ಬ್ರೇಕಿಂಗ್ ನ್ಯೂಸ್
13-11-23 10:24 pm Mangalore Correspondent ಕರಾವಳಿ
ಬೆಳ್ತಂಗಡಿ, ನ.13: ಬಿಜೆಪಿ ಯುವಮೋರ್ಚಾ, ಬೆಳ್ತಂಗಡಿ ಬಿಜೆಪಿ ಮಂಡಲ ಇದರ ವತಿಯಿಂದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಬೆಳ್ತಂಗಡಿ ಬಸ್ ನಿಲ್ದಾಣ ವಠಾರದಲ್ಲಿ ದೀಪಾವಳಿ ಪ್ರಯುಕ್ತ 4ನೇ ವರ್ಷದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾವಿರಾರು ಮಂದಿ ಜನರು ಸೇರಿ ವಿವಿಧ ಮಾದರಿಯ ದೋಸೆಗಳನ್ನು ಸವಿದರು.
ಇದೇ ವೇಳೆ, ಗೋವಿಗೆ ದೋಸೆಯನ್ನು ತಿನ್ನಿಸಿ ಗೋಪೂಜೆಯನ್ನೂ ಮಾಡಲಾಯಿತು. ವಿವಿಧ ಭಜನಾ ತಂಡಗಳಿಂದ ಕುಣಿತ ಭಜನೆಯೂ ನಡೆದಿದ್ದು ಆಕರ್ಷಣೆ ಪಡೆಯಿತು. ಇದೇ ವೇಳೆ ನಡೆದ ಸಭಾ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ದ.ಕ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬೃಜೇಶ್ ಚೌಟ ಸೇರಿದಂತೆ ಪ್ರಮುಖರಿದ್ದರು.
ಸಂಸದ ನಳಿನ್ ಕುಮಾರ್ ಮಾತನಾಡಿ, ಬೆಳ್ತಂಗಡಿಯಂತಹ ಗ್ರಾಮಾಂತರ ಭಾಗದಲ್ಲಿ ಇಂತಹ ಸಾಮೂಹಿಕ ದೀಪಾವಳಿ ಹಬ್ಬವನ್ನು ಆಯೋಜಿಸಿದ ಹರೀಶ್ ಪೂಂಜಾರವರು ಈ ರಾಜ್ಯಕ್ಕೆ ಮಾದರಿಯಾಗಿದ್ದಾರೆ. ಹಿಂದೂ ಧಾರ್ಮಿಕ ಪರಂಪರೆಯನ್ನು ಉಳಿಸಿಕೊಂಡು ಪೋಷಿಸಿಕೊಂಡು ಹೋಗುವಲ್ಲಿ ಇಂತಹ ಕಾರ್ಯಕ್ರಮಗಳು ಬಹಳ ಮಹತ್ವ ಪಡೆದಿವೆ ಎಂದರು.
ನರೇಂದ್ರ ಮೋದಿ ಈ ದೇಶಕ್ಕೆ ಪ್ರಧಾನ ಮಂತ್ರಿ ಆದ ಬಳಿಕ ಹಿಂದೂ ಸಂಸ್ಕ್ರತಿ ಬೆಳಗುತ್ತಿದೆ. ಹಲವು ಪುಣ್ಯಕ್ಷೇತ್ರಗಳು, ಪುಣ್ಯ ನದಿಗಳನ್ನು ಅಭಿವೃದ್ಧಿ ಪಡಿಸಿ ಸಾಂಸ್ಕೃತಿಕ, ಧಾರ್ಮಿಕ ಪರಂಪರೆಯನ್ನು ಮೇಲೆತ್ತಿ ಇಡೀ ವಿಶ್ವ ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಮುಂದಿನ ಜನವರಿಯಲ್ಲಿ ಅಯೋಧ್ಯೆಗೆ ಪ್ರಭು ಶ್ರೀರಾಮಚಂದ್ರನ ಆಗಮನವಾಗುತ್ತಿದ್ದು ಇದರೊಂದಿಗೆ ಇಡೀ ಭಾರತ ದೇಶದ ಸಂಸ್ಕೃತಿ, ಧಾರ್ಮಿಕ ಭಾವನೆ, ನಂಬಿಕೆಗಳು ಉತ್ತುಂಗಕ್ಕೆ ಹೋಗುತ್ತಿದೆ. ಇಲ್ಲಿನ ರಾಜ್ಯ ಸರ್ಕಾರ ಹಿಂದುಗಳ ಗಣಪತಿ ಹಬ್ಬಕ್ಕೆ, ದೀಪಾವಳಿಗೆ ಹಲವು ನಿರ್ಬಂಧಗಳನ್ನು ಹಾಕುವುದನ್ನು ಕಂಡಿದ್ದೇವೆ. ಇವೆಲ್ಲವನ್ನು ಹಿಂದೂ ಸಮಾಜ ಮೆಟ್ಟಿ ನಿಲ್ಲುವ ಅನಿವಾರ್ಯತೆ ಬಂದಿದೆ. ಇಂತಹ ಸಾಮೂಹಿಕ ದೀಪಾವಳಿಯಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದರೊಂದಿಗೆ ಭಾರತೀಯ ಜನತಾ ಪಾರ್ಟಿ ಇಡೀ ದೇಶಕ್ಕೆ ಪ್ರೇರಣೆಯಾಗಿದೆ ಎಂದು ನಳಿನ್ ಹೇಳಿದರು.
Belthangady dosa festival held With prayer and pooja.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm