ಬ್ರೇಕಿಂಗ್ ನ್ಯೂಸ್
17-11-23 01:37 pm Udupi Correspondent ಕರಾವಳಿ
ಉಡುಪಿ, ನ.17: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಒಂದೇ ಕುಟುಂಬದ ನಾಲ್ವರ ಹತ್ಯೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಕೃತ್ಯವನ್ನು ಸಂಭ್ರಮಿಸಿ ಪೋಸ್ಟ್ ಹಾಕಲಾಗಿದ್ದು ಈ ಕುರಿತು ಇನ್ಸ್ ಟಾ ಗ್ರಾಮ್ ಪೇಜ್ ವಿರುದ್ದ ಉಡುಪಿ ಸೈಬರಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನವೆಂಬರ್ 12 ರಂದು ಮಹಾರಾಷ್ಟ್ರ ಮೂಲದ ಆರೋಪಿ ಪ್ರವೀಣ್ ಚೌಗುಲೆ ಎಂಬಾತ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಕೃತ್ಯ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಕೃತ್ಯ ನಡೆದ ಮೂರೇ ದಿನಗಳಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ಈ ನಡುವೆ, ಕಿಡಿಗೇಡಿಗಳು ಈ ಹತ್ಯಾಕಾಂಡವನ್ನು ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮಿಸಿ ಪೋಸ್ಟ್ ಮಾಡುತ್ತಿರುವುದು ಪತ್ತೆಯಾಗಿದೆ. ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ‘ಹಿಂದು ಮಂತ್ರ’ ಎಂಬ ಪೇಜ್ನಲ್ಲಿ ಕೊಲೆ ಆರೋಪಿಯನ್ನು ಸಾಧನೆ ಮಾಡಿರುವಂತೆ ಬಿಂಬಿಸಿ ಪೋಸ್ಟ್ ಹಾಕಲಾಗಿದೆ. ‘ಹಿಂದು ಮಂತ್ರ’ ಎಂಬ ಇನ್ಸ್ಟಾಗ್ರಾಮ್ ಪುಟದಲ್ಲಿ ಈ ಬಗ್ಗೆ ಪೋಸ್ಟ್ ಹಾಕಿದ್ದು, ‘‘15 ನಿಮಿಷದಲ್ಲಿ 4 ಮುಸ್ಲಿಮರನ್ನು ಕೊಂದು ವಿಶ್ವ ದಾಖಲೆ ನಿರ್ಮಿಸಿದ್ದಾನೆ’’ ಎಂದು ಶೀರ್ಷಿಕೆ ನೀಡಲಾಗಿದೆ. ಅಲ್ಲದೆ, ಆರೋಪಿ ಪ್ರವೀಣ್ ಚೌಗುಲೆ ಫೋಟೋಗೆ ‘ಕಿರೀಟ’ ತೊಡಿಸಿ ವಿಕೃತಿ ಮೆರೆಯಲಾಗಿದೆ.

ತಮ್ಮ ಕೃತ್ಯಕ್ಕೂ ಸಮರ್ಥನೆ ನೀಡಿರುವ ಕಿಡಿಗೇಡಿಗಳು ‘ಉಡುಪಿ ಹುಡುಗಿಯರ ವಿಚಾರದಲ್ಲಿ ಯಾರೂ ಬಂದಿಲ್ಲ. ಆದ್ದರಿಂದ, ನಾವೂ ಈ ವಿಚಾರಕ್ಕೆ ಬರುವುದಿಲ್ಲ’ ಎಂದು ಬರೆಯಲಾಗಿದೆ. ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಇದಲ್ಲದೆ ಈ ‘ಹಿಂದು ಮಂತ್ರ’ ಇನ್ಸ್ಟಾಗ್ರಾಂ ಖಾತೆಯಲ್ಲಿ ಮುಸ್ಲಿಮ್ ಮಹಿಳೆಯರನ್ನು ಅವಹೇಳನ ಮಾಡುವ ರೀತಿಯ ಫೋಟೊ, ವಿಡಿಯೋಗಳನ್ನು ಹಂಚಿಕೊಂಡು ಶಾಂತಿ ಕದಡಲು ಯತ್ನಿಸಿದ ಹಲವು ಪೋಸ್ಟ್ಗಳನ್ನು ಹಾಕಲಾಗಿದೆ.
Udupi murder case, Instagram page Hindu Mantra celebrates murder, case filed at cyber crime.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm