ಬ್ರೇಕಿಂಗ್ ನ್ಯೂಸ್
22-11-23 02:26 pm Mangalore Correspondent ಕರಾವಳಿ
ಮಂಗಳೂರು, ನ.22: ಬೆಳಗಾವಿ ಅಧಿವೇಶನ ಬಳಿಕ ಕಾಂಗ್ರೆಸ್ನಲ್ಲಿ ದೊಡ್ಡ ಪರಿವರ್ತನೆಯಾಗಲಿದೆ. ಕೆಲವೇ ದಿನಗಳಲ್ಲಿ 30-40 ಶಾಸಕರು ಕಾಂಗ್ರೆಸ್ನಿಂದ ಹೊರಗೆ ಬರುತ್ತಾರೆ ಎಂದು ಬಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.
ಮಂಗಳವಾರ ಮಂಗಳೂರಿನಲ್ಲಿ ಮಾತನಾಡಿದ ಅವರು, " ಕಾಂಗ್ರೆಸ್ನೊಳಗೆ ಆಂತರಿಕ ಗೊಂದಲ ಜಾಸ್ತಿಯಾಗಿದೆ. ಸಿದ್ದರಾಮಯ್ಯ, ಡಿಕೆಶಿ ಮತ್ತು ಜಾರಕಿಹೊಳಿ ತಂಡ ಪ್ರತ್ಯೇಕವಾಗಿ ಇಬ್ಭಾಗವಾಗುತ್ತಿದೆ. ಅದರ ಮಧ್ಯೆ ಮರಿ ಖರ್ಗೆ ಮುಖ್ಯಮಂತ್ರಿಯಾಗುವ ಬೇಡಿಕೆ ಇಡುತ್ತಿದಾರೆ. ಕಾಂಗ್ರೆಸ್ ಡಿವೈಡ್ ಆಗುತ್ತಿದ್ದು ಹಸ್ತದೊಳಗೆ ಹಸ್ತದ ಆಪರೇಷನ್ ಆಗುತ್ತಿದೆ ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್ನ 30-40 ಶಾಸಕರು ಬಿಜೆಪಿಗೆ ಬರಲಿದ್ದಾರೆ. ಇದೇ ಭಯದಿಂದ ಕಾಂಗ್ರೆಸ್ನವರು ಬಿಜೆಪಿಯಿಂದ ಬರುತ್ತಿದ್ದಾರೆ ಎಂದು ದಾರಿ ತಪ್ಪಿಸುತ್ತಿದ್ದಾರೆ. ಆದರೆ, ಯಾವುದೇ ಕಾರಣಕ್ಕೆ ಬಿಜೆಪಿಯಿಂದ ಯಾರೂ ಹೋಗುತ್ತಿಲ್ಲ. ಬೆಳಗಾವಿ ಅಧಿವೇಶನ ಮುಗಿದ ತಕ್ಷಣ ಕಾಂಗ್ರೆಸ್ನಲ್ಲಿ ದೊಡ್ಡ ಪರಿವರ್ತನೆಯಾಗುತ್ತದೆ. ಸಿಎಂ ಹುದ್ದೆಗೆ ಹತ್ತಾರು ಟವಲ್ ಗಳು ಬಿದ್ದಿವೆ. ಜಾರಕಿಹೊಳಿ, ಪರಮೇಶ್ವರ್ ಜೊತೆಗೆ ದಲಿತ ಸಿಎಂ ಕಾರ್ಡ್ ಹಾಕುತ್ತಿದ್ದಾರೆ. ಇತ್ತ ಪ್ರಿಯಾಂಕ್ ಖರ್ಗೆ, ಡಿಕೆಶಿ ಎಲ್ಲರೂ ಸಿಎಂ ಸ್ಥಾನಕ್ಕೆ ಮುಗಿಬಿದ್ದಿದ್ದಾರೆ. ಈ ಕಾರಣ ಸರ್ಕಾರ ಬೀಳಬಹುದು ಎಂದರು.
ಸರ್ಕಾರದಿಂದ ಅಭಿವೃದ್ಧಿ ಆಗುತ್ತಿಲ್ಲ ;
ರಾಜ್ಯ ಸರ್ಕಾರ ಟೇಕಾಫ್ ಆಗುತ್ತಿಲ್ಲ, ಅಭಿವೃದ್ಧಿ ಕಾರ್ಯ ಆಗುತ್ತಿಲ್ಲ. ಶಾಂತಿ ಸುವ್ಯವಸ್ಥೆ ಹದಗೆಟ್ಡಿದೆ. ನಾಲ್ಕು ತಿಂಗಳಲ್ಲಿ ಮುನ್ನೂರು ರೈತರ ಆತ್ಮಹತ್ಯೆ ಆಗಿದೆ. ಉಡುಪಿಯಲ್ಲಿ ಹಾಡಹಗಲೇ ನಾಲ್ವರ ಹತ್ಯೆ ಆಗಿದೆ. ಶಾಂತಿ ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ, ಬರ ನಿಯಂತ್ರಣ ಆಗಿಲ್ಲ. ರಾಜ್ಯದಲ್ಲಿ ಪಾಕಿಸ್ತಾನ ಜಿಂದಾಬಾದ್ ಹೇಳಿ ತಲವಾರು ತೋರಿಸಿದ್ರೂ ಬಂಧನವಾಗುತ್ತಿಲ್ಲ. ರಾಷ್ಟ್ರ ವಿರೋಧಿ ಶಕ್ತಿಗಳು ರಾಜ್ಯದಲ್ಲಿ ಎದ್ದು ನಿಂತಿದೆ ಎಂದು ಕಿಡಿಕಾರಿದರು.
ಮೋದಿ ಕೊಟ್ಟ ಅನುದಾನದಲ್ಲಿ ರಾಜ್ಯದಲ್ಲಿ ಕೆಲಸ ಆಗ್ತಿದೆ ;
ಮೋದಿ ಸರ್ಕಾರ ಕೊಟ್ಟ ಅನುದಾನದಲ್ಲಿ ರಾಜ್ಯದಲ್ಲಿ ಕೆಲಸ ಆಗ್ತಿದೆ. ರಾಜ್ಯದಿಂದ ಒಂದು ರೂಪಾಯಿ ಬಿಡಿಗಾಸು ಬಿಡಗಡೆಯಾಗಿಲ್ಲ. ಈ ಸರ್ಕಾರ ಭ್ರಷ್ಟಾಚಾರದ ಸರ್ಕಾರ, ಅಧಿಕಾರಿಗಳ ಸಂಬಳ ಕೊಡಲು ಕೂಡ ಹಣವಿಲ್ಲ. ಮೂರ್ನಾಲ್ಕು ತಿಂಗಳು ಕಾದು ನೋಡಿ, ಎಲ್ಲವೂ ಗೊತ್ತಾಗಲಿದೆ ಎಂದು ನಳಿನ್ ಕುಮಾರ್ ಕಟೀಲು ಹೇಳಿದರು.
30 to 40MLAs to leave Congress very soon says MP Nalin Kumar Kateel in Mangalore. Internal tussle has increased in the Congress. The groups of Siddaramaiah, D K Shivakumar and Satish Jarkiholi are getting divided. Around 30 to 40 MLAs will desert the Congress within a few days,” said MP Nalin Kumar Kateel.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm