ತೆರಳಿ ಕುಣಿದು ಹಣ ಸಂಪಾದಿಸಿದ್ದಾರೆ.



ಅಲ್ಲದೆ, ಉಳ್ಳಾಲ ಶಾರದೋತ್ಸವಕ್ಕೂ ಟ್ಯಾಬ್ಲೋ ಇಳಿಸಿ ಶೋಭಾಯಾತ್ರೆಗೆ ಮೆರುಗು ನೀಡಿದ್ದಾರೆ. ವೇಷ ತೊಟ್ಟು ಕ್ರೋಢೀಕರಿಸಿದ ಒಟ್ಟು 1,67,649 ರೂಪಾಯಿಗಳ ಚೆಕ್ಕನ್ನ ಧರ್ಮ ನಗರದ ನಾಗ ಸಾನಿಧ್ಯದಲ್ಲಿ ಟೀಮ್ ಹನುಮಾನ್ ಯುವಕರು ಹಿರಿಯರ ಕೈಯಿಂದ ರಂಜಿನಿ ಅವರಿಗೆ ಹಸ್ತಾಂತರಿಸಿದ್ದಾರೆ. ಕಳೆದ ವರ್ಷವೂ ಯುವಕರು ನವರಾತ್ರಿಗೆ ವೇಷ ಧರಿಸಿ ಸಂಗ್ರಹಗೊಂಡ 1,26,000 ರೂ.ಗಳನ್ನ ಮೂಡುಬಿದಿರೆಯ ಐದು ವರ್ಷದ ಕ್ಯಾನ್ಸರ್ ಪೀಡಿತ ಬಾಲಕಿ ಶ್ರೇಯಾ ಎಂಬವಳಿಗೆ ನೀಡಿದ್ದು ಆಕೆ ಈಗ ಕ್ಯಾನ್ಸರ್ ನಿಂದ ಗುಣಮುಖವಾಗಿ ಶಾಲೆಗೆ ತೆರಳುತ್ತಿರುವುದು ಖುಷಿ ಕೊಟ್ಟಿದೆ ಎಂದು ತಂಡದ ಮುಖ್ಯಸ್ಥ ಜಗದೀಶ್ ಗೋಳಿಯಾಡಿ ತಿಳಿಸಿದ್ದಾರೆ.
ಸರಕಾರಿ ಆಸ್ಪತ್ರೆಯ ವ್ಯವಸ್ಥೆಯನ್ನೇ ಬುಡಮೇಲುಗೊಳಿಸಿರುವ ಖಾಸಗಿ ಮೆಡಿಕಲ್ ಮಾಫಿಯಾಗಳ ಮುಂದೆ ಬಡ ಜನರು ಕಾಯಿಲೆ ಗುಣಪಡಿಸಲು ದಿನನಿತ್ಯವೂ ಭಿಕ್ಷೆ ಬೇಡುವ ಸ್ಥಿತಿ ಬಂದೊದಗಿದೆ. ಇಂತಹ ಕಾಲ ಘಟ್ಟದಲ್ಲಿ ಪರರ ಕಣ್ಣೀರೊರೆಸಲು ವೇಷ ಧರಿಸಿ ಹಣ ಸಂಗ್ರಹಿಸುವ ಯುವಕರ ಉದಾರತೆಗೆ ಶಹಬಾಷ್ ಎನ್ನಲೇ ಬೇಕು.
Ullal Five year old girl suffers from Heart issue, Youths collect money by dancing for Dasara, donate 1.70 lakhs in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm