ಬ್ರೇಕಿಂಗ್ ನ್ಯೂಸ್
17-11-23 05:07 pm Mangalore Correspondent ಕರಾವಳಿ
ಬೆಂಗಳೂರು, ನ 17: ತೆಲಂಗಾಣದಲ್ಲಿ ಚುನಾವಣಾ ಭಾಷಣದ ವೇಳೆ ಸಚಿವ ಜಮೀರ್ ಅಹಮದ್ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಮುಸ್ಲಿಂ ಸ್ಪೀಕರ್ ಯುಟಿ ಖಾದರ್ಗೆ ಈಗ ಬಿಜೆಪಿಯವರೂ ನಮಸ್ಕರಿಸುತ್ತಾರೆನ್ನುವ ಮೂಲಕ ವಿವಾದವನ್ನು ತಮ್ಮ ಮೈಮೇಲೆ ಎಳೆದುಕೊಂಡಿದ್ದಾರೆ.
ತೆಲಂಗಾಣದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿ ಭಾಷಣದ ವೇಳೆ ಹೇಳಿಕೆ ನೀಡಿದ ಜಮೀರ್, ಮುಸ್ಲಿಮರಲ್ಲಿ 17 ಮಂದಿಗೆ ಟಿಕೆಟ್ ನೀಡಲಾಗಿತ್ತು. ಈ ಪೈಕಿ 7 ಮಂದಿ ಶಾಸಕರಾಗಿ ಆಯ್ಕೆಯಾಗಿದ್ದೇವೆ. ಅದರಲ್ಲಿ 5 ಜನರಿಗೆ ಕಾಂಗ್ರೆಸ್ ಅಧಿಕಾರ ನೀಡಿದೆ. ನನಗೆ 3 ಖಾತೆ ನೀಡಿ ಮಂತ್ರಿ ಮಾಡಿದೆ. ರಹೀಂ ಖಾನ್ ಮಂತ್ರಿಯಾಗಿದ್ದಾರೆ. ಸಲೀಂ ಅಹ್ಮದ್ ವಿಪ್ ಆಗಿದ್ದಾರೆ. ನಸೀರ್ ಅಹ್ಮದ್ ಸಿಎಂ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದಾರೆ ಎಂದು ಹೇಳಿದರು.
.jpg?$p=294bfe0&f=16x10&w=852&q=0.8)
ರಾಜಕೀಯ ಇತಿಹಾಸದಲ್ಲಿ ಮುಸ್ಲಿಂ ವ್ಯಕ್ತಿಯನ್ನು ಸ್ಪೀಕರ್ ಮಾಡಿರಲಿಲ್ಲ. ಈಗ ಮೊದಲ ಬಾರಿಗೆ ಮುಸ್ಲಿಂ ವ್ಯಕ್ತಿಯನ್ನು ಸ್ಪೀಕರ್ ಮಾಡಿದ್ದು ಕಾಂಗ್ರೆಸ್ ಪಕ್ಷ. ಈಗ ದೊಡ್ಡ ದೊಡ್ಡ ಬಿಜೆಪಿ ನಾಯಕರು ಕೂಡಾ ಸ್ಪೀಕರ್ ಯುಟಿ ಖಾದರ್ ಅವರಿಗೆ ನಮಸ್ಕಾರ ಎನ್ನುತ್ತಾರೆ. ಇದನ್ನು ಮಾಡಿದ್ದು ಯಾರು? ಕಾಂಗ್ರೆಸ್ ಪಕ್ಷ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ.
ಕಳೆದ ಕೆಲ ದಿನಗಳ ಹಿಂದಷ್ಟೇ ಜಮೀರ್ ರಾಜಸ್ಥಾನದಲ್ಲಿ ಮಾತನಾಡುತ್ತಾ ಕರ್ನಾಟಕದಲ್ಲಿ ಕಾಂಗ್ರೆಸ್ ಮುಸ್ಲಿಂ ಮತಗಳಿಂದಲೇ ಅಧಿಕಾರಕ್ಕೆ ಬಂದಿದೆ ಎಂದಿದ್ದರು. ಈ ಮೂಲಕ ವಿವಾದವನ್ನು ಹುಟ್ಟುಹಾಕಿದ್ದರು. ಕರ್ನಾಟಕದ ಮಸೀದಿಗಳಲ್ಲಿ ನಾವು ಸಭೆ ಮಾಡಿ ಒಗ್ಗಟ್ಟು ಪ್ರದರ್ಶನಕ್ಕೆ ಮನವಿ ಮಾಡಿದ್ದೆವು. ಹೀಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ರಾಜಸ್ಥಾನದಲ್ಲೂ ಇದೇ ಸೂತ್ರ ಅನುಸರಿಸಿ ಎಂದು ಕರೆ ನೀಡಿದ್ದರು.
Karnataka Minister Zameer Ahmed Khan stirred controversy after he claimed that BJP leaders are now compelled to respectfully greet the Muslim Speaker of the state assembly, UT Khader, a situation he credited to the efforts of the Congress government.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm