ಬ್ರೇಕಿಂಗ್ ನ್ಯೂಸ್
13-11-23 06:53 pm Mangalore Correspondent ಕರಾವಳಿ
ಉಡುಪಿ, ನ.13: ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಒಮ್ಮಿಂದೊಮ್ಮೆಲೇ ಬೆಂಕಿ ಹತ್ತಿಕೊಂಡಿದ್ದು, ಹತ್ತಕ್ಕೂ ಹೆಚ್ಚು ಮೀನುಗಾರಿಕಾ ಬೋಟುಗಳು ಬೆಂಕಿಗಾಹುತಿಯಾಗಿವೆ. ಧಗ ಧಗನೆ ಉರಿದ ಬೆಂಕಿಯ ಕೆನ್ನಾಲಿಗೆಗೆ ಬಾನಲ್ಲಿ ದಟ್ಟ ಹೊಗೆ, ಉರಿ ಜ್ವಾಲೆಯನ್ನು ಸೃಷ್ಟಿಸಿತ್ತು.
ಬೈಂದೂರು ತಾಲೂಕಿನ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಇಂದು ಬೆಳಗ್ಗೆ ಬೆಂಕಿಯದ್ದೇ ಸದ್ದು. ಒಂದೆರಡಲ್ಲ ಹತ್ತಕ್ಕೂ ಹೆಚ್ಚು ಬೋಟುಗಳಿಗೆ ಹಠಾತ್ ಬೆಂಕಿ ಹತ್ತಿಕೊಂಡಿದ್ದು, ಸಮುದ್ರ ಬದಿಯಲ್ಲಿ ಗಾಳಿಯೊಂದಿಗೆ ಬೆಂಕಿ ಸರಸವಾಡಿದಂತಿತ್ತು. ಇಷ್ಟಕ್ಕೂ ಬೆಂಕಿ ಬೀಳೋದಕ್ಕೆ ಅಲ್ಲಿಯೇ ದೀಪಾವಳಿ ಪಟಾಕಿ ಸಿಡಿಸುತ್ತಿದ್ದ ಬಿಹಾರ ಮೂಲದ ಕಾರ್ಮಿಕರು ಕಾರಣವಂತೆ. ಕಾರ್ಮಿಕರು ಹಾರಿಸಿದ್ದ ಪಟಾಕಿಯ ಕಿಡಿ ನೇರವಾಗಿ ಬೋಟು ಮೇಲಕ್ಕೆ ಬಿದ್ದಿದೆ. ಬೋಟನ್ನು ತೀರಕ್ಕೆ ತಂದು ಮೇಲ್ಗಡೆ ತೆಂಗಿನ ಗರಿಯನ್ನು ಮುಚ್ಚಲಾಗಿತ್ತು. ತೆಂಗಿನ ಗರಿಗಳು ಬಿಸಿಲಿಗೆ ಒಣಗಿದ್ದರಿಂದ ಪಟಾಕಿಯ ಬಾಣದ ಬಿರುಸಿಗೆ ಬೆಂಕಿಯ ಜ್ವಾಲೆ ಏಳುವಂತೆ ಮಾಡಿತ್ತು. ಗಾಳಿಯಿಂದಾಗಿ ಬೆಂಕಿ ಅಕ್ಕಪಕ್ಕದಲ್ಲಿ ಹರಡಿದ್ದು ಅಲ್ಲಿ ನಿಲ್ಲಿಸಿದ್ದ ಹನ್ನೊಂದು ಬೋಟುಗಳಿಗೂ ಹರಡಿದೆ. ಧಗ ಧಗನೆ ಹೊತ್ತಿಕೊಂಡಿದ್ದು, ಅಲ್ಲಿಯೇ ನಿಲ್ಲಿಸಿದ್ದ ಎರಡು ಬೈಕ್ ಕೂಡ ಹೊತ್ತಿ ಉರಿದು ಹೋಗಿದೆ.



ದೀಪಾವಳಿ ನಿಮಿತ್ತ ಕಾರ್ಮಿಕರು ರಜೆಯಲ್ಲಿದ್ದರೆ, ಮೀನುಗಾರರು ಬೋಟನ್ನು ನಿಲ್ಲಿಸಿ ತಮ್ಮ ಮನೆಗೆ ತೆರಳಿದ್ದರು. ಬೆಂಕಿ ಬಿದ್ದ ಕೂಡಲೇ ಅಗ್ನಿಶಾಮಕ ದಳ, ಸ್ಥಳೀಯರು ಸೇರಿ ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಸುದೀರ್ಘ ನಾಲ್ಕು ಗಂಟೆಗಳ ಬಳಿಕ ಬೆಂಕಿಯನ್ನು ನಂದಿಸಲಾಗಿದೆ. ಬೆಂಕಿ ಅನಾಹುತದಿಂದ ಸುಮಾರು 5 ಕೋಟಿಗೂ ಹೆಚ್ಚು ನಷ್ಟ ಅಂದಾಜಿಸಲಾಗಿದೆ.
Kundapur Eight boats go up in flames after fire breaks out in harbour. Eight boats that were anchored on the river bank, were gutted in a fire mishap on Monday November 13 at Manganese Road of Gangolli. The loss is estimated to run into crore of rupees.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am