ಬ್ರೇಕಿಂಗ್ ನ್ಯೂಸ್
16-11-20 03:27 pm Mangaluru Correspondent ಕರಾವಳಿ
ಉಳ್ಳಾಲ: ನವೆಂಬರ್, 16: ತೊಕ್ಕೊಟ್ಟು ಸಮೀಪದ ಪಂಡಿತ್ ಹೌಸ್ ನಲ್ಲಿರುವ ಶಿಥಿಲಗೊಂಡಿರುವ ಹಳೆಯ ವಸತಿ ಮತ್ತು ವಾಣಿಜ್ಯ ಕಟ್ಟಡದ ಬಾಡಿಗೆ ಮನೆಯೊಂದರಲ್ಲಿ ಬೆಂಕಿ ಅವಘಡ ನಡೆದಿದ್ದು ಮನೆಯಲ್ಲಿದ್ದ ಒಂಟಿ ವಿಧವೆಯ ನಗ, ನಗದು, ಬಟ್ಟೆಬರೆಗಳು ಸುಟ್ಟು ಕರಕಲಾಗಿವೆ.
ವಿದ್ಯಾ ಶೆಟ್ಟಿ ಎಂಬ ಒಂಟಿ ಮಹಿಳೆ ಕಳೆದ ಎಂಟು ವರ್ಷಗಳಿಂದ ಪಂಡಿತ್ ಹೌಸ್ನ ವಿಜಯಾ ಕಾಂಪ್ಲೆಕ್ಸ್ ನ ಮೊದಲ ಮಹಡಿಯಲ್ಲಿ ಬಾಡಿಗೆ ವಾಸವಿದ್ದರೆನ್ನಲಾಗಿದೆ. ವಿದ್ಯಾ ಅವರು ನಗರದ ಕೆಎಮ್ ಸಿ ಆಸ್ಪತ್ರೆಯಲ್ಲಿ ಸಣ್ಣ ಉದ್ಯೋಗದಲ್ಲಿದ್ದು ಇಂದು ಬೆಳಗ್ಗೆ ಎಂದಿನಂತೆ ಮನೆಗೆ ಬೀಗ ಹಾಕಿ ಕೆಲಸಕ್ಕೆ ತೆರಳಿದ್ದು ಮಧ್ಯಾಹ್ನದ ಹೊತ್ತಿಗೆ ಮನೆಯೊಳಗೆ ಬೆಂಕಿ ಆಕಸ್ಮಿಕ ನಡೆದಿದ್ದು ಶಾರ್ಟ್ ಸರ್ಕ್ಯುಟ್ ನಿಂದ ಅನಾಹುತ ನಡೆದಿರುವುದಾಗಿ ಶಂಕಿಸಲಾಗಿದೆ.




ಅಗ್ನಿ ಶಾಮಕದಳ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ವಿದ್ಯಾ ಅವರು ಮನೆಯೊಳಗಿಟ್ಟಿದ್ದ 12,000 ರೂಪಾಯಿ ನಗದು ಸುಟ್ಟು ಹೋಗಿದ್ದು, ಟಿ.ವಿ. ಶೋಕೇಸ್ ಮೇಲಿಟ್ಟಿದ್ದ ಚಿನ್ನದ ಸರ, ಎರಡು ಉಂಗುರಗಳು ನಾಪತ್ತೆಯಾಗಿವೆ. ಮನೆಯೊಳಗಿನ ಕಪಾಟು, ಮಂಚ ಸಂಪೂರ್ಣ ಸುಟ್ಟು ಕರಕಲಾಗಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಶಿಥಿಲ ಕಟ್ಟಡ, ಮಾಲಕನ ಅಮಾನುಷ ವರ್ತನೆ !
ಪಂಡಿತ್ ಹೌಸ್ ನಲ್ಲಿರುವ ವಿಜಯಾ ಕಾಂಪ್ಲೆಕ್ಸ್ ಕಟ್ಟಡ ಹಳೆಯದಾಗಿದ್ದು ಶಿಥಿಲಗೊಂಡಿದೆ. ವಿದ್ಯುತ್ ಸಂಪರ್ಕದ ತಂತಿಗಳು ಹಳೆಯದಾಗಿದ್ದು ನಾದುರಸ್ತಿ ಸ್ಥಿತಿಯಲ್ಲಿದೆ. ಘಟನೆಯಿಂದ ತನ್ನ ಸೊತ್ತನ್ನು ಕಳಕೊಂಡ ವಿದ್ಯಾ ಶೆಟ್ಟಿಯವರು ದುಃಖದಲ್ಲಿದ್ದು ಸ್ಥಳಕ್ಕಾಗಮಿಸಿದ ಕಟ್ಟಡ ಮಾಲಕ ವಿಧವೆಯ ವಿರುದ್ಧವೇ ಹರಿಹಾಯ್ದು ಮನೆ ಖಾಲಿ ಮಾಡುವಂತೆ ಮಾನವೀಯತೆ ಮರೆತು ವರ್ತಿಸಿದ್ದಾನೆಂದು ಸ್ಥಳೀಯರು ತಿಳಿಸಿದ್ದಾರೆ. ತೊಕ್ಕೊಟ್ಟು ಮತ್ತಿತರ ಕಡೆ ಬಾರ್ ಹೊಂದಿರುವ ಕಟ್ಟಡ ಮಾಲಕನ ಅಮಾನವೀಯತೆ ಬಗ್ಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Fire breaks out at old building in Thokottu, Mangalore. The Building also had a house in which a widow was residing is said to be completely gutted by the fire accident.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm