ಬ್ರೇಕಿಂಗ್ ನ್ಯೂಸ್
20-11-23 03:48 pm Mangalore Correspondent ಕರಾವಳಿ
ಉಳ್ಳಾಲ, ನ.20: ಉಳ್ಳಾಲ ಕೋಟೆಪುರದ ಯುನೈಟೆಡ್ ಮೆರೈನ್ ಪ್ರಾಡಕ್ಟ್ಸ್ ಹೆಸರಿನ ಫಿಶ್ ಮೀಲ್ ಉತ್ಪನ್ನ ತಯಾರಿಕಾ ಕಾರ್ಖಾನೆಯು ಜನವಸತಿ ಪ್ರದೇಶದಲ್ಲಿ ಕಲ್ಲಿದ್ದಲನ್ನ ಬಳಸುವ ಪರಿಣಾಮ ಅದರಿಂದ ಉತ್ಪತ್ತಿಗೊಳ್ಳುವ ಹಾರುವ ಬೂದಿ ಉಳ್ಳಾಲ ನಗರವಾಸಿಗಳ ಹೊಟ್ಟೆ ಸೇರಿ ಮಾರಣಾಂತಿಕ ಕಾಯಿಲೆಗಳು ಉಲ್ಬಣಿಸಿದ್ದು ಅಕ್ರಮವಾಗಿ ಕಾರ್ಯಾಚರಿಸುತ್ತಿರುವ ಫ್ಯಾಕ್ಟರಿಯನ್ನ ಬಂದ್ ಮಾಡಿಸದಿದ್ದರೆ ಉಳ್ಳಾಲ ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟಿಸುತ್ತೇವೆಂದು ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್ ಎಚ್ಚರಿಸಿದ್ದಾರೆ.
ಕೋಟೆಪುರದ ಕಲ್ಲಿದ್ದಲು ಆಧಾರಿತ ಯುನೈಟೆಡ್ ಮರೈನ್ ಪ್ರಾಡಕ್ಟ್ಸ್ ಫಿಶ್ ಮೀಲ್ ಕಾರ್ಖಾನೆಯನ್ನು ಬಂದ್ ಮಾಡಿಸಲು ಒತ್ತಾಯಿಸಿ ಉಳ್ಳಾಲ ಕೋಡಿ ಡಿವೈಎಫ್ ಐ ಘಟಕದ ವತಿಯಿಂದ ಸೋಮವಾರ ಉಳ್ಳಾಲ ಕೋಟೆಪುರದಲ್ಲಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು.


ಪರಿಸರ ಮಲಿನಗೊಳಿಸುವ ಕೈಗಾರಿಕೆಗಳಿಗೆ ಅನುಮತಿ ಕೊಟ್ಟ ಅಧಿಕಾರಿಗಳೇ ಭ್ರಷ್ಟರು, ಕಾರ್ಖಾನೆ ಮಾಲೀಕರ ಪರ ಬ್ಯಾಟಿಂಗ್ ನಡೆಸುವ ಪರಿಸರ ನಿಯಂತ್ರಣ ಮಾಲಿನ್ಯ ಮಂಡಳಿ ಅಧಿಕಾರಿಗಳು ಈ ಪರಿಸರದಲ್ಲಿ ಎರಡು ದಿವಸವಾದರೂ ವಾಸ ಮಾಡಬೇಕು. ಕಲ್ಲಿದ್ದಲಿನ ಹಾರುಬೂದಿಯು ಪರಿಸರವನ್ನ ವ್ಯಾಪಿಸಿದ ಪರಿಣಾಮ ಸ್ಥಳೀಯರು ಶ್ವಾಸಕೋಶ ಸಮಸ್ಯೆ ಮತ್ತು ಕ್ಯಾನ್ಸರ್ ಬಾಧಿತರಾಗಿದ್ದು, ವಯಸ್ಕರು ಕೆಮ್ಮುವಿನಿಂದ ಬಳಲುತ್ತಿದ್ದಾರೆ. ಕೋಡಿ ಕೋಟೆಪುರ ಜನರನ್ನು ಆರೋಗ್ಯ ಇಲಾಖಾಧಿಕಾರಿಗಳು ತಪಾಸಣೆ ನಡೆಸಿದರೆ ನಿಜ ವಿಚಾರ ಬಹಿರಂಗವಾಗಲಿದೆ ಎಂದರು.


ಕೈಗಾರಿಕೋದ್ಯಮಿಗಳಿಗೆ ಸುರಕ್ಷತಾ ಕ್ರಮಕ್ಕೆ ದೊಡ್ಡ ವೆಚ್ಚ ತಗಲುವುದು ಎಂದು ಸಬೂಬು ನೀಡುವ ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿಗಳು ಕಂಪೆನಿ ಮಾಲೀಕರ ಪರ ಇದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಕೋಟೆಪುರದಲ್ಲಿ ಕಾರ್ಯಾಚರಿಸುತ್ತಿರುವ ಇತರ ಫಿಶ್ ಮೀಲ್ ಕಂಪನಿಗಳೂ ಪೈಪ್ ಗಳನ್ನ ಅಳವಡಿಸಿ ರಾಸಾಯನಿಕ ತ್ಯಾಜ್ಯಗಳನ್ನ ಸಮುದ್ರಕ್ಕೆ ಬಿಡುತ್ತಿದ್ದು ಇದರಿಂದ ಜಲಚರಗಳ ಮಾರಣಹೋಮ ನಡೆಯುತ್ತಿದೆ. ಅಲ್ಲದೆ ಈ ಫ್ಯಾಕ್ಟರಿಗಳು ಸ್ಥಳೀಯರಿಗೆ ಉದ್ಯೋಗವನ್ನೂ ನೀಡದೆ ವಂಚಿಸಿದೆ. ಫಿಶ್ ಮೀಲ್ ಕಾರ್ಖಾನೆ ಮಾಲೀಕರು ನಾವು ಸ್ಥಳೀಯ ಮಸೀದಿಗಳಿಗೆ ಡೊನೇಷನ್ ನೀಡುತ್ತೇವೆಂದು ಬೋಂಗು ಬಿಡುತ್ತಿದ್ದಾರೆ. ಅಸಲಿಗೆ ಇವರು ಸ್ಥಳೀಯರಿಗೆ ಮಾರಕ ರೋಗಗಳನ್ನೇ ಡೊನೇಟ್ ಮಾಡುತ್ತಿರುವುದು ವಾಸ್ತವ ಸತ್ಯ.
ಕಲ್ಲಿದ್ದಲು ಬಳಸೋ ಯುನೈಟೆಡ್ ಕಂಪನಿಯನ್ನ ಮುಚ್ಚಿಸದಿದ್ದರೆ ಸ್ಥಳೀಯ ನಗರಸಭೆಗೆ ಮುತ್ತಿಗೆ ಹಾಕುತ್ತೇವೆ, ನಂತರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಕೇಂದ್ರ ಕಚೇರಿಯೆದುರು ಧರಣಿ ಕೈಗೊಳ್ಳುತ್ತೇವೆ. ಅಗತ್ಯ ಬಿದ್ದರೆ ವಿಧಾನ ಸೌಧಕ್ಕೂ ಕಾಲ್ನಡಿಗೆ ಜಾಥ ನಡೆಸುತ್ತೇವೆ ಎಂದು ಇಮ್ತಿಯಾಝ್ ಎಚ್ಚರಿಸಿದರು.
ಡಿವೈಎಫ್ ಐ ಮುಖಂಡರಾದ ಮನೋಜ್ ವಾಮಂಜೂರ್, ರಝಾಕ್ ಮೊಂಟೆಪದವು, ಅಶ್ರಫ್ ಹರೇಕಳ ಮೊದಲಾದವರು ಇದ್ದರು.
Mangalore Ullal Marine Products fish mill pollution cases illness to Residents, DYFI protest at factory.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm