ಬ್ರೇಕಿಂಗ್ ನ್ಯೂಸ್
18-11-23 06:14 pm Udupi Correspondent ಕರಾವಳಿ
ಉಡುಪಿ, ನ.18: ಸ್ಪೀಕರ್ ಸ್ಥಾನ ಎಂಬುದು ಸಾಂವಿಧಾನಿಕ ಹುದ್ದೆ. ಆ ಹುದ್ದೆಯ ಗೌರವ ಹಾಳು ಮಾಡುವ ಕೆಲಸ ಮಾಡಬೇಡಿ. ನಾವು ಮುಲ್ಲಾಗೆ ಸಲಾಂ ಹೊಡೆಯುತ್ತಿಲ್ಲ. ಸಂವಿಧಾನದ ಬಗ್ಗೆ ಅರ್ಥ ಆಗದ ನಿಮ್ಮಂಥವರು ಸಚಿವರಾದರೆ ಹೀಗೆಯೇ ಆಗೋದು ಎಂದು ಬಿಜೆಪಿ ಮುಖಂಡ ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸ್ಪೀಕರ್ ಯುಟಿ ಖಾದರ್ ಘನತೆಯನ್ನು ಹಾಳು ಮಾಡಬೇಡಿ, ನಾವು ಮುಲ್ಲಾ ಎಂದು ಗೌರವ ನೀಡೋದಿಲ್ಲ. ಸ್ಪೀಕರ್ ಎಂಬ ಹುದ್ದೆಗೆ ಗೌರವ ನೀಡುತ್ತೇವೆ ಎಂದು ಸಚಿವ ಜಮೀರ್ ಅಹ್ಮದ್ಗೆ ಮಾತಿನಿಂದಲೇ ತಿವಿದಿದ್ದಾರೆ.


ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆಗೆ ಅಸಮಾಧಾನ ಇದೆಯೇ ಎಂದು ಕೇಳಿದ ಪ್ರಶ್ನೆಗೆ, ನಾನು ರಾಜ್ಯಾಧ್ಯಕ್ಷ ಹುದ್ದೆಯ ರೇಸ್ನಲ್ಲಿ ಇಲ್ಲ ಎಂದು ಮೂರು ತಿಂಗಳ ಹಿಂದೆಯೇ ಸ್ಪಷ್ಟಪಡಿಸಿದ್ದೆ. ರೇಸಲ್ಲೇ ಇಲ್ಲ ಅಂದ ಮೇಲೆ ಬೇಸರದ ಪ್ರಶ್ನೆ ಬರಲ್ಲ. ಜವಾಬ್ದಾರಿ ಯಾವಾಗ ಯಾರಿಗೆ ಕೊಡಬೇಕು ಎಂದು ವರಿಷ್ಠರು ತೀರ್ಮಾನಿಸುತ್ತಾರೆ. ನಾವೆಲ್ಲರೂ ತಂಡವಾಗಿ ಕೆಲಸ ಮಾಡುತ್ತೇವೆ, ಹುದ್ದೆಯ ಬಗ್ಗೆ ಚರ್ಚೆ ಮಾಡಲು ಬಯಸಲ್ಲ ಎಂದು ಹೇಳಿದ್ದಾರೆ.

ಬಿಜೆಪಿಯಿಂದ ಉತ್ತರ ಕರ್ನಾಟಕ ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂಬ ಬಸನಗೌಡ ಪಾಟೀಲ್ ಯತ್ನಾಳ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾಯಕರ ಆಯ್ಕೆಯಲ್ಲಿ ಯಾವ ಭಾಗ ಎಂಬುದು ಬರಲ್ಲ. ಉತ್ತರ ಕರ್ನಾಟಕದವರಾದ ಬೊಮ್ಮಾಯಿ ಎರಡು ವರ್ಷ ಸಿಎಂ ಆಗಿದ್ದರು. ವಿಪಕ್ಷ ನಾಯಕನ, ರಾಜ್ಯಾಧ್ಯಕ್ಷರ ಆಯ್ಕೆ ಸಮಗ್ರ ಕರ್ನಾಟಕಕ್ಕೆ ನಡೆದ ಆಯ್ಕೆಯಾಗಿದೆ. ರಾಜ್ಯ ಬಿಜೆಪಿಗೆ ನಾಯಕನನ್ನು ಆಯ್ಕೆ ಮಾಡಲಾಗಿದೆ. ಅಶೋಕ ಸಮರ್ಥ ವಿಪಕ್ಷ ನಾಯಕನಾಗಿ ಎಲ್ಲಾ ಟೀಕೆಗೆ ಉತ್ತರಿಸುತ್ತಾರೆ. ನಮ್ಮ ಕೇಂದ್ರ ನಾಯಕರಾದ ನಿರ್ಮಲಾ ಸೀತಾರಾಮನ್, ದುಷ್ಯಂತ್ ಕುಮಾರ್ ನಮ್ಮೆಲ್ಲರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ನಮ್ಮೆಲ್ಲ ಶಾಸಕರ ಜೊತೆ ಮಾತನಾಡಿ ನಿರ್ಣಯ ಮಾಡಿದ್ದಾರೆ ಎಂದು ಸಿಟಿ ರವಿ ಹೇಳಿದರು.
Zameer ahmed Muslim Speaker Remark Triggers Controversy, Ct Ravi slams statement.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am