ಬ್ರೇಕಿಂಗ್ ನ್ಯೂಸ್
26-11-23 09:42 pm Mangaluru Correspondent ಕರಾವಳಿ
ಮಂಗಳೂರು, ನ.26: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆಗೈದ ಪ್ರಕರಣದಲ್ಲಿ ಪತ್ನಿ, ಮಕ್ಕಳನ್ನು ಕಳಕೊಂಡ ನೂರ್ ಮಹಮ್ಮದ್ ಮಂಗಳೂರಿನಲ್ಲಿ ಮಕ್ಕಳಾದ ಐನಾಝ್ ಮತ್ತು ಅಫ್ನಾನ್ ನೆಲೆಸಿದ್ದ ಬಾಡಿಗೆ ಮನೆಗೆ ಆಗಮಿಸಿದ್ದು, ಮನೆಯಲ್ಲಿ ಸಿಕ್ಕ ವಸ್ತುಗಳನ್ನು ನೋಡಿ ಕಣ್ಣೀರಿಟ್ಟಿದ್ದಾರೆ.
ಮಕ್ಕಳಿಬ್ಬರೂ ಒಂದೇ ಕೊಠಡಿಯಲ್ಲಿ ನೆಲೆಸಿದ್ದರು. ತಾವೇ ಅಡುಗೆಯನ್ನೂ ಮಾಡಿಕೊಳ್ಳುತ್ತಿದ್ದರು. ಆರಂಭದಲ್ಲಿ ಬಾಡಿಗೆ ಮನೆ ಹುಡುಕಿಕೊಡಲು ಪ್ರವೀಣ್ ಚೌಗುಲೆ ನೆರವಾಗಿದ್ದ. ಈ ಬಗ್ಗೆ ಮನೆ ಮಾಲೀಕರ ಜೊತೆಗೂ ಮಾತನಾಡಿದ್ದು, ಮನೆ ತೋರಿಸುವುದಕ್ಕೆ ಮಾತ್ರ ಪ್ರವೀಣ್ ಇಲ್ಲಿಗೆ ಬಂದಿದ್ದ ಎಂದು ಹೇಳಿದ್ದಾರೆ. ಈ ನಡುವೆ, ಪ್ರವೀಣ ಚೌಗುಲೆ ಹೊಸತಾಗಿ ಕಾರು ಖರೀದಿಸಿದ್ದು ತನ್ನಲ್ಲಿದ್ದ ಸ್ಕೂಟರನ್ನು ಐನಾಝ್ ಗೆ ನೀಡಿದ್ದ. ಇದನ್ನು ಐನಾಝ್ ಕೂಡ ತನಗೆ ಮಾಹಿತಿ ನೀಡಿದ್ದಳು. ಸ್ಕೂಟರಿಗೆ 28 ಸಾವಿರ ರೂಪಾಯಿ ನೀಡಿದ್ದೇನೆ ಎಂದು ತಿಳಿಸಿದ್ದಳು.
ಮನೆಯ ಹೊರಗಡೆ ಆ ಸ್ಕೂಟರ್ ಹಾಗೇ ಇದೆ. ಮನೆಯಲ್ಲಿ ಮಕ್ಕಳಿಬ್ಬರ ವಸ್ತುಗಳನ್ನು ನೋಡಿ ದುಃಖ ಉಕ್ಕಿ ಬಂದಿದೆ. ಹೆತ್ತವರು ಮುಸ್ಸಂಜೆಯಲ್ಲಿರುವಾಗ ಯೌವನಕ್ಕೆ ಬಂದ ಮಕ್ಕಳು ಈ ರೀತಿ ಕೊಲೆಯಾಗುತ್ತಾರೆಂದು ಯಾರೂ ಅಂದುಕೊಳ್ಳಲ್ಲ. ಮನೆಯಲ್ಲಿ ಐರನ್ ಬಾಕ್ಸ್, ಬಟ್ಟೆಗಳು, ಇದರ ನಡುವೆ ಖುರಾನ್ ಪುಸ್ತಕವೂ ಸಿಕ್ಕಿದೆ. ನನ್ನ ಹೆಣ್ಮಕ್ಕಳಿಬ್ಬರು ಇಸ್ಲಾಂ ಧರ್ಮದ ಚೌಕಟ್ಟಿನಲ್ಲಿ ಬದುಕುತ್ತಿದ್ದರು ಎಂದು ನೂರ್ ಮಹಮ್ಮದ್ ಹೇಳಿದ್ದಾರೆ.
ಉದ್ಯೋಗದಲ್ಲಿ ಸೀನಿಯರ್ ಆಗಿದ್ದರಿಂದ ಪ್ರವೀಣ್ ಚೌಗುಲೆಗೆ ಮಂಗಳೂರಿನಲ್ಲಿ ಪರಿಚಯ ಇದ್ದುದರಿಂದ ಬಾಡಿಗೆ ಮನೆ ಪಡೆಯುವಾಗ ಆತನ ನೆರವು ಕೇಳಿದ್ದಳು. ಈ ಬಗ್ಗೆ ತನ್ನಲ್ಲಿಯೂ ಐನಾಝ್ ಹೇಳಿಕೊಂಡಿದ್ದಳು. ಮನೆಯನ್ನೂ ನೋಡುವುದಕ್ಕೆ ನಾನು ಈ ಹಿಂದೆ ಬಂದಿದ್ದೆ. ಮನೆಯಲ್ಲಿ ಅಡುಗೆ ಇನ್ನಿತರ ಎಲ್ಲದಕ್ಕೂ ವ್ಯವಸ್ಥೆ ಮಾಡಿಕೊಂಡಿದ್ದರು. ಇಬ್ಬರೂ ಸೇರಿಕೊಂಡು ಮನೆ ನಡೆಸುತ್ತಿದ್ದರು. ಮನೆಯಲ್ಲಿ ಬುರ್ಖಾ, ಇನ್ನಿತರ ಎಲ್ಲ ಬಟ್ಟೆ ಬರೆಗಳೂ ಇವೆ ಎಂದು ಎಲ್ಲವನ್ನೂ ನೋಡುತ್ತಲೇ ಕಣ್ಣೀರು ಹಾಕಿದ್ದಾರೆ. ಆರೋಪಿ ಪ್ರವೀಣ್ ಚೌಗುಲೆಯನ್ನು ಬಂಧಿಸಿ ಜೈಲಿಗಟ್ಟಿದ ಬಳಿಕ ಮೊದಲ ಬಾರಿಗೆ ನೂರ್ ಮಹಮ್ಮದ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
Udupi Murder, father of Ainaz visits house in Mangalore, cries looking at her items. My daughter had taken the accused's help as she found difficulty in finding a room to stay. Relying on him as her senior, she had asked for his help because usually Muslim girls don't get the rented rooms so easily.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm