ಬ್ರೇಕಿಂಗ್ ನ್ಯೂಸ್
28-11-23 06:09 pm Mangalore Correspondent ಕರಾವಳಿ
ಮಂಗಳೂರು, ನ.27: ಶಿಕ್ಷಕರು ಕೊನೆಗಾಲದಲ್ಲಿ ಪಿಂಚಣಿ ಇದೆಯೆಂದು ಭರವಸೆಯಲ್ಲಿ ಇರುತ್ತಿದ್ದರು. ಆದರೆ ಈಗ ಅಂತಹ ಸನ್ನಿವೇಶ ಇಲ್ಲ. 2006ರಲ್ಲಿ ಜೆಡಿಎಸ್ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಡಿಸಿಎಂ ಆಗಿದ್ದ ಯಡಿಯೂರಪ್ಪ ಸರಕಾರವೇ ಪಿಂಚಣಿ ವ್ಯವಸ್ಥೆಯನ್ನು ತೆಗೆದು ಹಾಕಿದ್ದರು. ಶಿಕ್ಷಕರು ಪಿಂಚಣಿ ಇಲ್ಲದ ದುರವಸ್ಥೆ ಅನುಭವಿಸುತ್ತಿದ್ದರೆ, ಅದಕ್ಕೆ ಬಿಜೆಪಿ ಮತ್ತು ಜೆಡಿಎಸ್ ಕಾರಣ ಎಂದು ಪಶ್ಚಿಮ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆಕೆ ಮಂಜುನಾಥ್ ಹೇಳಿದ್ದಾರೆ.
ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಮೂರನೇ ಬಾರಿಗೆ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೇನೆ. 17 ವರ್ಷ ಗಣಿತ ಶಿಕ್ಷಕನಾಗಿ, ಶಿಕ್ಷಕರ ಸಮಸ್ಯೆ ಅರಿತಿದ್ದೇನೆ. ಆಬಳಿಕ ನಿವೃತ್ತಿ ಪಡೆದು ಸಾರ್ವಜನಿಕ ಜೀವನದಲ್ಲಿದ್ದೇನೆ. ಶಿಕ್ಷಕರು ತಮ್ಮದೇ ಸಮುದಾಯದ ಅಭ್ಯರ್ಥಿಯನ್ನು ಬೆಂಬಲಿಸಬೇಕು. ಮೊದಲ ಬಾರಿ 2012ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅಲ್ಪ ಅಂತರದಿಂದ ಸೋಲು ಅನುಭವಿಸಿದ್ದೆ. ಆಗ ಸದಾನಂದ ಗೌಡ ಸಿಎಂ ಆಗಿದ್ದು, ಸ್ವತಃ ಅಧಿಕಾರ ದುರುಪಯೋಗ ಪಡಿಸಿ ಮತಗಳನ್ನು ಖರೀದಿಸಿದ್ದರು. ಅದರ ಪರಿಣಾಮವಾಗಿ ಮಗಂಳೂರಿನಂಥ ಜಾಗದಲ್ಲಿ ಕೇವಲ 20 ಶೇಕಡಾ ಅಷ್ಟೇ ಓಟಿಂಗ್ ಆಗಿತ್ತು. 2018ರಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದರಿಂದ ಶಿಕ್ಷಕರಿಗೆ ಆಮಿಷ ತೋರಿಸಿ ಭೋಜೇಗೌಡರನ್ನು ಗೆಲ್ಲಿಸಿದ್ದರು.
ಆದರೆ ಶಿಕ್ಷಕರ ಸಮಸ್ಯೆಯ ಬಗ್ಗೆ ಒಂದು ಬಾರಿಯೂ ದನಿಯೆತ್ತದ ಶಾಸಕನಿದ್ದರೆ ಅದು ಭೋಜೇಗೌಡ. ಶಿಕ್ಷಕರ ಪಿಂಚಣಿ ವ್ಯವಸ್ಥೆಯನ್ನು ರದ್ದುಪಡಿಸಿ ಆ ಹಣವನ್ನು ಷೇರು ಮಾರುಕಟ್ಟೆಗೆ ಹಾಕಿ, ಜೂಜಿಗಿಟ್ಟವರು ಬಿಜೆಪಿಯವರು. ಷೇರು ಮಾರುಕಟ್ಟೆಗೆ ನಾನು ಕೂಡ 6 ಲಕ್ಷ ರೂಪಾಯಿ ಐದು ವರ್ಷಗಳ ಹಿಂದೆ ಹಾಕಿದ್ದೆ. ಅದೀಗ ಮೈನಸ್ ಆಗಿದ್ದು ಹಾಕಿದ್ದ ಹಣವೂ ಇಲ್ಲದಾಗಿದೆ. ಶಿಕ್ಷಕರ ಹಣವನ್ನು ಈ ರೀತಿ ಷೇರು ಜೂಜಿಗೆ ಹಾಕಿ, ದುಡಿದ ಹಣವನ್ನು ದುರುಪಯೋಗ ಮಾಡಿದ್ದಾರೆ. ಇದೊಂದು ಕೆಟ್ಟ ಪದ್ಧತಿಯಾಗಿದ್ದು, ಕಾಂಗ್ರೆಸ್ ಶಿಕ್ಷಕರ ಕ್ಷೇತ್ರದಲ್ಲಿ ಗೆದ್ದು ಬಂದರೆ ಮರಳಿ ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೆ ತರುವ ಕೆಲಸ ಮಾಡುತ್ತೇವೆ ಎಂದರು.
ಶಿಕ್ಷಕರ ಸಮಸ್ಯೆಯನ್ನು ಅತಿ ಹೆಚ್ಚು ಆಲಿಸಿದ್ದು, ಅವರ ಪರವಾಗಿ ಕೆಲಸ ಮಾಡಿದ್ದು ಕಾಂಗ್ರೆಸ್ ಸರಕಾರ ಮಾತ್ರ. ಆದರೆ, ಶಿಕ್ಷಕರು ಕಾಂಗ್ರೆಸಿಗರನ್ನು ಗೆಲ್ಲಿಸಿಲ್ಲ. ಈ ಬಾರಿಯ ಗ್ಯಾರಂಟಿ ಯೋಜನೆ, ಜನಪರ ಆಡಳಿತದಿಂದಾಗಿ ಶಿಕ್ಷಕರು ಸೇರಿದಂತೆ ಜನರು ಕಾಂಗ್ರೆಸ್ ಪರ ಇದ್ದಾರೆ. ಓಟು ಕೊಟ್ಟು ಗೆಲ್ಲಿಸುತ್ತಾರೆಂದು ಭರವಸೆ ಇದೆ. ಈ ಬಾರಿ 18 ಸಾವಿರದಷ್ಟು ಶಿಕ್ಷಕರನ್ನು ಮತ ಪಟ್ಟಿಗೆ ನೋಂದಣಿ ಮಾಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐದು ಸಾವಿರ ಮಂದಿ ಇದ್ದಾರೆ ಎಂದರು. ಜೆಆರ್ ಲೋಬೊ, ಪ್ರವೀಣಚಂದ್ರ ಆಳ್ವ ಮತ್ತಿತರರು ಇದ್ದರು.
K K Manjunath in Mangalore, slams BJP and JDS of teachers pension.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm