ಬ್ರೇಕಿಂಗ್ ನ್ಯೂಸ್
14-11-23 07:42 pm Mangalore Correspondent ಕರಾವಳಿ
ಉಳ್ಳಾಲ, ನ.14: ಸಹೋದ್ಯೋಗಿಗೆ ಹಲ್ಲೆಗೈದು ಹಲ್ಲುಗಳನ್ನ ಉದುರಿಸಿ ಎಸ್ಕೇಪ್ ಆಗಿದ್ದ ಕುಂಪಲದ ಸೈಕೋ ರಿಕ್ಷಾ ಚಾಲಕನನ್ನ ಉಳ್ಳಾಲ ಪೊಲೀಸರು 24 ಗಂಟೆಗಳೊಳಗೆ ಬಂಧಿಸಿ ಜೈಲಿಗಟ್ಟಿದ್ದಾರೆ.
ಕಳೆದ ಆದಿತ್ಯವಾರ ಸಂಜೆ ಕುಂಪಲ ಬೈಪಾಸ್ ಆಟೋ ರಿಕ್ಷಾ ಪಾರ್ಕಿನಲ್ಲಿದ್ದ ರಿಕ್ಷಾ ಚಾಲಕ ಸುಶಾಂತ್(31) ಎಂಬವರಿಗೆ ಅದೇ ಪಾರ್ಕಿನಲ್ಲಿ ರಿಕ್ಷಾ ಚಾಲನೆ ಮಾಡುತ್ತಿರುವ ರೋಕೇಶ್(37) ಯಾನೆ ಸೈಕೋ ರೋಸ್ ಎಂಬಾತ ಅವಾಚ್ಯ ಶಬ್ದಗಳಿಂದ ಬೈದು ಕೈಯಿಂದ ಮುಖಕ್ಕೆ ಬಲವಾಗಿ ಥಳಿಸಿದ ಪರಿಣಾಮ ಸುಶಾಂತ್ ಅವರ ಎರಡು ಹಲ್ಲುಗಳು ಉದುರಿ ಹೋಗಿದೆ. ತೀವ್ರ ಗಾಯಗೊಂಡಿದ್ದ ಸುಶಾಂತ್ ರವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು ಹಲ್ಲೆಗೈದ ಆರೋಪಿ ರೋಕೇಶ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಠಾಣೆಯಲ್ಲಿ ತನ್ನ ವಿರುದ್ದ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ರೋಕೇಶ್ ತಲೆಮರೆಸಿಕೊಂಡಿದ್ದ.
ಉಳ್ಳಾಲ ಪೊಲೀಸ್ ಠಾಣೆಯ ಪಿಐ ಬಾಲಕೃಷ್ಣ ರವರು ಸೋಮವಾರವೇ ತನ್ನ ಸಿಬ್ಬಂದಿಗಳೊಂದಿಗೆ ಅತೀ ಶೀಘ್ರವಾಗಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿ ಜೈಲಿಗಟ್ಟಿದ್ದಾರೆ.
ಬಂಧಿತ ಆರೋಪಿ ರೋಕೇಶ್ ಯಾನೆ ಸೈಕೊ ರೋಸ್ ಕುಂಪಲ ನಿವಾಸಿಯಾಗಿದ್ದು ಅಮಲು ಪದಾರ್ಥಗಳಿಗೆ ದಾಸನಾಗಿ ಪ್ರದೇಶಕ್ಕೆ ಕಂಟಕಪ್ರಾಯನಾಗಿದ್ದ. ಈತನ ವಿರುದ್ದ ಉಳ್ಳಾಲ ಠಾಣೆಯಲ್ಲಿ ಈ ಹಿಂದೆಯೂ ಅನೇಕ ಪ್ರಕರಣಗಳು ದಾಖಲಾಗಿವೆ. ಈ ಹಿಂದೆ ಸ್ಥಳೀಯ ಹೆಣ್ಮಕ್ಕಳಿಗೆ ಲೈಗಿಂಕ ಕಿರುಕುಳ ನೀಡಿ ಸಾರ್ವಜನಿಕರಿಂದ ಶಾಸ್ತಿ ಮಾಡಿಸಿಕೊಂಡಿದ್ದ. ಆರೋಪಿಯ ಸಹೋದರ ವೃತ್ತಿಪರ ವಕೀಲನಾಗಿದ್ದು ಆತನ ಧೈರ್ಯದಿಂದಲೇ ಸೈಕೋ ರೋಸ್ ನಿರಂತರ ಅಪರಾಧ ಕೃತ್ಯ ಎಸಗುತ್ತಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ.
ದಿನ ನಿತ್ಯವೂ ನಶೆಯಲ್ಲೇ ರಿಕ್ಷಾ ಚಾಲನೆ ನಡೆಸುತ್ತಿರುವ ರೋಕೇಶನ ನಡವಳಿಕೆಯ ಬಗ್ಗೆ ಬೈಪಾಸಿನ ರಿಕ್ಷಾ ಚಾಲಕರು, ಮಾಲಕರೇ ಒಟ್ಟಾಗಿ ಉಳ್ಳಾಲ ಠಾಣೆಗೆ ಬರವಣಿಗೆಯಲ್ಲಿ ಮಾಹಿತಿ ಕೊಟ್ಟಿದ್ದು ಶೀಘ್ರ ಬಂಧನಕ್ಕೆ ಆಗ್ರಹಿಸಿದ್ದರು.
Auto driver assults driver at auto stand at Kumpala in Mangalore, arrested within hours by Ullal Police.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm