ಬ್ರೇಕಿಂಗ್ ನ್ಯೂಸ್
23-11-23 11:08 pm Mangalore Correspondent ಕರಾವಳಿ
ಮಂಗಳೂರು, ನ.23: ರಸ್ತೆ ಅಪಘಾತದಲ್ಲಿ ಕಾಲಿಗೆ ಗಾಯಗೊಂಡಿದ್ದ 16 ವರ್ಷದ ಬಾಲಕ ಕುಳಾಯಿ ನಿವಾಸಿ ಅರ್ಫಾನ್ ಎಂಬಾತ ಸುರತ್ಕಲ್ ಬಳಿಯ ಖಾಸಗಿ ಆಸ್ಪತ್ರೆ ಅಥರ್ವದಲ್ಲಿ ಮೃತಪಟ್ಟ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ತುತ್ತಾಗಿದೆ. ಇದೇ ವೇಳೆ, ಡಿವೈಎಫ್ಐ ಸಂಘಟನೆ ಸದಸ್ಯರು, ಬಾಲಕನಿಗೆ ವೈದ್ಯರು ನೀಡಿದ್ದ ಅತಿಯಾದ ಅನಸ್ತೇಶಿಯಾ ಇಂಜೆಕ್ಷನ್ ಕಾರಣದಿಂದಲೇ ಸಾವಾಗಿದೆ ಎಂದು ಆರೋಪಿಸಿದ್ದಾರೆ.
ವೈದ್ಯರ ನಿರ್ಲಕ್ಷ್ಯದಿಂದ ಬಾಲಕ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ಹಾಗು ಗ್ರಾಮಸ್ಥರು ಬುಧವಾರ ಸಂಜೆ ಆಸ್ಪತ್ರೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದರು. ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣಗೊಂಡಿದ್ದರಿಂದ ಪೊಲೀಸರು ಭದ್ರತೆ ಕೈಗೊಂಡಿದ್ದರು. ಸ್ಥಳಕ್ಕೆ ಡಿವೈಎಫ್ಐ ಮುಖಂಡ ಮುನೀರ್ ಕಾಟಿಪಳ್ಳ,ಕಾಂಗ್ರೆಸ್ ಮುಖಂಡ ಇನಾಯತ್ ಅಲಿ, ಡಿವೈಎಫ್ಐ ಮುಖಂಡರಾದ ಬಿ.ಕೆ ಇಮ್ತಿಯಾಜ್, ಶ್ರೀನಾಥ್ ಕುಲಾಲ್, ಕಾಂಗ್ರೆಸ್ ಮುಖಂಡ ಪುರುಷೋತ್ತಮ ಚಿತ್ರಾಪುರ ಆಗಮಿಸಿ ಆಸ್ಪತ್ರೆ ಸಿಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದರು.

ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆಯಂತೆ ಜಿಲ್ಲಾ ವೈದ್ಯಾಧಿಕಾರಿ ಡಾ. ತಿಮ್ಮಯ್ಯ ಸ್ಥಳಕ್ಕೆ ಆಗಮಿಸಿ ಕುಟುಂಬಸ್ಥರು ಮತ್ತು ಆಸ್ಪತ್ರೆ ಅಧಿಕಾರಿಗಳೊಂದಿಗೆ ಸಮಾಲೋಚಿಸಿದರು. ಮುಖಂಡರ ಬೇಡಿಕೆಯಂತೆ ಪ್ರಕರಣದ ತನಿಖೆಗಾಗಿ ಖಾಸಗಿ ವೈದ್ಯರನ್ನು ಒಳಗೊಂಡ ಎಂಟು ಜನ ತಜ್ಞ ವೈದ್ಯರ ತಂಡವನ್ನು ರಚಿಸುವುದಾಗಿ ತಿಳಿಸಿದರು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಇದೇ ವೇಳೆ, ಡಿವೈಎಫ್ಐ ಪ್ರಮುಖ ಬಿಕೆ ಇಮ್ತಿಯಾಜ್ ಹೇಳಿಕೆ ನೀಡಿದ್ದು ಕಾಲಿನ ಗಾಯಕ್ಕೆ ಅನಸ್ತೇಶಿಯಾ ಇಂಜೆಕ್ಷನ್ ನೀಡಿದ್ದು ಅದು ಅತಿಯಾಗಿದ್ದರಿಂದಲೇ ಮತ್ತೆ ಪ್ರಜ್ಞೆ ಬಂದಿರಲಿಲ್ಲ. ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ. ಬಳಿಕ ಬಾಲಕನನ್ನು ಮಂಗಳೂರಿನ ಬೇರೆ ಆಸ್ಪತ್ರೆಗೆ ಒಯ್ಯಲು ಸೂಚಿಸಿದ್ದರು. ಕರೆದೊಯ್ಯುವ ವೇಳೆಗೆ ಬಾಲಕ ಮೃತಪಟ್ಟಿದ್ದ. ಇದಕ್ಕೆ ಕಾರಣವಾದ ಅಥರ್ವ ಆಸ್ಪತ್ರೆ ಲೈಸೆನ್ಸ್ ಕ್ಯಾನ್ಸಲ್ ಮಾಡಿ ಬಂದ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
Death of boy after surgery in Mangalore, over dose of Anesthesia reason says DYFI. The death of a 16 year old boy who had sustained minor injuries in a road mishap, at a private hospital in Mukka where he was being treated, has sparked outrage among his family members and locals who staged a protest in front of the hospital on November 22, Wednesday blaming medical negligence for the death.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm