ಬ್ರೇಕಿಂಗ್ ನ್ಯೂಸ್
13-11-23 01:25 pm Mangalore Correspondent ಕರಾವಳಿ
ಉಳ್ಳಾಲ, ನ.13: ದೇರಳಕಟ್ಟೆಯಲ್ಲಿ ಯು.ಟಿ.ಫರೀದ್ ಫೌಂಡೇಶನ್ ಆಶ್ರಯದಲ್ಲಿ ನಡೆದ ಸೌಹಾರ್ದ ಕ್ರೀಡಾಕೂಟದಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯತನ ಅಭಿಯಾನದ ಅಂಗವಾಗಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅವರ ಸುಪುತ್ರಿ ಹವ್ವಾ ನಸೀಮ ಅವರು ಕೈ ಪಕ್ಷದ ಸದಸ್ಯತನ ಸೇರ್ಪಡೆಗೆ ಸಹಿ ಮಾಡಿದರು.
ಯು.ಟಿ.ಫರೀದ್ ಫೌಂಡೇಶನ್ ವತಿಯಿಂದ ದೀಪಾವಳಿ ಪ್ರಯುಕ್ತ ಭಾನುವಾರ ದೇರಳಕಟ್ಟೆ ಕಣಚೂರು ಮೈದಾನದಲ್ಲಿ 'ಸೌಹಾರ್ದ ಕ್ರೀಡಾಕೂಟ' ನಡೆಯಿತು. ಕ್ರೀಡಾಕೂಟವನ್ನ ಕಣಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಅಬ್ದುಲ್ ರಹ್ಮಾನ್ ಅವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು ಸೌಹಾರ್ದ ವಾತಾವರಣ ನಿರ್ಮಿಸುವಲ್ಲಿ ಕ್ರೀಡಾಕೂಟ ಸಹಕಾರಿ, ದೀಪಾವಳಿ ಹಬ್ಬದ ಸಂದರ್ಭ ಅಯೋಜಿಸಿರುವ ಕ್ರೀಡಾಕೂಟ ನಾಡಿನಾದ್ಯಂತ ಸೌಹಾರ್ದ ಸಂದೇಶ ಪಸರಿಸಲಿ ಎಂದರು.


ಮೂಡಾ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಮಾತನಾಡಿ ಧರ್ಮಗಳ ನಡುವೆ ದ್ವೇಷಕ್ಕೆ ನಾಂದಿಯಾಗುವ ಭಾಷಣದ ಬದಲು ಐಕ್ಯತೆ, ಸಾಮರಸ್ಯ ಬೆಸೆಯುವ ಮಾತುಗಳು ನಾಗರಿಕ ಸಮಾಜಕ್ಕೆ ಅಗತ್ಯವಿದೆ. ಸಮಾಜದ ಎಲ್ಲ ಧರ್ಮೀಯರನ್ನ ಒಗ್ಗೂಡಿಸುವಲ್ಲಿ ಕ್ರೀಡೆಯ ಪಾತ್ರ ಮಹತ್ವದ್ದಾಗಿದೆ ಎಂದರು. ಈ ವೇಳೆ ಪದವಿ ಶಿಕ್ಷಣ ಪಡೆಯುತ್ತಿರುವ ಸ್ಪೀಕರ್ ಯು.ಟಿ.ಖಾದರ್ ಅವರ ಪುತ್ರಿ ಹವ್ವಾ ನಸೀಮಾ ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ಸಹಿ ಮಾಡಿದರು.
ದ.ಕ.ಜಿಲ್ಲಾ ಕಾಂಗ್ರೆಸ್ ಸದಸ್ಯ ಸುರೇಶ್ ಭಟ್ನಗರ, ಉಪಾಧ್ಯಕ್ಷ ದಿನೇಶ್ ರೈ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು ಮಲಾರ್, ಹಿರಿಯರಾದ ಬಾಬು ಸುವರ್ಣ, ಹರ್ಷರಾಜ್ ಮುದ್ಯ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಚಂದ್ರಿಕಾ ರೈ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು.
Speaker U T Khader daughter Hawa officially becomes member of congress party at Ullal in Mangalore.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm