ಬ್ರೇಕಿಂಗ್ ನ್ಯೂಸ್
10-11-23 01:35 pm Udupi Correspondent ಕರಾವಳಿ
ಉಡುಪಿ, ನ.10: ಈಟಿವಿ ಕನ್ನಡ, ದೂರದರ್ಶನ ಟಿವಿಯಲ್ಲಿ ಜಿಲ್ಲಾ ವರದಿಗಾರರಾಗಿದ್ದ ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ (57) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಗುರವಾರ ಬೆಳಗ್ಗೆ ಉಡುಪಿಯ ಮನೆಯಲ್ಲಿದ್ದಾಗ ಎದೆನೋವು ಕಾಣಿಸಿಕೊಂಡಿದ್ದ ಅವರನ್ನ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಶಶಿಧರ್ ಹೆಮ್ಮಣ್ಣ ಅವರು ರಾತ್ರಿ ಹೊತ್ತಿಗೆ ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದ್ದಾರೆ. 1991ರಲ್ಲಿ ಕುಂದಪ್ರಭ ಪತ್ರಿಕೆ ಮೂಲಕ ವೃತ್ತಿ ಜೀವನ ಅರಂಭಿಸಿದ ಶಶಿಧರ್, "ಕ್ಷಿತಿಜ" ಎನ್ನುವ ಸ್ವಂತ ವಾರ ಪತ್ರಿಕೆ ಅರಂಭಿಸಿದ್ದರು. ಬಳಿಕ ಈ ಟಿವಿ ಕನ್ನಡ, ಡಿಡಿ ನ್ಯೂಸ್ ನಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು. ಹಲವು ಉದಯೋನ್ಮುಖ ಪತ್ರಕರ್ತರಿಗೆ ಪ್ರೇರಕರಾಗಿದ್ದ ಹೆಮಣ್ಣ ಅವರು ಪ್ರಜಾವಾಣಿ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಕೃಷಿ ಸಂಬಂಧಿತ ಲೇಖನಗಳನ್ನು ಬರೆದು, ಸರಕಾರದ ಗಮನ ಸೆಳೆದಿದ್ದರು.
ಇತ್ತೀಚೆಗಷ್ಟೇ ಕನೆಕ್ಟ್ ಮೀಡಿಯಾ ಸಂಸ್ಥೆಯನ್ನು ಹುಟ್ಟುಹಾಕಿ ಹಲವು ಯೋಜನೆಗಳನ್ನು ರಾಜ್ಯದಾದ್ಯಂತ ಅರಂಭಿಸುವ ಕಾರ್ಯದಲ್ಲಿ ತೊಡಗಿಸಿದ್ದರು. ಪರಿಸರ ಪ್ರೇಮಿಯೂ ಆಗಿದ್ದ ಅವರು, ಕರಾವಳಿಯಲ್ಲಿ ಕಾಂಡ್ಲಾ ವನ ಯೋಜನೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ನೆಲ ಜಲ ಸಂರಕ್ಷಣೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ 'ನೀರು ಆರುವ ಮುನ್ನ' ಕಾರ್ಯಕ್ರಮದಲ್ಲಿ ಮೂಂಚಣಿಯಲ್ಲಿದ್ದರು. ಮೃತರು ತಂದೆ, ತಾಯಿ, ಪತ್ನಿ, ಪುತ್ರ, ನಾಲ್ಕು ಜನ ಸಹೋದರರು, ಸಹೋದರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
Senior journalist Shashidhar Hemmanna (57), who was a district reporter with ETV Kannada and Doordarshan TV, passed away here on Monday following a cardiac arrest.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm