ಬ್ರೇಕಿಂಗ್ ನ್ಯೂಸ್
18-11-23 06:14 pm Udupi Correspondent ಕರಾವಳಿ
ಉಡುಪಿ, ನ.18: ಸ್ಪೀಕರ್ ಸ್ಥಾನ ಎಂಬುದು ಸಾಂವಿಧಾನಿಕ ಹುದ್ದೆ. ಆ ಹುದ್ದೆಯ ಗೌರವ ಹಾಳು ಮಾಡುವ ಕೆಲಸ ಮಾಡಬೇಡಿ. ನಾವು ಮುಲ್ಲಾಗೆ ಸಲಾಂ ಹೊಡೆಯುತ್ತಿಲ್ಲ. ಸಂವಿಧಾನದ ಬಗ್ಗೆ ಅರ್ಥ ಆಗದ ನಿಮ್ಮಂಥವರು ಸಚಿವರಾದರೆ ಹೀಗೆಯೇ ಆಗೋದು ಎಂದು ಬಿಜೆಪಿ ಮುಖಂಡ ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸ್ಪೀಕರ್ ಯುಟಿ ಖಾದರ್ ಘನತೆಯನ್ನು ಹಾಳು ಮಾಡಬೇಡಿ, ನಾವು ಮುಲ್ಲಾ ಎಂದು ಗೌರವ ನೀಡೋದಿಲ್ಲ. ಸ್ಪೀಕರ್ ಎಂಬ ಹುದ್ದೆಗೆ ಗೌರವ ನೀಡುತ್ತೇವೆ ಎಂದು ಸಚಿವ ಜಮೀರ್ ಅಹ್ಮದ್ಗೆ ಮಾತಿನಿಂದಲೇ ತಿವಿದಿದ್ದಾರೆ.


ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆಗೆ ಅಸಮಾಧಾನ ಇದೆಯೇ ಎಂದು ಕೇಳಿದ ಪ್ರಶ್ನೆಗೆ, ನಾನು ರಾಜ್ಯಾಧ್ಯಕ್ಷ ಹುದ್ದೆಯ ರೇಸ್ನಲ್ಲಿ ಇಲ್ಲ ಎಂದು ಮೂರು ತಿಂಗಳ ಹಿಂದೆಯೇ ಸ್ಪಷ್ಟಪಡಿಸಿದ್ದೆ. ರೇಸಲ್ಲೇ ಇಲ್ಲ ಅಂದ ಮೇಲೆ ಬೇಸರದ ಪ್ರಶ್ನೆ ಬರಲ್ಲ. ಜವಾಬ್ದಾರಿ ಯಾವಾಗ ಯಾರಿಗೆ ಕೊಡಬೇಕು ಎಂದು ವರಿಷ್ಠರು ತೀರ್ಮಾನಿಸುತ್ತಾರೆ. ನಾವೆಲ್ಲರೂ ತಂಡವಾಗಿ ಕೆಲಸ ಮಾಡುತ್ತೇವೆ, ಹುದ್ದೆಯ ಬಗ್ಗೆ ಚರ್ಚೆ ಮಾಡಲು ಬಯಸಲ್ಲ ಎಂದು ಹೇಳಿದ್ದಾರೆ.

ಬಿಜೆಪಿಯಿಂದ ಉತ್ತರ ಕರ್ನಾಟಕ ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂಬ ಬಸನಗೌಡ ಪಾಟೀಲ್ ಯತ್ನಾಳ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾಯಕರ ಆಯ್ಕೆಯಲ್ಲಿ ಯಾವ ಭಾಗ ಎಂಬುದು ಬರಲ್ಲ. ಉತ್ತರ ಕರ್ನಾಟಕದವರಾದ ಬೊಮ್ಮಾಯಿ ಎರಡು ವರ್ಷ ಸಿಎಂ ಆಗಿದ್ದರು. ವಿಪಕ್ಷ ನಾಯಕನ, ರಾಜ್ಯಾಧ್ಯಕ್ಷರ ಆಯ್ಕೆ ಸಮಗ್ರ ಕರ್ನಾಟಕಕ್ಕೆ ನಡೆದ ಆಯ್ಕೆಯಾಗಿದೆ. ರಾಜ್ಯ ಬಿಜೆಪಿಗೆ ನಾಯಕನನ್ನು ಆಯ್ಕೆ ಮಾಡಲಾಗಿದೆ. ಅಶೋಕ ಸಮರ್ಥ ವಿಪಕ್ಷ ನಾಯಕನಾಗಿ ಎಲ್ಲಾ ಟೀಕೆಗೆ ಉತ್ತರಿಸುತ್ತಾರೆ. ನಮ್ಮ ಕೇಂದ್ರ ನಾಯಕರಾದ ನಿರ್ಮಲಾ ಸೀತಾರಾಮನ್, ದುಷ್ಯಂತ್ ಕುಮಾರ್ ನಮ್ಮೆಲ್ಲರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ನಮ್ಮೆಲ್ಲ ಶಾಸಕರ ಜೊತೆ ಮಾತನಾಡಿ ನಿರ್ಣಯ ಮಾಡಿದ್ದಾರೆ ಎಂದು ಸಿಟಿ ರವಿ ಹೇಳಿದರು.
Zameer ahmed Muslim Speaker Remark Triggers Controversy, Ct Ravi slams statement.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm