ಬ್ರೇಕಿಂಗ್ ನ್ಯೂಸ್
01-12-23 08:06 pm Mangalore Correspondent ಕರಾವಳಿ
ಪುತ್ತೂರು, ಡಿ.1: ಹಾಸನದಲ್ಲಿ ನಡೆದ ಶಾಲಾ ಶಿಕ್ಷಕಿಯ ಅಪಹರಣ ಪ್ರಕರಣದಲ್ಲಿ ಆರೋಪಿಗಳನ್ನು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿ ರಾಮು ಎಂಬಾತನಾಗಿದ್ದು ಅಪಹರಣಕ್ಕೀಡಾದ ಶಿಕ್ಷಕಿ ಅರ್ಪಿತಾಗೆ ಸೋದರ ಮಾವ ಎಂದು ತಿಳಿದುಬಂದಿದೆ.
ಆರೋಪಿ ರಾಮು, ಅರ್ಪಿತಾಳನ್ನ ಮದುವೆಯಾಗಲು ಬಯಸಿದ್ದ. ಆದರೆ ಆಕೆ ಮತ್ತು ಪೋಷಕರು ಇದಕ್ಕೆ ಒಪ್ಪಿಗೆ ನೀಡಿರಲಿಲ್ಲ. ಇದರಿಂದ ಸಿಟ್ಟುಗೊಂಡ ಆರೋಪಿ ರಾಮು ಹೇಗಾದರು ಸರಿ ಆಕೆಯನ್ನು ಮದುವೆಯಾಗಲೇ ಬೇಕೆಂದು ಗುರುವಾರ ಶಾಲೆಗೆ ಹೋಗುತ್ತಿದ್ದ ಅರ್ಪಿತಾಳನ್ನು ಇನ್ನೋವಾ ಕಾರಿನಲ್ಲಿ ಅಪಹರಿಸಿದ್ದ. ಆರೋಪಿ ರಾಮು ಕಾರಿನಲ್ಲೇ ಯುವತಿಯ ಮನವೊಲಿಸಿ ತಾಳಿಕಟ್ಟಲು ಮುಂದಾಗಿದ್ದ. ಆದರೆ ಯುವತಿ ಇದಕ್ಕೆ ಒಪ್ಪಿರಲಿಲ್ಲ.

ಅಪಹರಣ ವಿಚಾರ ತಿಳಿಯುತ್ತಿದ್ದಂತೆ ಬೆನ್ನು ಹತ್ತಿದ್ದ ಹಾಸನ ಪೊಲೀಸರು ಬಲೆ ಬೀಸಿದ್ದರು. ಹಾಸನದಿಂದ ಸಕಲೇಶಪುರ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯತ್ತ ಸಾಗುತ್ತಿದ್ದಾರೆ ಎಂಬ ವಿಚಾರ ತಿಳಿದು ಬೆನ್ನು ಹತ್ತಿದ್ದರು. ಪೊಲೀಸರು ಬೆನ್ನತ್ತಿದ್ದನ್ನು ತಿಳಿದು ಕಾರಿನಲ್ಲಿ ಜೊತೆಗಿದ್ದವರು ರಾಮುನನ್ನು ಮಾತ್ರ ಬಿಟ್ಟು ಪರಾರಿಯಾಗಿದ್ದರು. ಕೊನೆಗೆ ಅದೇ ದಿನ ಸಂಜೆ ಐದು ಗಂಟೆ ಸುಮಾರಿಗೆ ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ಬಳಿ ಆರೋಪಿಯನ್ನು ಬಂಧಿಸಿದ್ದಾರೆ. ಪೊಲೀಸರು ಗುರುವಾರ ರಾತ್ರಿಯೇ ಅರ್ಪಿತಾಳನ್ನು ಸುರಕ್ಷಿತವಾಗಿ ಪೋಷಕರಿಗೆ ಒಪ್ಪಿಸಿದ್ದಾರೆ. ಹಾಸನ ನಗರ ಪೊಲೀಸರ ಕಾರ್ಯಾಚರಣೆಗೆ ಕುಟುಂಬ ಸದಸ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Hassan teacher kidnap case, accused arrested by police in few hours of kidnap. The city police have arrested a man after he allegedly abducted a private school teacher for turning down his marriage proposal. The accused has been identified as Ramu, who is a close relative of the woman who was kidnapped. Hassan Town police traced the kidnapper using his mobile phone and the number plate of the car used for the kidnapping,
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm