ಬ್ರೇಕಿಂಗ್ ನ್ಯೂಸ್
06-11-23 12:09 pm Mangalore Correspondent ಕರಾವಳಿ
ಉಳ್ಳಾಲ, ನ.6: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಐದು ವರ್ಷದ ಹೆಣ್ಮಗಳ ಚಿಕಿತ್ಸೆಗಾಗಿ ಉಳ್ಳಾಲದ ಟೀಮ್ ಹನುಮಾನ್ ಸಂಘಟನೆಯ ಉತ್ಸಾಹಿ ಯುವಕರ ತಂಡವು ನವರಾತ್ರಿಯಂದು ವೇಷ ಧರಿಸಿ ಕುಣಿದು ಸಂಗ್ರಹಿಸಿದ ಲಕ್ಷಾಂತರ ರೂಪಾಯಿ ದುಡ್ಡನ್ನು ದೇಣಿಗೆ ನೀಡಿ ಸಮಾಜಕ್ಕೆ ಮಾದರಿಯಾಗಿದ್ದಾರೆ.
ಉಳ್ಳಾಲ ಧರ್ಮನಗರ ನಿವಾಸಿ ರಂಜಿನಿ ಎಂಬವರ ಐದು ವರ್ಷದ ಮಗಳು ಶ್ರೇಯಾ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ಖರ್ಚು ತಗುಲಲಿದೆ. ರಂಜಿನಿ ಅವರ ಕುಟುಂಬ ಆರ್ಥಿಕವಾಗಿ ಸೊರಗಿದ್ದು ಮಗಳ ಕಾಯಿಲೆಯ ಚಿಕಿತ್ಸೆಗೆ ಹಣ ಭರಿಸಲು ಅಶಕ್ತವಾಗಿದೆ. ಶ್ರೇಯಾಳ ಚಿಕಿತ್ಸೆಗೆ ಸಹಕರಿಸಲು ಮುಂದಾದ ಸ್ಥಳೀಯ ಟೀಮ್ ಹನುಮಾನ್ ತಂಡದ ಎಳೆಯ ಪ್ರಾಯದ ಯುವಕರು ಕಳೆದ ನವರಾತ್ರಿಯಂದು ಯಕ್ಷಗಾನ ಶೈಲಿಯ ವೇಷ ಧರಿಸಿ ಮನೆ ಮನೆಗೆ ತೆರಳಿ ಕುಣಿದು ಹಣ ಸಂಪಾದಿಸಿದ್ದಾರೆ.



ಅಲ್ಲದೆ, ಉಳ್ಳಾಲ ಶಾರದೋತ್ಸವಕ್ಕೂ ಟ್ಯಾಬ್ಲೋ ಇಳಿಸಿ ಶೋಭಾಯಾತ್ರೆಗೆ ಮೆರುಗು ನೀಡಿದ್ದಾರೆ. ವೇಷ ತೊಟ್ಟು ಕ್ರೋಢೀಕರಿಸಿದ ಒಟ್ಟು 1,67,649 ರೂಪಾಯಿಗಳ ಚೆಕ್ಕನ್ನ ಧರ್ಮ ನಗರದ ನಾಗ ಸಾನಿಧ್ಯದಲ್ಲಿ ಟೀಮ್ ಹನುಮಾನ್ ಯುವಕರು ಹಿರಿಯರ ಕೈಯಿಂದ ರಂಜಿನಿ ಅವರಿಗೆ ಹಸ್ತಾಂತರಿಸಿದ್ದಾರೆ. ಕಳೆದ ವರ್ಷವೂ ಯುವಕರು ನವರಾತ್ರಿಗೆ ವೇಷ ಧರಿಸಿ ಸಂಗ್ರಹಗೊಂಡ 1,26,000 ರೂ.ಗಳನ್ನ ಮೂಡುಬಿದಿರೆಯ ಐದು ವರ್ಷದ ಕ್ಯಾನ್ಸರ್ ಪೀಡಿತ ಬಾಲಕಿ ಶ್ರೇಯಾ ಎಂಬವಳಿಗೆ ನೀಡಿದ್ದು ಆಕೆ ಈಗ ಕ್ಯಾನ್ಸರ್ ನಿಂದ ಗುಣಮುಖವಾಗಿ ಶಾಲೆಗೆ ತೆರಳುತ್ತಿರುವುದು ಖುಷಿ ಕೊಟ್ಟಿದೆ ಎಂದು ತಂಡದ ಮುಖ್ಯಸ್ಥ ಜಗದೀಶ್ ಗೋಳಿಯಾಡಿ ತಿಳಿಸಿದ್ದಾರೆ.
ಸರಕಾರಿ ಆಸ್ಪತ್ರೆಯ ವ್ಯವಸ್ಥೆಯನ್ನೇ ಬುಡಮೇಲುಗೊಳಿಸಿರುವ ಖಾಸಗಿ ಮೆಡಿಕಲ್ ಮಾಫಿಯಾಗಳ ಮುಂದೆ ಬಡ ಜನರು ಕಾಯಿಲೆ ಗುಣಪಡಿಸಲು ದಿನನಿತ್ಯವೂ ಭಿಕ್ಷೆ ಬೇಡುವ ಸ್ಥಿತಿ ಬಂದೊದಗಿದೆ. ಇಂತಹ ಕಾಲ ಘಟ್ಟದಲ್ಲಿ ಪರರ ಕಣ್ಣೀರೊರೆಸಲು ವೇಷ ಧರಿಸಿ ಹಣ ಸಂಗ್ರಹಿಸುವ ಯುವಕರ ಉದಾರತೆಗೆ ಶಹಬಾಷ್ ಎನ್ನಲೇ ಬೇಕು.
Ullal Five year old girl suffers from Heart issue, Youths collect money by dancing for Dasara, donate 1.70 lakhs in Mangalore.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm