ಬ್ರೇಕಿಂಗ್ ನ್ಯೂಸ್
06-11-23 12:09 pm Mangalore Correspondent ಕರಾವಳಿ
ಉಳ್ಳಾಲ, ನ.6: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಐದು ವರ್ಷದ ಹೆಣ್ಮಗಳ ಚಿಕಿತ್ಸೆಗಾಗಿ ಉಳ್ಳಾಲದ ಟೀಮ್ ಹನುಮಾನ್ ಸಂಘಟನೆಯ ಉತ್ಸಾಹಿ ಯುವಕರ ತಂಡವು ನವರಾತ್ರಿಯಂದು ವೇಷ ಧರಿಸಿ ಕುಣಿದು ಸಂಗ್ರಹಿಸಿದ ಲಕ್ಷಾಂತರ ರೂಪಾಯಿ ದುಡ್ಡನ್ನು ದೇಣಿಗೆ ನೀಡಿ ಸಮಾಜಕ್ಕೆ ಮಾದರಿಯಾಗಿದ್ದಾರೆ.
ಉಳ್ಳಾಲ ಧರ್ಮನಗರ ನಿವಾಸಿ ರಂಜಿನಿ ಎಂಬವರ ಐದು ವರ್ಷದ ಮಗಳು ಶ್ರೇಯಾ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ಖರ್ಚು ತಗುಲಲಿದೆ. ರಂಜಿನಿ ಅವರ ಕುಟುಂಬ ಆರ್ಥಿಕವಾಗಿ ಸೊರಗಿದ್ದು ಮಗಳ ಕಾಯಿಲೆಯ ಚಿಕಿತ್ಸೆಗೆ ಹಣ ಭರಿಸಲು ಅಶಕ್ತವಾಗಿದೆ. ಶ್ರೇಯಾಳ ಚಿಕಿತ್ಸೆಗೆ ಸಹಕರಿಸಲು ಮುಂದಾದ ಸ್ಥಳೀಯ ಟೀಮ್ ಹನುಮಾನ್ ತಂಡದ ಎಳೆಯ ಪ್ರಾಯದ ಯುವಕರು ಕಳೆದ ನವರಾತ್ರಿಯಂದು ಯಕ್ಷಗಾನ ಶೈಲಿಯ ವೇಷ ಧರಿಸಿ ಮನೆ ಮನೆಗೆ ತೆರಳಿ ಕುಣಿದು ಹಣ ಸಂಪಾದಿಸಿದ್ದಾರೆ.
ಅಲ್ಲದೆ, ಉಳ್ಳಾಲ ಶಾರದೋತ್ಸವಕ್ಕೂ ಟ್ಯಾಬ್ಲೋ ಇಳಿಸಿ ಶೋಭಾಯಾತ್ರೆಗೆ ಮೆರುಗು ನೀಡಿದ್ದಾರೆ. ವೇಷ ತೊಟ್ಟು ಕ್ರೋಢೀಕರಿಸಿದ ಒಟ್ಟು 1,67,649 ರೂಪಾಯಿಗಳ ಚೆಕ್ಕನ್ನ ಧರ್ಮ ನಗರದ ನಾಗ ಸಾನಿಧ್ಯದಲ್ಲಿ ಟೀಮ್ ಹನುಮಾನ್ ಯುವಕರು ಹಿರಿಯರ ಕೈಯಿಂದ ರಂಜಿನಿ ಅವರಿಗೆ ಹಸ್ತಾಂತರಿಸಿದ್ದಾರೆ. ಕಳೆದ ವರ್ಷವೂ ಯುವಕರು ನವರಾತ್ರಿಗೆ ವೇಷ ಧರಿಸಿ ಸಂಗ್ರಹಗೊಂಡ 1,26,000 ರೂ.ಗಳನ್ನ ಮೂಡುಬಿದಿರೆಯ ಐದು ವರ್ಷದ ಕ್ಯಾನ್ಸರ್ ಪೀಡಿತ ಬಾಲಕಿ ಶ್ರೇಯಾ ಎಂಬವಳಿಗೆ ನೀಡಿದ್ದು ಆಕೆ ಈಗ ಕ್ಯಾನ್ಸರ್ ನಿಂದ ಗುಣಮುಖವಾಗಿ ಶಾಲೆಗೆ ತೆರಳುತ್ತಿರುವುದು ಖುಷಿ ಕೊಟ್ಟಿದೆ ಎಂದು ತಂಡದ ಮುಖ್ಯಸ್ಥ ಜಗದೀಶ್ ಗೋಳಿಯಾಡಿ ತಿಳಿಸಿದ್ದಾರೆ.
ಸರಕಾರಿ ಆಸ್ಪತ್ರೆಯ ವ್ಯವಸ್ಥೆಯನ್ನೇ ಬುಡಮೇಲುಗೊಳಿಸಿರುವ ಖಾಸಗಿ ಮೆಡಿಕಲ್ ಮಾಫಿಯಾಗಳ ಮುಂದೆ ಬಡ ಜನರು ಕಾಯಿಲೆ ಗುಣಪಡಿಸಲು ದಿನನಿತ್ಯವೂ ಭಿಕ್ಷೆ ಬೇಡುವ ಸ್ಥಿತಿ ಬಂದೊದಗಿದೆ. ಇಂತಹ ಕಾಲ ಘಟ್ಟದಲ್ಲಿ ಪರರ ಕಣ್ಣೀರೊರೆಸಲು ವೇಷ ಧರಿಸಿ ಹಣ ಸಂಗ್ರಹಿಸುವ ಯುವಕರ ಉದಾರತೆಗೆ ಶಹಬಾಷ್ ಎನ್ನಲೇ ಬೇಕು.
Ullal Five year old girl suffers from Heart issue, Youths collect money by dancing for Dasara, donate 1.70 lakhs in Mangalore.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am