ಬ್ರೇಕಿಂಗ್ ನ್ಯೂಸ್
24-11-23 02:56 pm Mangalore Correspondent ಕರಾವಳಿ
ಮಂಗಳೂರು, ನ.24: ಡಿಸಿಎಂ ಡಿಕೆ ಶಿವಕುಮಾರ್ ಮೇಲಿನ ಅಕ್ರಮ ಆಸ್ತಿ ಪ್ರಕರಣದಲ್ಲಿ ಸಿಬಿಐ ತನಿಖೆಯಿಂದ ವಾಪಸ್ ಪಡೆದ ಸಚಿವ ಸಂಪುಟದ ನಿರ್ಧಾರದ ಬಗ್ಗೆ ಮಂಗಳೂರಿನಲ್ಲಿ ನಗರಾಭಿವೃದ್ಧಿ ಇಲಾಖೆ ಸಚಿವ ಭೈರತಿ ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಅಡ್ವೊಕೇಟ್ ಜನರಲ್ ಗೆ ಕಳೆದ ಬಾರಿ ಯಡಿಯೂರಪ್ಪ ಸರ್ಕಾರ ಇದ್ದಾಗ ಮೌಖಿಕ ಆದೇಶ ಕೊಟ್ಟಿದ್ದರು. ಮೌಖಿಕ ಆದೇಶ ಕೊಡೋದು ತಪ್ಪು ಅನ್ನೋದು ಆಗಿನ ಎಜಿ ಮತ್ತು ಈಗಿನ ಎಜಿ ಶಶಿಕಿರಣ್ ಶೆಟ್ಟಿ ಅಭಿಪ್ರಾಯ. ಆ ಪ್ರಕಾರ ಈಗ ಕೊಟ್ಟ ಅನುಮತಿಯನ್ನು ವಾಪಾಸ್ ಪಡೆಯಲಾಗಿದೆ ಎಂದು ಹೇಳಿದ್ದಾರೆ.
ಸಿಬಿಐ ಸುಪ್ರೀಂ ಅಥವಾ ಹೈಕೋರ್ಟ್ ಹೋಗೋದು ಅವರಿಗೆ ಬಿಟ್ಟಿದ್ದು. ಆಗಿನ ಸರ್ಕಾರ ಮಾಡಿರೋದು ತಪ್ಪು ಅಂತ ಎಜಿ ವರದಿ ಕೊಟ್ಟಿದ್ದಾರೆ. ಹೀಗಾಗಿ ಕ್ಯಾಬಿನೆಟ್ ಗೂ ಅದು ತಪ್ಪು ಅಂತ ಅನಿಸಿ ವಾಪಸ್ ತೆಗೊಂಡಿದೆ. ಬಿಜೆಪಿಯವರು ಪ್ರಾಮಾಣಿಕರಾಗಿದ್ದರೆ ಎಜಿ ಅಭಿಪ್ರಾಯ ಕೇಳಿ ತನಿಖೆಗೆ ಕೊಡಬೇಕಿತ್ತು. ಎಜಿ ಅಭಿಪ್ರಾಯ ಕೊಡುವ ಮೊದಲೇ ಆಗಿನ ಸಿಎಂ ಸಿಬಿಐ ಕೊಟ್ಟಿದ್ದು ತಪ್ಪಲ್ವಾ? ಅವರು ಪ್ರಾಮಾಣಿಕರಾಗಿದ್ರೆ ಎಜಿ ಕೇಳಿ ಕೊಡಬೇಕಿತ್ತು.
ನಮ್ಮ ಪ್ರಾಮಾಣಿಕತೆ ಪ್ರಶ್ನೆ ಮಾಡೋ ಇವರು ಎಜಿ ಸಲಹೆ ಕೇಳಬೇಕಿತ್ತು. ಈಗಿನ ಎಜಿ ಅದು ತಪ್ಪು ಅಂದ ಕಾರಣಕ್ಕೆ ಕ್ಯಾಬಿನೆಟ್ ನಿರ್ಧಾರ ತೆಗೆದುಕೊಂಡಿದೆ ಎಂದರು.
ಸೋಮಣ್ಣ ಕಾಂಗ್ರೆಸ್ ಸೇರುತ್ತಾರೆಯೇ ಎಂಬ ಪ್ರಶ್ನೆಗೆ, ಕಾಂಗ್ರೆಸ್ ಗೆ ಯಾರು ಬರ್ತಾರೆ, ಹೋಗ್ತಾರೆ ಅಂತ ನನಗೆ ಗೊತ್ತಿಲ್ಲ. ವಿಜಯೇಂದ್ರ ಅಥವಾ ಯಾವುದೇ ವ್ಯಕ್ತಿಯಿಂದ ಪಕ್ಷದಲ್ಲಿ ಬದಲಾವಣೆ ಆಗಲ್ಲ. ಕಾಂಗ್ರೆಸ್ ಪಕ್ಷಕ್ಕೆ ಬರೋರ ಸಂಖ್ಯೆ ಹೆಚ್ಚಾಗಲಿದೆ, ಸರ್ಕಾರ ಸರಿಯಾದ ದಾರಿಯಲ್ಲಿದೆ. ಸೋಮಣ್ಣ ವಿಚಾರದಲ್ಲಿ ಮಾತುಕತೆ ಆಗ್ತಿದೆ, ಏನಾಗಿದೆ ಗೊತ್ತಿಲ್ಲ ಎಂದರು.

ಜಾತಿ ಗಣತಿ ಅನ್ನೋದು ಯಾರದ್ದೇ ಜಾತಿ ಎತ್ತಿ ತೋರಿಸೋ ಉದ್ದೇಶ ಅಲ್ಲ. ಆಯಾ ಜಾತಿಗಳ ಆರ್ಥಿಕ ಸ್ಥಿತಿಗತಿ ತಿಳಿಯೋ ಉದ್ದೇಶ. ಅವರನ್ನು ಮೇಲೆ ಎತ್ತೋದೇ ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಸಮಾಜದಲ್ಲಿ ಮೇಲೆ ಎತ್ತೋ ಉದ್ದೇಶ ಜಾತಿ ಗಣತಿಯದ್ದು. ಸಿಎಂ, ಡಿಸಿಎಂ ಮಧ್ಯೆ ಈ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಜಾತಿ ಗಣತಿ ವರದಿ ತೆಗೊಂಡು ಸಾಧಕ ಬಾಧಕ ನೋಡಿ ಸರ್ಕಾರ ಅನುಮೋದನೆ ನೀಡಲಿದೆ ಎಂದರು.
Urban Development Minister Byrathi Suresh has reacted to the cabinet's decision to withdraw from the CBI probe into the disproportionate assets case against Deputy Chief Minister DK Shivakumar. He had given an oral order to the Advocate General in this regard last time when the Yediyurappa government was in power.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm