ಬ್ರೇಕಿಂಗ್ ನ್ಯೂಸ್
24-11-23 10:57 pm Mangalore Correspondent ಕರಾವಳಿ
ಉಳ್ಳಾಲ, ನ.24: ಭ್ರಷ್ಟಾಚಾರ ಆರೋಪ ಹೊತ್ತಿರುವ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ನಡೆಯುತ್ತಿದ್ದರೂ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸಚಿವ ಸಂಪುಟವು ತನಿಖೆಗೆ ಕೊಟ್ಟ ಅನುಮತಿಯನ್ನ ಹಿಂಪಡೆದದ್ದು ಖಂಡನೀಯ. ಸ್ಪೀಕರ್ ಕುರ್ಚಿಗೂ ಧರ್ಮ ಲೇಪನ ನೀಡಿರುವ ಸಚಿವ ಜಮೀರ್ ಅಹಮ್ಮದ್ ಅವರ ನಡೆಯ ಬಗ್ಗೆ ಮುಂಬರುವ ಅಧಿವೇಶನದಲ್ಲಿ ಪ್ರಶ್ನಿಸಲಿದ್ದೇವೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಮಂಗಳೂರು ಮಂಡಲ ಕಚೇರಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಹೇಳಿಕೊಳ್ಳಲು ಆಶ್ಚರ್ಯ ಎನಿಸುವಂತಹ ಬಹಳ ನೋವಿನ ಸಂಗತಿ ನಡೆದಿದ್ದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಭ್ರಷ್ಟಾಚಾರ ಆರೋಪದಡಿಯಲ್ಲಿ
ಸಿಬಿಐ ತನಿಖೆ ಮಾಡುತ್ತಿದ್ದರೂ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸಚಿವ ಸಂಪುಟ ಸಿಬಿಐ ತನಿಖೆಗೆ ಕೊಟ್ಟ ಅನುಮತಿ ವಾಪಾಸು ತೆಗೆದುಕೊಂಡಿದೆ. ಯಾವುದೇ ರಾಗ ದ್ವೇಷಗಳಿಲ್ಲದೆ ಆಡಳಿತ ನಡೆಸುವುದಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ ಅವರು ಸಿಬಿಐ ತನಿಖೆಯನ್ನ ಹಿಂದೆಗೆಯುವ ಮೂಲಕ ಭ್ರಷ್ಟಾಚಾರ ಆರೋಪ ಹೊತ್ತ ಉಪ ಮುಖ್ಯ ಮಂತ್ರಿಯ ರಕ್ಷಣೆಗೆ ನಿಂತಿರುವುದು ಖೇದಕರ.

ತನಿಖೆ ಹಂತದಲ್ಲಿರುವ ಪ್ರಕರಣಗಳಲ್ಲಿ ಸರಕಾರ ಮೂಗು ತೂರಿಸಬಾರದು. ಜನಪ್ರತಿನಿಧಿಗಳು ಸೇರಿದಂತೆ ಇನ್ನಿತರ ಕ್ರಿಮಿನಲ್ ಪ್ರಕರಣಗಳಿಗೆ ಸರ್ಕಾರ ಕೈ ಹಾಕಬಾರದು ಎಂದು ಸುಪ್ರೀಂ ಕೋರ್ಟ್ ತಿಳಿಸಿದ್ದರೂ ಶಾಸನಬದ್ಧ ಸರಕಾರ ಸಚಿವ ಸಂಪುಟದ ಮೂಲಕ ತನಿಖೆಯನ್ನ ಹಿಂಪಡೆದದ್ದು ಸಿದ್ಧರಾಮಯ್ಯ ಸರಕಾರ ಭ್ರಷ್ಟಾಚಾರಕ್ಕೆ ಸಂಪೂರ್ಣ ಸಹಕಾರ ಕೊಡುತ್ತಿರುವುದನ್ನ ಜಗಜ್ಜಾಹೀರಾಗಿಸಿದೆ ಎಂದರು.
ಸಚಿವ ಜಮೀರ್ ಅಹ್ಮದ್ ಭಾಷಣವೊಂದರಲ್ಲಿ ಸ್ಪೀಕರ್ ಯು.ಟಿ. ಖಾದರ್ ಗೆ ಬಿಜೆಪಿಯವರೂ ಸಲಾಂ ಹೊಡೆಯುವಂತೆ ಮಾಡಿದ್ದೇವೆ ಎಂದು ಹೇಳಿರುವುದು ಪ್ರಜಾ ಪ್ರಭುತ್ವದ ಅಪಹಾಸ್ಯ ಮಾಡಿದಂತೆ. ಸಭಾಪತಿಗಳ ಕುರ್ಚಿಗೂ ಧರ್ಮದ ಲೇಪನ ನೀಡುವ ಜಮೀರ್ ರಾಜೀನಾಮೆ ಪಡೆಯುವ ತಾಕತ್ತು ಸಿದ್ಧರಾಮಯ್ಯರಿಗೆ ಇದೆಯೇ ಎಂದು ಕೋಟ ಪ್ರಶ್ನಿಸಿದರು. ಬಿಜೆಪಿ ಮಂಡಲ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಕಾರ್ಯದರ್ಶಿ ಸತೀಶ್ ಕುಂಪಲ ಮೊದಲಾದವರು ಪತ್ರಿಕಾ ಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
Mangalore Kota Srinivas Poojary slams congress DCM Dk Shivakumar.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am