ಬ್ರೇಕಿಂಗ್ ನ್ಯೂಸ್
14-11-23 07:42 pm Mangalore Correspondent ಕರಾವಳಿ
ಉಳ್ಳಾಲ, ನ.14: ಸಹೋದ್ಯೋಗಿಗೆ ಹಲ್ಲೆಗೈದು ಹಲ್ಲುಗಳನ್ನ ಉದುರಿಸಿ ಎಸ್ಕೇಪ್ ಆಗಿದ್ದ ಕುಂಪಲದ ಸೈಕೋ ರಿಕ್ಷಾ ಚಾಲಕನನ್ನ ಉಳ್ಳಾಲ ಪೊಲೀಸರು 24 ಗಂಟೆಗಳೊಳಗೆ ಬಂಧಿಸಿ ಜೈಲಿಗಟ್ಟಿದ್ದಾರೆ.
ಕಳೆದ ಆದಿತ್ಯವಾರ ಸಂಜೆ ಕುಂಪಲ ಬೈಪಾಸ್ ಆಟೋ ರಿಕ್ಷಾ ಪಾರ್ಕಿನಲ್ಲಿದ್ದ ರಿಕ್ಷಾ ಚಾಲಕ ಸುಶಾಂತ್(31) ಎಂಬವರಿಗೆ ಅದೇ ಪಾರ್ಕಿನಲ್ಲಿ ರಿಕ್ಷಾ ಚಾಲನೆ ಮಾಡುತ್ತಿರುವ ರೋಕೇಶ್(37) ಯಾನೆ ಸೈಕೋ ರೋಸ್ ಎಂಬಾತ ಅವಾಚ್ಯ ಶಬ್ದಗಳಿಂದ ಬೈದು ಕೈಯಿಂದ ಮುಖಕ್ಕೆ ಬಲವಾಗಿ ಥಳಿಸಿದ ಪರಿಣಾಮ ಸುಶಾಂತ್ ಅವರ ಎರಡು ಹಲ್ಲುಗಳು ಉದುರಿ ಹೋಗಿದೆ. ತೀವ್ರ ಗಾಯಗೊಂಡಿದ್ದ ಸುಶಾಂತ್ ರವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು ಹಲ್ಲೆಗೈದ ಆರೋಪಿ ರೋಕೇಶ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಠಾಣೆಯಲ್ಲಿ ತನ್ನ ವಿರುದ್ದ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ರೋಕೇಶ್ ತಲೆಮರೆಸಿಕೊಂಡಿದ್ದ.
ಉಳ್ಳಾಲ ಪೊಲೀಸ್ ಠಾಣೆಯ ಪಿಐ ಬಾಲಕೃಷ್ಣ ರವರು ಸೋಮವಾರವೇ ತನ್ನ ಸಿಬ್ಬಂದಿಗಳೊಂದಿಗೆ ಅತೀ ಶೀಘ್ರವಾಗಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿ ಜೈಲಿಗಟ್ಟಿದ್ದಾರೆ.
ಬಂಧಿತ ಆರೋಪಿ ರೋಕೇಶ್ ಯಾನೆ ಸೈಕೊ ರೋಸ್ ಕುಂಪಲ ನಿವಾಸಿಯಾಗಿದ್ದು ಅಮಲು ಪದಾರ್ಥಗಳಿಗೆ ದಾಸನಾಗಿ ಪ್ರದೇಶಕ್ಕೆ ಕಂಟಕಪ್ರಾಯನಾಗಿದ್ದ. ಈತನ ವಿರುದ್ದ ಉಳ್ಳಾಲ ಠಾಣೆಯಲ್ಲಿ ಈ ಹಿಂದೆಯೂ ಅನೇಕ ಪ್ರಕರಣಗಳು ದಾಖಲಾಗಿವೆ. ಈ ಹಿಂದೆ ಸ್ಥಳೀಯ ಹೆಣ್ಮಕ್ಕಳಿಗೆ ಲೈಗಿಂಕ ಕಿರುಕುಳ ನೀಡಿ ಸಾರ್ವಜನಿಕರಿಂದ ಶಾಸ್ತಿ ಮಾಡಿಸಿಕೊಂಡಿದ್ದ. ಆರೋಪಿಯ ಸಹೋದರ ವೃತ್ತಿಪರ ವಕೀಲನಾಗಿದ್ದು ಆತನ ಧೈರ್ಯದಿಂದಲೇ ಸೈಕೋ ರೋಸ್ ನಿರಂತರ ಅಪರಾಧ ಕೃತ್ಯ ಎಸಗುತ್ತಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ.
ದಿನ ನಿತ್ಯವೂ ನಶೆಯಲ್ಲೇ ರಿಕ್ಷಾ ಚಾಲನೆ ನಡೆಸುತ್ತಿರುವ ರೋಕೇಶನ ನಡವಳಿಕೆಯ ಬಗ್ಗೆ ಬೈಪಾಸಿನ ರಿಕ್ಷಾ ಚಾಲಕರು, ಮಾಲಕರೇ ಒಟ್ಟಾಗಿ ಉಳ್ಳಾಲ ಠಾಣೆಗೆ ಬರವಣಿಗೆಯಲ್ಲಿ ಮಾಹಿತಿ ಕೊಟ್ಟಿದ್ದು ಶೀಘ್ರ ಬಂಧನಕ್ಕೆ ಆಗ್ರಹಿಸಿದ್ದರು.
Auto driver assults driver at auto stand at Kumpala in Mangalore, arrested within hours by Ullal Police.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm