ಬ್ರೇಕಿಂಗ್ ನ್ಯೂಸ್
23-11-23 06:15 pm Mangalore Correspondent ಕರಾವಳಿ
ಮಂಗಳೂರು, ನ.23: ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಜಿಲ್ಲಾ ಪಂಚಾಯತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯವರ ಅಧೀನಕ್ಕೆ ಒಳಪಡಿಸುವಂತೆ ರಾಜ್ಯ ಸರಕಾರವು ಹೊರಡಿಸಿರುವ ಆದೇಶವನ್ನು ತಕ್ಷಣವೇ ಹಿಂಪಡೆಯುವಂತೆ ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯ ಎಸ್.ಆರ್ ಹರೀಶ್ ಆಚಾರ್ಯ ಅಗ್ರಹಿಸಿದ್ದಾರೆ. ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಈ ಹಿಂದಿನಂತೆಯೇ ಜಿಲಾಧಿಕಾರಿಯವರ ಅಧೀನದಲ್ಲಿಯೇ ಯಥಾಸ್ಥಿತಿಯಲ್ಲಿ ಮುಂದುವರಿಸಬೇಕೆಂದು ಅವರು ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಹೆಸರನ್ನು ಶಾಲಾ ಶಿಕ್ಷಣ ( ಪದವಿ ಪೂರ್ವ) ಇಲಾಖೆ ಎಂದು ಬದಲಾಯಿಸಿ ಪ್ರೌಢ ಶಾಲಾ ವಿಭಾಗದಲ್ಲಿ ವಿಲೀನಗೊಳಿಸುವ ಪ್ರಕ್ರಿಯೆಗೆ ಸರಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪರೀಕ್ಷಾ ವಿಭಾಗವನ್ನು ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ವಿಲೀನಗೊಳಿಸಲಾಗಿದೆ. ಈ ಮೂಲಕ ಪದವಿ ಪೂರ್ವ ಶಿಕ್ಷಣ ವ್ಯವಸ್ಥೆಯನ್ನೇ ರಾಜ್ಯ ಸರಕಾರ ಕಡೆಗಣಿಸುತ್ತಿದೆ. ಇದು ರಾಜ್ಯ ಸರಕಾರದ ಖಂಡನೀಯ ನಡೆಯಾಗಿದೆ. ಇದರಿಂದ ಪದವಿ ಪೂರ್ವ ಕಾಲೇಜಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಧ್ಯಾಪಕರು ತೀವ್ರ ಆತಂಕಕ್ಕೊಳಗಾಗಿದ್ದಾರೆ ಎಂದು ಅವರು ವಿವರಿಸಿದ್ದಾರೆ.
ಶೈಕ್ಷಣಿಕ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆಗಳು ಏಕಪಕ್ಷೀಯವಾಗಿ ನಡೆಯಬಾರದು. ಅದು ಎಲ್ಲರನ್ನೂ ಒಳ್ಳಗೊಂಡು ಸರ್ವ ಸಮ್ಮತದಿಂದ ಕೂಡಿರಬೇಕು. ಈ ಹಿನ್ನೆಲೆಯಲ್ಲಿ ಅದನ್ನು ಒಳಗೊಳ್ಳುವ ಕಾಲೇಜು ಪ್ರಾಚಾರ್ಯರು, ಉಪನ್ಯಾಸಕರು ಮತ್ತು ಶಿಕ್ಷಣ ತಜ್ಞರೊಂದಿಗೆ ಚರ್ಚಿಸಿ ಸಮನ್ವಯ ಸಾಧಿಸಿಕೊಂಡು ಮಾಡಬೇಕಾಗಿದೆ. ಆದುದರಿಂದ ರಾಜ್ಯ ಸರಕಾರವು ತಕ್ಷಣವೇ ಈ ಬಗ್ಗೆ ತೆಗೆದುಕೊಂಡ ಎಲ್ಲಾ ಪ್ರಕ್ರಿಯಗಳನ್ನು ನಿಲ್ಲಿಸಿ ತಕ್ಷಣವೇ ಪದವಿ ಪೂರ್ವ ಕಾಲೇಜು ಪ್ರಾಚಾರ್ಯರ ಸಂಘದ ಪ್ರತಿನಿಧಿಗಳು, ಉಪನ್ಯಾಸಕರ ಸಂಘದ ಪ್ರತಿನಿಧಿಗಳು ಮತ್ತು ಶಿಕ್ಷಣ ತಜ್ಞರ ಸಭೆಯನ್ನು ಕರೆದು ಚರ್ಚಿಸಿ ಒಮ್ಮತದಿಂದ ತೀರ್ಮಾನಿಸಲು ಕ್ರಮ ಕೈಗೊಳ್ಳಬೇಕೆಂದು ಹರೀಶ್ ಆಚಾರ್ಯ ಹೇಳಿಕೆಯ ಮೂಲಕ ಒತ್ತಾಯಿಸಿದ್ದಾರೆ.
Mangalore University Former syndicate member S R Harish Acharya requests for post graduation education department to be under GIP.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm