ಬ್ರೇಕಿಂಗ್ ನ್ಯೂಸ್
13-11-23 06:53 pm Mangalore Correspondent ಕರಾವಳಿ
ಉಡುಪಿ, ನ.13: ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಒಮ್ಮಿಂದೊಮ್ಮೆಲೇ ಬೆಂಕಿ ಹತ್ತಿಕೊಂಡಿದ್ದು, ಹತ್ತಕ್ಕೂ ಹೆಚ್ಚು ಮೀನುಗಾರಿಕಾ ಬೋಟುಗಳು ಬೆಂಕಿಗಾಹುತಿಯಾಗಿವೆ. ಧಗ ಧಗನೆ ಉರಿದ ಬೆಂಕಿಯ ಕೆನ್ನಾಲಿಗೆಗೆ ಬಾನಲ್ಲಿ ದಟ್ಟ ಹೊಗೆ, ಉರಿ ಜ್ವಾಲೆಯನ್ನು ಸೃಷ್ಟಿಸಿತ್ತು.
ಬೈಂದೂರು ತಾಲೂಕಿನ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಇಂದು ಬೆಳಗ್ಗೆ ಬೆಂಕಿಯದ್ದೇ ಸದ್ದು. ಒಂದೆರಡಲ್ಲ ಹತ್ತಕ್ಕೂ ಹೆಚ್ಚು ಬೋಟುಗಳಿಗೆ ಹಠಾತ್ ಬೆಂಕಿ ಹತ್ತಿಕೊಂಡಿದ್ದು, ಸಮುದ್ರ ಬದಿಯಲ್ಲಿ ಗಾಳಿಯೊಂದಿಗೆ ಬೆಂಕಿ ಸರಸವಾಡಿದಂತಿತ್ತು. ಇಷ್ಟಕ್ಕೂ ಬೆಂಕಿ ಬೀಳೋದಕ್ಕೆ ಅಲ್ಲಿಯೇ ದೀಪಾವಳಿ ಪಟಾಕಿ ಸಿಡಿಸುತ್ತಿದ್ದ ಬಿಹಾರ ಮೂಲದ ಕಾರ್ಮಿಕರು ಕಾರಣವಂತೆ. ಕಾರ್ಮಿಕರು ಹಾರಿಸಿದ್ದ ಪಟಾಕಿಯ ಕಿಡಿ ನೇರವಾಗಿ ಬೋಟು ಮೇಲಕ್ಕೆ ಬಿದ್ದಿದೆ. ಬೋಟನ್ನು ತೀರಕ್ಕೆ ತಂದು ಮೇಲ್ಗಡೆ ತೆಂಗಿನ ಗರಿಯನ್ನು ಮುಚ್ಚಲಾಗಿತ್ತು. ತೆಂಗಿನ ಗರಿಗಳು ಬಿಸಿಲಿಗೆ ಒಣಗಿದ್ದರಿಂದ ಪಟಾಕಿಯ ಬಾಣದ ಬಿರುಸಿಗೆ ಬೆಂಕಿಯ ಜ್ವಾಲೆ ಏಳುವಂತೆ ಮಾಡಿತ್ತು. ಗಾಳಿಯಿಂದಾಗಿ ಬೆಂಕಿ ಅಕ್ಕಪಕ್ಕದಲ್ಲಿ ಹರಡಿದ್ದು ಅಲ್ಲಿ ನಿಲ್ಲಿಸಿದ್ದ ಹನ್ನೊಂದು ಬೋಟುಗಳಿಗೂ ಹರಡಿದೆ. ಧಗ ಧಗನೆ ಹೊತ್ತಿಕೊಂಡಿದ್ದು, ಅಲ್ಲಿಯೇ ನಿಲ್ಲಿಸಿದ್ದ ಎರಡು ಬೈಕ್ ಕೂಡ ಹೊತ್ತಿ ಉರಿದು ಹೋಗಿದೆ.



ದೀಪಾವಳಿ ನಿಮಿತ್ತ ಕಾರ್ಮಿಕರು ರಜೆಯಲ್ಲಿದ್ದರೆ, ಮೀನುಗಾರರು ಬೋಟನ್ನು ನಿಲ್ಲಿಸಿ ತಮ್ಮ ಮನೆಗೆ ತೆರಳಿದ್ದರು. ಬೆಂಕಿ ಬಿದ್ದ ಕೂಡಲೇ ಅಗ್ನಿಶಾಮಕ ದಳ, ಸ್ಥಳೀಯರು ಸೇರಿ ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಸುದೀರ್ಘ ನಾಲ್ಕು ಗಂಟೆಗಳ ಬಳಿಕ ಬೆಂಕಿಯನ್ನು ನಂದಿಸಲಾಗಿದೆ. ಬೆಂಕಿ ಅನಾಹುತದಿಂದ ಸುಮಾರು 5 ಕೋಟಿಗೂ ಹೆಚ್ಚು ನಷ್ಟ ಅಂದಾಜಿಸಲಾಗಿದೆ.
Kundapur Eight boats go up in flames after fire breaks out in harbour. Eight boats that were anchored on the river bank, were gutted in a fire mishap on Monday November 13 at Manganese Road of Gangolli. The loss is estimated to run into crore of rupees.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm