ಬ್ರೇಕಿಂಗ್ ನ್ಯೂಸ್
24-11-23 10:57 pm Mangalore Correspondent ಕರಾವಳಿ
ಉಳ್ಳಾಲ, ನ.24: ಭ್ರಷ್ಟಾಚಾರ ಆರೋಪ ಹೊತ್ತಿರುವ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ನಡೆಯುತ್ತಿದ್ದರೂ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸಚಿವ ಸಂಪುಟವು ತನಿಖೆಗೆ ಕೊಟ್ಟ ಅನುಮತಿಯನ್ನ ಹಿಂಪಡೆದದ್ದು ಖಂಡನೀಯ. ಸ್ಪೀಕರ್ ಕುರ್ಚಿಗೂ ಧರ್ಮ ಲೇಪನ ನೀಡಿರುವ ಸಚಿವ ಜಮೀರ್ ಅಹಮ್ಮದ್ ಅವರ ನಡೆಯ ಬಗ್ಗೆ ಮುಂಬರುವ ಅಧಿವೇಶನದಲ್ಲಿ ಪ್ರಶ್ನಿಸಲಿದ್ದೇವೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಮಂಗಳೂರು ಮಂಡಲ ಕಚೇರಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಹೇಳಿಕೊಳ್ಳಲು ಆಶ್ಚರ್ಯ ಎನಿಸುವಂತಹ ಬಹಳ ನೋವಿನ ಸಂಗತಿ ನಡೆದಿದ್ದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಭ್ರಷ್ಟಾಚಾರ ಆರೋಪದಡಿಯಲ್ಲಿ
ಸಿಬಿಐ ತನಿಖೆ ಮಾಡುತ್ತಿದ್ದರೂ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸಚಿವ ಸಂಪುಟ ಸಿಬಿಐ ತನಿಖೆಗೆ ಕೊಟ್ಟ ಅನುಮತಿ ವಾಪಾಸು ತೆಗೆದುಕೊಂಡಿದೆ. ಯಾವುದೇ ರಾಗ ದ್ವೇಷಗಳಿಲ್ಲದೆ ಆಡಳಿತ ನಡೆಸುವುದಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ ಅವರು ಸಿಬಿಐ ತನಿಖೆಯನ್ನ ಹಿಂದೆಗೆಯುವ ಮೂಲಕ ಭ್ರಷ್ಟಾಚಾರ ಆರೋಪ ಹೊತ್ತ ಉಪ ಮುಖ್ಯ ಮಂತ್ರಿಯ ರಕ್ಷಣೆಗೆ ನಿಂತಿರುವುದು ಖೇದಕರ.

ತನಿಖೆ ಹಂತದಲ್ಲಿರುವ ಪ್ರಕರಣಗಳಲ್ಲಿ ಸರಕಾರ ಮೂಗು ತೂರಿಸಬಾರದು. ಜನಪ್ರತಿನಿಧಿಗಳು ಸೇರಿದಂತೆ ಇನ್ನಿತರ ಕ್ರಿಮಿನಲ್ ಪ್ರಕರಣಗಳಿಗೆ ಸರ್ಕಾರ ಕೈ ಹಾಕಬಾರದು ಎಂದು ಸುಪ್ರೀಂ ಕೋರ್ಟ್ ತಿಳಿಸಿದ್ದರೂ ಶಾಸನಬದ್ಧ ಸರಕಾರ ಸಚಿವ ಸಂಪುಟದ ಮೂಲಕ ತನಿಖೆಯನ್ನ ಹಿಂಪಡೆದದ್ದು ಸಿದ್ಧರಾಮಯ್ಯ ಸರಕಾರ ಭ್ರಷ್ಟಾಚಾರಕ್ಕೆ ಸಂಪೂರ್ಣ ಸಹಕಾರ ಕೊಡುತ್ತಿರುವುದನ್ನ ಜಗಜ್ಜಾಹೀರಾಗಿಸಿದೆ ಎಂದರು.
ಸಚಿವ ಜಮೀರ್ ಅಹ್ಮದ್ ಭಾಷಣವೊಂದರಲ್ಲಿ ಸ್ಪೀಕರ್ ಯು.ಟಿ. ಖಾದರ್ ಗೆ ಬಿಜೆಪಿಯವರೂ ಸಲಾಂ ಹೊಡೆಯುವಂತೆ ಮಾಡಿದ್ದೇವೆ ಎಂದು ಹೇಳಿರುವುದು ಪ್ರಜಾ ಪ್ರಭುತ್ವದ ಅಪಹಾಸ್ಯ ಮಾಡಿದಂತೆ. ಸಭಾಪತಿಗಳ ಕುರ್ಚಿಗೂ ಧರ್ಮದ ಲೇಪನ ನೀಡುವ ಜಮೀರ್ ರಾಜೀನಾಮೆ ಪಡೆಯುವ ತಾಕತ್ತು ಸಿದ್ಧರಾಮಯ್ಯರಿಗೆ ಇದೆಯೇ ಎಂದು ಕೋಟ ಪ್ರಶ್ನಿಸಿದರು. ಬಿಜೆಪಿ ಮಂಡಲ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಕಾರ್ಯದರ್ಶಿ ಸತೀಶ್ ಕುಂಪಲ ಮೊದಲಾದವರು ಪತ್ರಿಕಾ ಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
Mangalore Kota Srinivas Poojary slams congress DCM Dk Shivakumar.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm