ಬ್ರೇಕಿಂಗ್ ನ್ಯೂಸ್
13-11-23 01:25 pm Mangalore Correspondent ಕರಾವಳಿ
ಉಳ್ಳಾಲ, ನ.13: ದೇರಳಕಟ್ಟೆಯಲ್ಲಿ ಯು.ಟಿ.ಫರೀದ್ ಫೌಂಡೇಶನ್ ಆಶ್ರಯದಲ್ಲಿ ನಡೆದ ಸೌಹಾರ್ದ ಕ್ರೀಡಾಕೂಟದಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯತನ ಅಭಿಯಾನದ ಅಂಗವಾಗಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅವರ ಸುಪುತ್ರಿ ಹವ್ವಾ ನಸೀಮ ಅವರು ಕೈ ಪಕ್ಷದ ಸದಸ್ಯತನ ಸೇರ್ಪಡೆಗೆ ಸಹಿ ಮಾಡಿದರು.
ಯು.ಟಿ.ಫರೀದ್ ಫೌಂಡೇಶನ್ ವತಿಯಿಂದ ದೀಪಾವಳಿ ಪ್ರಯುಕ್ತ ಭಾನುವಾರ ದೇರಳಕಟ್ಟೆ ಕಣಚೂರು ಮೈದಾನದಲ್ಲಿ 'ಸೌಹಾರ್ದ ಕ್ರೀಡಾಕೂಟ' ನಡೆಯಿತು. ಕ್ರೀಡಾಕೂಟವನ್ನ ಕಣಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಅಬ್ದುಲ್ ರಹ್ಮಾನ್ ಅವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು ಸೌಹಾರ್ದ ವಾತಾವರಣ ನಿರ್ಮಿಸುವಲ್ಲಿ ಕ್ರೀಡಾಕೂಟ ಸಹಕಾರಿ, ದೀಪಾವಳಿ ಹಬ್ಬದ ಸಂದರ್ಭ ಅಯೋಜಿಸಿರುವ ಕ್ರೀಡಾಕೂಟ ನಾಡಿನಾದ್ಯಂತ ಸೌಹಾರ್ದ ಸಂದೇಶ ಪಸರಿಸಲಿ ಎಂದರು.


ಮೂಡಾ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಮಾತನಾಡಿ ಧರ್ಮಗಳ ನಡುವೆ ದ್ವೇಷಕ್ಕೆ ನಾಂದಿಯಾಗುವ ಭಾಷಣದ ಬದಲು ಐಕ್ಯತೆ, ಸಾಮರಸ್ಯ ಬೆಸೆಯುವ ಮಾತುಗಳು ನಾಗರಿಕ ಸಮಾಜಕ್ಕೆ ಅಗತ್ಯವಿದೆ. ಸಮಾಜದ ಎಲ್ಲ ಧರ್ಮೀಯರನ್ನ ಒಗ್ಗೂಡಿಸುವಲ್ಲಿ ಕ್ರೀಡೆಯ ಪಾತ್ರ ಮಹತ್ವದ್ದಾಗಿದೆ ಎಂದರು. ಈ ವೇಳೆ ಪದವಿ ಶಿಕ್ಷಣ ಪಡೆಯುತ್ತಿರುವ ಸ್ಪೀಕರ್ ಯು.ಟಿ.ಖಾದರ್ ಅವರ ಪುತ್ರಿ ಹವ್ವಾ ನಸೀಮಾ ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ಸಹಿ ಮಾಡಿದರು.
ದ.ಕ.ಜಿಲ್ಲಾ ಕಾಂಗ್ರೆಸ್ ಸದಸ್ಯ ಸುರೇಶ್ ಭಟ್ನಗರ, ಉಪಾಧ್ಯಕ್ಷ ದಿನೇಶ್ ರೈ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು ಮಲಾರ್, ಹಿರಿಯರಾದ ಬಾಬು ಸುವರ್ಣ, ಹರ್ಷರಾಜ್ ಮುದ್ಯ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಚಂದ್ರಿಕಾ ರೈ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು.
Speaker U T Khader daughter Hawa officially becomes member of congress party at Ullal in Mangalore.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm